Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಲ್ಲ ವರ್ಗದ ಜನರಿಗೆ ಸಾಮಾಜಿಕ ನ್ಯಾಯ...

ಎಲ್ಲ ವರ್ಗದ ಜನರಿಗೆ ಸಾಮಾಜಿಕ ನ್ಯಾಯ ಸಿಕ್ಕರಷ್ಟೇ ದೇಶ ಸುಂದರ: ವಂ. ಲಾರೆನ್ಸ್ ಮುಕ್ಕುಯಿ

ಬೆಳ್ತಂಗಡಿಯಲ್ಲಿ ಶಾಂತಿಗಾಗಿ ನಡಿಗೆ

ವಾರ್ತಾಭಾರತಿವಾರ್ತಾಭಾರತಿ31 Jan 2020 12:13 AM IST
share
ಎಲ್ಲ ವರ್ಗದ ಜನರಿಗೆ ಸಾಮಾಜಿಕ ನ್ಯಾಯ ಸಿಕ್ಕರಷ್ಟೇ ದೇಶ ಸುಂದರ: ವಂ. ಲಾರೆನ್ಸ್ ಮುಕ್ಕುಯಿ

ಬೆಳ್ತಂಗಡಿ: ದೇಶದ ಎಲ್ಲ ವರ್ಗದ ಜನರಿಗೂ ಸಾಮಾಜಿಕ ನ್ಯಾಯ ಸಿಕ್ಕಿದಾಗ ಮಾತ್ರ ದೇಶ ಸುಂದರವಾಗಲು ಸಾಧ್ಯ. ನಮಗೆ ಬೇಕಾಗಿರುವುದು ಕೇವಲ ಆರ್ಥಿಕ ಸುಭಧ್ರತೆ ಮಾತ್ರವಲ್ಲ ಶಾಂತಿ, ಸೌಹಾರ್ಧತೆ, ನೆಮ್ಮದಿ, ಪ್ರೀತಿ, ಭಾತೃತ್ವವೂ ಬೇಕಾಗಿದೆ ಎಂದು ಬೆಳ್ತಂಗಡಿ ಧರ್ಮಪ್ರಾಂತ್ಯದ ಧಮಾಧ್ಯಕ್ಷರಾದ ವಂ. ಲಾರೆನ್ಸ್ ಮುಕ್ಕುಯಿ ಹೇಳಿದರು. 

ಅವರು ಬೆಳ್ತಂಗಡಿಯಲ್ಲಿ ಗುರುವಾರ ಸೌಹಾರ್ಧ ವೇದಿಕೆಯ ವತಿಯಿಂದ ನಡೆದ ಶಾಂತಿಗಾಗಿ ನಡಿಗೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಗಾಂಧಿಯವರು ವಿಶ್ವ ಮಾನವರಾಗಿ ಬೆಳದವರು. ಸತ್ಯ ಸ್ಥಾಪನೆಗಾಗಿ ಆತ್ಮಬಲದಿಂದ ಶಾಂತಿಯುತ ಹೋರಾಟ ನಡೆಸಿದ್ದರು. ಅವರ ಸತ್ಯಾಗ್ರಹ ಬಾಂಬು, ಗುಂಡು ಸಂಘರ್ಷವಾಗಿರಲಿಲ್ಲ. ಅವರು ಅಹಿಂಸೆಯ ಶಾಂತಿಯ ಮೂಲಕವಾಗಿ ಜಗತ್ತನ್ನು ಗೆದ್ದರು. ಅವರ ಆದರ್ಶಗಳು ಯುವ ಪೀಳಿಗೆಗೂ ತಲುಪಬೇಕಾಗಿದೆ ಎಂದರು. 

ಶಾಂತಿ ಸಂದೇಶ ನೀಡಿದ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿ ಧರ್ಮದ ಹೆಸರಿನಲಿ, ರಾಜಕೀಯದ ಹೆಸರಿನಲ್ಲ್ಲಿ ನಾವು ಅತ್ಯಂತ ಕೆಟ್ಟದ್ದಾಗಿ ಮಾತನಾಡುತ್ತಾ ಪರಸ್ಪರ ನಿಂದಿಸಿಕೊಳ್ಳುತ್ತಿದ್ದೇವೆ. ಪ್ರಜಾಪ್ರಭುತ್ವವೆಂಬುದು ನಿಂದಿಸುವುದಕ್ಕೆ ಕೆಸರೆರೆಚುವುದಕ್ಕೆ ಅವಕಾಶ ನೀಡುವ ಸಾಧನವಾಗಿ ಮಾರ್ಪಡುತ್ತಿದೆ ಇದು ದುರಂತವಾಗಿದೆ ಎಂದರು. ಭಾರತ ಹಲವಾರು ಜನಾಂಗಗಳಿಂದ, ಭಾಷೆಗಳಿಂದ, ಸಂಸ್ಕೃತಿಗಳಿಂದ ಕೂಡಿದ ದೇಶವಾಗಿದೆ ಅದನ್ನು ನಿರಾಕರಿಸಲು ಸಾಧ್ಯವಿಲ್ಲ ಅದರ ನಡುವೆಯೇ ನಾವು ಏಕತೆಯನ್ನು ಸಾಧಿಸಬೇಕಾಗಿದೆ ಅದನ್ನು ಗಾಂಧೀಯವರು ಹೇಳಿದ್ದಾರೆ ಮಾಡಿ ತೋರಿಸಿದ್ದಾರೆ ಎಂದರು. 

ಈ ಸಂದರ್ಬದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಭೋಜರಾಜ ಹೆಗ್ಡೆ ಪಡಂಗಡಿ ಅವರನ್ನು ಸೌಹಾರ್ಧ ವೇದಿಕೆಯ ವತಿಯುಂದ ಸನ್ಮಾನಿಸಲಾಯಿತು. ತಾಲೂಕು ಮಹಿಳಾ ಮಡಲಗಳ ಒಕ್ಕೂಟದ ಅಧ್ಯಕ್ಷೆ ಶಾಂತಾ ಬಂಗೇರ ಮಾತನಾಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶಿಕ್ಷಕ ಅರವಿಂದ ಚೊಕ್ಕಾಡಿ ಅವರು ಬರೆದಿರುವ “ಗಾಂಧಿ ಮೌಲ್ಯಗಳ ನಡುವಿನ ಮೌನ” ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಪುಸ್ತಕದ ಬಗ್ಗೆ ಪತ್ರಕರ್ತ ದೇವೀಪ್ರಸಾದ್ ಮಾತನಾಡಿದರು. ಸೌಹಾರ್ಧವೇದಿಕೆಯ ಉಪಾಧ್ಯಕ್ಷ ಶ್ರೀಧರ ಜಿ ಭಿಡೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸೌಹಾರ್ಧ ವೇದಿಕೆಯ ಕಾರ್ಯದರ್ಶಿ ಬಿ. ವಿಠಲ ಶೆಟ್ಟಿ ವಂದಿಸಿದರು. 

ಬೆಳ್ತಂಗಡಿ ಅಯ್ಯಪ್ಪಗುಡಿಯಿಂದ ಹೊರಟ ಶಾಂತಿಗಾಗಿ ನಡಿಗೆ ಕಾರ್ಯಕ್ರಮಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಚಾಲನೆ ನೀಡಿದರು. ಅವರು ಮಾತನಾಡಿ  ಶಾಂತಿ, ಸೌಹಾರ್ದತೆ ಹಾಗೂ ಸಾಮರಸ್ಯದ ಸಮಾಜವನ್ನುಕಟ್ಟಲು ಸೌಹಾರ್ದ ವೇದಿಕೆಯಿಂದ ಹಮ್ಮಿಕೊಳ್ಳುವ ಕಾರ್ಯಕ್ರಮವನ್ನು ಶ್ಲಾಘಿಸಿದರು. 

ಬೆಳ್ತಂಗಡಿ ಸಂತೆಕಟ್ಟೆ ಬಳಿಯಿಂದ ಅಂಬೇಡ್ಕರ್ ಭವನದ ವರೆಗೆ ಕಾಲ್ನಾಡಿಗೆ ಜಾಥಾ ನಡೆಯಿತು. ಶ್ವೇತ ವಸ್ತ್ರಧಾರಿಗಳಾಗಿ, ಗಾಂಧೀಟೋಪಿ ಧರಿಸಿ, ಸೌಹಾರ್ದತೆಯಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. 

ಶಾಂತಿನಡಿಗೆಯಲ್ಲಿ ಸಂದರ್ಭಧರ್ಮಪ್ರಾಂತ್ಯ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿ, ಮಾಜಿ ಶಾಸಕ ಕೆ.ವಸಂತ ಬಂಗೇರ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಬೋಜರಾಜ ಹೆಗ್ಡೆ ಪಡಂಗಡಿ, ವಕೀಲ ಪ್ರತಾಪಸಿಂಹ ನಾಯಕ್, ಬಿ.ಕೆ ಧನಂಜಯ ರಾವ್, ಸೌಹಾರ್ದ ವೇದಿಕೆಯ ಶ್ರೀಧರ ಜಿ.ಭಿಡೆ, ವಿಠಲ ಶೆಟ್ಟಿ, ಉಮ್ಮರ್‍ಕುಂಞಿ ನಾಡ್ಜೆ, ವಿಕಾರ್‍ಜನರಲ್ ಜೋಸೆಫ್ ವಲಿಯಪರಂಬಿಲ್, ಫಾ.ಲಾರೆನ್ಸ್ ಪಣೋಳಿಲ್,  ಫಾ.ಬಿನೋಯ್‍ ಜೋಸೆಫ್, ವಿ.ಟಿ.ಸೆಬಾಸ್ಟಿನ್, ಎಲೋಸಿಯೆಸ್ ಲೋಬೋ, ಕಾಸೀಂ ಮಲ್ಲಿಗೆ ಮನೆ, ಹಾಗೂ ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X