ಫೆ.1ರಂದು ನಿರ್ಭಯಾ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ಇಲ್ಲ
ನ್ಯಾಯಾಲಯದಲ್ಲೇ ಕಣ್ಣೀರಿಟ್ಟ ಸಂತ್ರಸ್ತೆಯ ತಾಯಿ
ಹೊಸದಿಲ್ಲಿ: ಫೆಬ್ರವರಿ 1ರಂದು ನಡೆಯಬೇಕಿದ್ದ ನಿರ್ಭಯಾ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ಗಲ್ಲು ಶಿಕ್ಷೆಯನ್ನು ದಿಲ್ಲಿ ಹೈಕೋರ್ಟ್ ಇಂದು ಮುಂದಿನ ಆದೇಶದವರೆಗೆ ಮುಂದೂಡಿದೆ.
ಫೆಬ್ರವರಿ 1ರಂದು ನಡೆಯಲಿದ್ದ ಗಲ್ಲುಶಿಕ್ಷೆಗೆ ತಡೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿ ನ್ಯಾಯಾಧೀಶ ಧರ್ಮೇಂದರ್ ರಾಣಾ ಈ ಆದೇಶ ನೀಡಿದರು.
ನ್ಯಾಯಾಧೀಶರು ಈ ಆದೇಶ ನೀಡಿದ ನಂತರ ನಿರ್ಭಯಾ ತಾಯಿ ಆಶಾ ದೇವಿ ಮಾಧ್ಯಮಗಳ ಮುಂದೆ ಕಣ್ಣೀರಿಟ್ಟರು. "ಆರೋಪಿಗಳ ಪರ ವಕೀಲ ಎ.ಪಿ. ಸಿಂಗ್ 'ಗಲ್ಲು ಶಿಕ್ಷೆ ಯಾವತ್ತೂ ನಡೆಯುವುದಿಲ್ಲ" ಎಂದು ತನಗೆ ಹೇಳಿದರು ಎಂದು ಆಶಾ ದೇವಿ ಆರೋಪಿಸಿದರು.
Next Story