Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾಳೆ ಕೇಂದ್ರ ಬಜೆಟ್: ಜನರ...

ನಾಳೆ ಕೇಂದ್ರ ಬಜೆಟ್: ಜನರ ನಿರೀಕ್ಷೆಗಳೇನು ?

ವಾರ್ತಾಭಾರತಿವಾರ್ತಾಭಾರತಿ31 Jan 2020 9:53 PM IST
share
ನಾಳೆ ಕೇಂದ್ರ ಬಜೆಟ್: ಜನರ ನಿರೀಕ್ಷೆಗಳೇನು ?

ಹೊಸದಿಲ್ಲಿ, ಜ.31: ಕೇಂದ್ರ ವಿತ್ತಸಚಿವೆ ಅವರು 2020-21ನೇ ಸಾಲಿನ ಕೇಂದ್ರ ಸರಕಾರದ ಮುಂಗಡಪತ್ರವನ್ನು ಶನಿವಾರ 11 ಗಂಟೆಗೆ ಲೋಕಸಭೆಯಲ್ಲಿ ಮಂಡಿಸಲಿದ್ದಾರೆ.

ಇದು ಮೇ 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದು ಸತತ ಎರಡನೇ ಬಾರಿಗೆ ಅಧಿಕಾರಕ್ಕೇರಿದ ಮೋದಿ ಸರಕಾರದ ಎರಡನೇ ಮುಂಗಡಪತ್ರವಾಗಿದೆ. ಇದು ಸೀತಾರಾಮನ್ ಅವರ ಎರಡನೇ ಬಜೆಟ್ ಕೂಡ ಹೌದು. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಸೀತಾರಾಮನ್‌ಗಿಂತ ಮೊದಲು ಕೇಂದ್ರ ಬಜೆಟ್ (1970)ನ್ನು ಮಂಡಿಸಿದ ಏಕೈಕ ಮಹಿಳೆಯಾಗಿದ್ದರು.

2016ರವರೆಗೂ ಕೇಂದ್ರ ಮುಂಗಡಪತ್ರವನ್ನು ಪ್ರತಿ ವರ್ಷದ ಫೆಬ್ರವರಿ ತಿಂಗಳ ಕೊನೆಯ ದಿನ ಮಂಡಿಸಲಾಗುತ್ತಿತ್ತು. 2017ರಲ್ಲಿ ಈ ಪದ್ಧತಿಯನ್ನು ಬದಲಿಸಿದ ಮೋದಿ ನೇತೃತ್ವದ ಎನ್‌ಡಿಎ ಸರಕಾರವು ಆಗಿನಿಂದ ಪ್ರತಿ ವರ್ಷದ ಫೆ.1ರಂದು ಮುಂಗಡಪತ್ರವನ್ನು ಮಂಡಿಸುತ್ತಿದೆ. ನೂತನ ಪದ್ಧತಿಯಡಿ ಮೊದಲ ಮುಂಗಡಪತ್ರವನ್ನು ಆಗಿನ ವಿತ್ತಸಚಿವ ಅರುಣ ಜೇಟ್ಲಿ ಅವರು ಮಂಡಿಸಿದ್ದರು.

ಮುಂಗಡಪತ್ರ ನಿರೀಕ್ಷೆಗಳು

ಸುಮಾರು ಒಂದು ವರ್ಷದಿಂದ ಕಾಡುತ್ತಿರುವ ಆರ್ಥಿಕ ಮಂದಗತಿಯ ಹಿನ್ನೆಲೆಯಲ್ಲಿ ದೇಶವು ಸಂಕಷ್ಟವನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ಎಲ್ಲರ ಕಣ್ಣುಗಳು ಶನಿವಾರ ಸೀತಾರಾಮನ್ ಮಂಡಿಸಲಿರುವ ಮುಂಗಡಪತ್ರದ ಮೇಲೆ ನೆಟ್ಟಿವೆ. ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲು ಮತ್ತು ನಿರುದ್ಯೋಗ ಸ್ಥಿತಿ ಬಿಗಡಾಯಿಸಿರುವ ಹಿನ್ನೆಲೆಯಲ್ಲಿ ಉದ್ಯೋಗ ಸೃಷ್ಟಿಗಾಗಿ ಕ್ರಮಗಳನ್ನು ಸರಕಾರವು ಮುಂಗಡಪತ್ರದಲ್ಲಿ ಘೋಷಿಸುವ ನಿರೀಕ್ಷೆಯಿದೆ. ಕಳೆದ ವರ್ಷ ದೇಶದಲ್ಲಿ ನಿರುದ್ಯೋಗ ಪ್ರಮಾಣವು ಕಳೆದ 45 ವರ್ಷಗಳಲ್ಲಿಯೇ ಗರಿಷ್ಠ ಮಟ್ಟವನ್ನು ತಲುಪಿದ್ದು ಸರಕಾರದ ಕಳವಳವನ್ನು ಇನ್ನಷ್ಟು ಹೆಚ್ಚಿಸಿತ್ತು,ಜೊತೆಗೆ ದೇಶವ್ಯಾಪಿ ಎಲ್ಲ ವರ್ಗಗಳಿಂದ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದವು.

ಸೀತಾರಾಮನ್ ಅವರು ವೈಯಕ್ತಿಕ ಆದಾಯ ತೆರಿಗೆ ಮಿತಿಯನ್ನು ಐದು ಲಕ್ಷಕ್ಕೆ ಹೆಚ್ಚಿಸುತ್ತಾರೆ ಎಂದು ವೇತನದಾರ ವರ್ಗವು ನಿರೀಕ್ಷಿಸಿದೆ. ಪ್ರಸಕ್ತ ಆದಾಯ ತೆರಿಗೆ ಮಿತಿಯು 2.5 ಲ.ರೂ. ಮತ್ತು ಹಿರಿಯ ನಾಗರಿಕರಿಗೆ ಮೂರು ಲ.ರೂ.ಆಗಿದೆ.

ಬೇಡಿಕೆ ಮತ್ತು ಬಳಕೆಯನ್ನು ಹೆಚ್ಚಿಸಲು ಸರಕಾರದಿಂದ ಪರಿಣಾಮಕಾರಿ ಕ್ರಮಗಳ ನಿರೀಕ್ಷೆಯಲ್ಲಿ ದೇಶದ ಕಾರ್ಪೊರೇಟ್ ಕ್ಷೇತ್ರವಿದೆ. ಕಳೆದೊಂದು ವರ್ಷದಿಂದ ಕಾರ್ಪೊರೇಟ್ ಕ್ಷೇತ್ರವು ಮಂದಗತಿಯ ಬೇಡಿಕೆಯಿಂದಾಗಿ ಹೈರಾಣಾಗಿದೆ.

ಆಟೊಮೊಬೈಲ್ ಆರ್ಥಿಕ ಹಿಂಜರಿತದಿಂದ ಕಂಗೆಟ್ಟಿರುವ ಇನ್ನೊಂದು ಪ್ರಮುಖ ಕ್ಷೇತ್ರವಾಗಿದೆ. ಬೇಡಿಕೆ ಕುಸಿದಿರುವುದು ಆಟೊಮೊಬೈಲ್ ಕ್ಷೇತ್ರಕ್ಕೆ ಮಾತ್ರವಲ್ಲ,ವಾಹನ ಬಿಡಿಭಾಗಗಳ ಕೈಗಾರಿಕೆಗೂ ಹೊಡೆತ ನೀಡಿದೆ. ಹಲವಾರು ಕಾರು ತಯಾರಿಕೆ ಕಂಪನಿಗಳು ತಮ್ಮ ಸಾವಿರಾರು ಉದ್ಯೋಗಿಗಳನ್ನು ವಜಾ ಮಾಡಿದ್ದು ಮಾತ್ರ ಅಲ್ಲ,ತಮ್ಮ ಹಲವಾರು ತಯಾರಿಕೆ ಘಟಕಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವ ಅನಿವಾರ್ಯತೆಗೂ ಒಳಗಾಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X