Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭಾಷೆಗಳ ಬೆಳವಣಿಗೆಗೆ ಇನ್ನಷ್ಟು...

ಭಾಷೆಗಳ ಬೆಳವಣಿಗೆಗೆ ಇನ್ನಷ್ಟು ಒತ್ತುಕೊಡುವ ಅಗತ್ಯವಿದೆ: ಸಮ್ಮೇಳನಾಧ್ಯಕ್ಷ ನಾಗೇಶ್ ಕಾಲೂರು

ಕೊಡಗು ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ31 Jan 2020 11:23 PM IST
share
ಭಾಷೆಗಳ ಬೆಳವಣಿಗೆಗೆ ಇನ್ನಷ್ಟು ಒತ್ತುಕೊಡುವ ಅಗತ್ಯವಿದೆ: ಸಮ್ಮೇಳನಾಧ್ಯಕ್ಷ ನಾಗೇಶ್ ಕಾಲೂರು

ಮಡಿಕೇರಿ, ಜ.31: ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸೋಮವಾರಪೇಟೆ ತಾಲೂಕು ನಿಡ್ತ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಶುಕ್ರವಾರ ಕೊಡಗು ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಿತು. 

ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೂರು ನಾಗೇಶ್ ಅವರು ಭಾಷಾ ಕಲಿಕೆ ಒಂದು ಕೌಶಲ್ಯ, ಎಳವೆಯಲ್ಲಿ ಮಕ್ಕಳು ಹಲವಾರು ಭಾಷೆಗಳನ್ನು ಒಟ್ಟಿಗೆ ಕಲಿಯುವ ಕೌಶಲ್ಯ ಹೊಂದಿರುತ್ತಾರೆ. ಭಾಷೆ ಬಾಂಧವ್ಯ ಹೆಚ್ಚಿಸುತ್ತದೆ. ಎಷ್ಟು ಹೆಚ್ಚು ಭಾಷೆಗಳನ್ನು ಕಲಿಯುತ್ತೇವೋ ಅಷ್ಟು ಬಾಂಧವ್ಯಗಳು ನಮ್ಮದಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. 

ಯಾವುದೇ ವ್ಯಕ್ತಿ ತನ್ನ ಮಾತೃ ಭಾಷೆಯನ್ನು ಕೇಳಿದಾಕ್ಷಣ ಪುಳಕಿತನಾಗುತ್ತಾನೆ. ತನ್ನ ಭಾವನೆಗಳನ್ನು ಹಂಚಿಕೊಳ್ಳಲು ತವಕಿಸುತ್ತಾನೆ. ಅಂದರೆ ಒಬ್ಬ ವ್ಯಕ್ತಿ ತನ್ನದೇ ಮಾತೃ ಭಾಷೆಯಲ್ಲಿ ಮಾತ್ರ ಹೆಚ್ಚು ಸ್ಪಂದಿಸಲು ಇಷ್ಟಪಡುತ್ತಾನೆ. ಪರಸ್ಪರರೊಂದಿಗೆ ವ್ಯವಹರಿಸಲು, ತನ್ಮೂಲಕ ಬದುಕನ್ನು ಸಹ್ಯವಾಗಿಸಿಕೊಳ್ಳಲು ನಮಗೆ ಹೆಚ್ಚು ಭಾಷೆಗಳು ತಿಳಿದಿದ್ದರೆ ಒಳ್ಳೆಯದು. ಜಿಲ್ಲೆಯಲ್ಲಿ ಇನ್ನೂ ಬೆಳಕಿಗೆ ಬಾರದಿರುವ ಐತಿಹ್ಯಗಳು, ಆಚರಣೆಗಳು ಸಾಕಷ್ಟಿದ್ದು, ಇವುಗಳ ಕುರಿತಾಗಿ ಸಂಶೋಧನೆಗೆ ಅವಕಾಶವಿದೆ ಎಂದು ನಾಗೇಶ್ ಕಾಲೂರು ಅವರು ಹೇಳಿದರು. 

ಬರಹಗಾರರು, ಲೇಖಕರು ಈ ದೇಶದ ಸಾಮಾಜಿಕ ಬದುಕಿನ ಕೈಗನ್ನಡಿಗಳಾಗಿರುವುದರಿಂದ ಜ್ವಲಂತ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವುದಲ್ಲದೆ ಅದರ ಪರಿಹಾರೋಪಾಯದ ಬಗೆಗೂ ಮಾರ್ಗದರ್ಶಕರಾಗಿರಬೇಕಾಗುತ್ತದೆ. ಯಾವುದೇ ಪಕ್ಷ, ಪಂಗಡಗಳ ಮರ್ಜಿಗೆ ಒಳಗಾಗದೆ ನಾವೆಲ್ಲರೂ ಭಾರತೀಯರೆಂಬ ನಿಲುವಿನೊಂದಿಗೆ ದೇಶವನ್ನು ಸರ್ವ ಜನಾಂಗದ ಶಾಂತಿಯ ತೋಟವಾಗಿಸುವುದರಲ್ಲಿ ಭಾಷೆ, ಸಾಹಿತ್ಯವನ್ನು ನಿಷ್ಪಕ್ಷವಾಗಿ ದುಡಿಸಿಕೊಳ್ಳುವತ್ತ ಮುಂದಿನ ಪೀಳಿಗೆಗೆ ಮಾರ್ಗದರ್ಶಕ ಆಗಿರಬೇಕಾಗಿದೆ ಎಂದು ಸಮ್ಮೇಳನಾಧ್ಯಕ್ಷರು ನುಡಿದರು. 

ರಾಜ್ಯದ ಇತರೆಡೆಗಳಿಗೆ ಹೋಲಿಸಿದಾಗ ಎಲ್ಲಾ ದೃಷ್ಟಿಯಿಂದಲೂ ಕೊಡಗು ವಿಭಿನ್ನವಾಗಿ ನಿಲ್ಲುತ್ತದೆ. ಅದಕ್ಕೆ ಕಾರಣ ಇಲ್ಲಿನ ಬಹುಭಾಷಿಕ ಸಮುದಾಯ ಮತ್ತು ಸಂಸ್ಕೃತಿ, ಕನ್ನಡ, ಕೊಡವ, ಅರೆಭಾಷೆ, ತುಳು, ಬ್ಯಾರಿ, ಮಲಯಾಳಂ, ತಮಿಳು, ಹವ್ಯಕ, ಉರ್ದು ಹೀಗೆ ಪಟ್ಟಿ ಬೆಳೆಯುತ್ತದೆ. ಇದರಲ್ಲಿ ಕೆಲವು ಭಾಷೆಗಳಿಗೆ ಕನ್ನಡವೇ ಲಿಪಿಯಾಗಿರುವುದರಿಂದ ಇಲ್ಲಿ ಪರೋಕ್ಷವಾಗಿ ಆಯಾಯ ಭಾಷೆಗಳ ಮೂಲಕ ಕನ್ನಡದ ಪೋಷಣೆಯೂ ನಡೆಯುತ್ತಿದೆ. ಕನ್ನಡ ಹಿರಿಯಣ್ಣನಾಗಿದ್ದುಕೊಂಡು ಈ ಭಾಷೆಗಳ ಬೆಳವಣಿಗೆಗೆ ಇನ್ನಷ್ಟು ಒತ್ತುಕೊಡುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು. 

ಕನ್ನಡ ಭಾಷೆಯ ಪ್ರಾಚೀನತೆಯೊಂದಿಗೆ ಕನ್ನಡ ನಾಡಿನ ಎಲ್ಲೆಗಳನ್ನು ಕೂಡ ಕವಿರಾಜಮಾರ್ಗದಲ್ಲಿ ಹೇಳಲಾಗಿರುವುದು ಆಸಕ್ತಿದಾಯಕ. ಎರಡು ಸಾವಿರ ವರ್ಷಗಳಿಗೂ ಹಿಂದಿನಿಂದಲೇ ಕಾವೇರಿಯ ಮಡಿಲಲ್ಲಿ ಕನ್ನಡ ಇತ್ತು ಎನ್ನುವುದಕ್ಕೆ ಇದು ನಿದರ್ಶನ. ಹನ್ನೊಂದನೇ ಶತಮಾನದ ಶಿಲಾಶಾಸನದಲ್ಲಿ ಕೂಡಾ ಕೊಡಗಿನವರ ಉಲ್ಲೇಖವಿದೆ ಎಂದರು. 

ಕೊಡಗಿನ ಗೌರಮ್ಮ ಸಣ್ಣಕಥೆಗಳ ಮೂಲಕ ಗಮನ ಸೆಳೆಯುತ್ತಾರೆ. ಭಾರತೀಸುತ ತಮ್ಮ ಕಾದಂಬರಿಗಳಲ್ಲಿ ಕೊಡಗಿನ ಸಾಂಸ್ಕೃತಿಕ ಹಿರಿಮೆಯನ್ನು ದಾಖಲಿಸುತ್ತಾರೆ. ಕೂತಂಡ ಪಾರ್ವತಿ ಪೂವಯ್ಯ, ಕಾಕೆಮಾನಿ, ಬಿ.ಡಿ.ಗಣಪತಿ ಇತರರು ಕನ್ನಡದ ಬೆಳವಣಿಗೆಯಲ್ಲಿ ಶ್ರಮಿಸಿದ್ದಾರೆ. ಪಂಜೆಯವರ ಹುತ್ತರಿ ಹಾಡಂತೂ ಇಂದಿಗೂ ಜನಮನ್ನಣೆ ಉಳಿಸಿಕೊಂಡಿದೆ. ಕನ್ನಡ ನಿಘಂಟು ಕರ್ತರಾದ ರೆವರೆಂಟ್ ಕಿಟ್ಟೆಲ್ ಅವರು ಕೂಡಾ ಕೊಡಗಿನಲ್ಲಿದ್ದುಕೊಂಡು ಕನ್ನಡದ ಕೆಲಸ ಮಾಡಿದ್ದಾರೆ ಎಂದು ನಾಗೇಶ್ ಕಾಲೂರು ಅವರು ಸ್ಮರಿಸಿದರು.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X