Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಜೆಟ್: ಕ್ರೀಡಾ ಕ್ಷೇತ್ರಕ್ಕೆ 2826.92...

ಬಜೆಟ್: ಕ್ರೀಡಾ ಕ್ಷೇತ್ರಕ್ಕೆ 2826.92 ಕೋಟಿ ಅನುದಾನ

ವಾರ್ತಾಭಾರತಿವಾರ್ತಾಭಾರತಿ1 Feb 2020 7:29 PM IST
share
ಬಜೆಟ್: ಕ್ರೀಡಾ ಕ್ಷೇತ್ರಕ್ಕೆ 2826.92 ಕೋಟಿ ಅನುದಾನ

ಹೊಸದಿಲ್ಲಿ, ಫೆ.1: ಮುಂದಿನ ಆರ್ಥಿಕ ವರ್ಷಕ್ಕೆ 2826.92 ಕೋಟಿ ರೂ. ಕ್ರೀಡಾಬಜೆಟ್ ನಿಗದಿಗೊಳಿಸಲಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಸರಕಾರ ಕ್ರೀಡಾಕ್ಷೇತ್ರಕ್ಕೆ ಹೆಚ್ಚುವರಿ 50 ಕೋಟಿ ರೂ. ಅನುದಾನ ಒದಗಿಸಿದೆ.

 ‘ಖೇಲೊ ಇಂಡಿಯಾ’ ಯೋಜನೆಗೆ ಈ ಬಾರಿಯ ಬಜೆಟ್‌ನಲ್ಲಿ ಭರ್ಜರಿ ಅನುದಾನ ಲಭಿಸಿದೆ. ಕಳೆದ ಬಜೆಟ್‌ಗಿಂತ ಹೆಚ್ಚುವರಿ 312.42 ಕೋಟಿ ರೂ. ಅನುದಾನ ನೀಡಲಾಗಿದ್ದು 890.42 ಕೋಟಿ ರೂ. ಅನುದಾನ ನಿಗದಿಯಾಗಿದೆ. ಕಳೆದ ವರ್ಷ 578 ಕೋಟಿ ರೂ. ಪರಿಷ್ಕೃತ ಅನುದಾನ ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಕ್ರೀಡಾಕ್ಷೇತ್ರದ ಇತರ ವಿಭಾಗಗಳಿಗೆ ಅನುದಾನ ಕಡಿಮೆಯಾಗಲಿದೆ. ರಾಷ್ಟ್ರೀಯ ಕ್ರೀಡಾ ಒಕ್ಕೂಟಕ್ಕೆ ಕಳೆದ ಬಾರಿಗಿಂತ 55 ಕೋಟಿ ರೂ. ಕಡಿಮೆ ಅನುದಾನ ಒದಗಿಸಲಾಗಿದ್ದು 245 ಕೋಟಿ ರೂ. ಅನುದಾನ ನಿಗದಿಗೊಳಿಸಲಾಗಿದೆ.

 ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ನಿಗದಿಯಾಗಿರುವ ಅನುದಾನವನ್ನೂ 41 ಕೋಟಿ ರೂ. ಕಡಿಮೆಗೊಳಿಸಲಾಗಿದ್ದು 70 ಕೋಟಿ ರೂ. ಅನುದಾನ ನಿಗದಿಯಾಗಿದೆ. ರಾಷ್ಟ್ರೀಯ ಕ್ರೀಡಾ ಅಭಿವೃದ್ಧಿ ನಿಧಿಗೆ ನೀಡುವ ಅನುದಾನವನ್ನೂ (ಈ ಹಿಂದೆ 77.15 ಕೋಟಿ ರೂ.) 50 ಕೋಟಿ ರೂ.ಗೆ ನಿಗದಿಗೊಳಿಸಲಾಗಿದೆ. ಭಾರತೀಯ ಕ್ರೀಡಾ ಪ್ರಾಧಿಕಾರ(ಎಸ್‌ಎಐ)ಗೂ ಕಡಿಮೆ ಅನುದಾನ ನಿಗದಿಗೊಳಿಸಲಾಗಿದ್ದು 500 ಕೋಟಿ ರೂ.(ಕಳೆದ ಬಾರಿ 615 ಕೋಟಿ ರೂ) ನಿಗದಿಯಾಗಿದೆ. ಎಸ್‌ಎಐ ರಾಷ್ಟ್ರೀಯ ಕ್ರೀಡಾ ಶಿಬಿರದ ವ್ಯವಸ್ಥಾಪನೆ, ಮೂಲಸೌಕರ್ಯ ಒದಗಿಸುವುದು, ಕ್ರೀಡಾ ಸಾಧನ , ಕ್ರೀಡಾಪಟುಗಳ ಪ್ರಯಾಣ ವ್ಯವಸ್ಥೆ ಇತ್ಯಾದಿಗಳ ನಿರ್ವಹಣೆ ನಡೆಸುವ ನೋಡಲ್ ಸಂಸ್ಥೆಯಾಗಿದೆ .

2010ರ ಕಾಮನ್‌ವೆಲ್ತ್ ಕ್ರೀಡಾಕೂಟದ ಸಂದರ್ಭ ದಿಲ್ಲಿಯಲ್ಲಿರುವ ಎಸ್‌ಎಐ ಕ್ರೀಡಾಂಗಣದ ನವೀಕರಣ ಕಾರ್ಯದ ಅನುದಾನವನ್ನು 75 ಕೋಟಿ ರೂ.ಗೆ ಇಳಿಸಲಾಗಿದೆ(ಕಳೆದ ವರ್ಷ 96 ಕೋಟಿ ರೂ.). ಕ್ರೀಡಾಪಟುಗಳಿಗಾಗಿನ ರಾಷ್ಟ್ರೀಯ ಕಲ್ಯಾಣ ನಿಧಿಗೆ ಈ ಹಿಂದಿನಂತೆಯೇ 2 ಕೋಟಿ ಅನುದಾನ ನಿಗದಿಯಾಗಿದ್ದರೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಕ್ರೀಡಾಸೌಲಭ್ಯ ಹೆಚ್ಚಿಸುವ ಅನುದಾನವನ್ನೂ ಈ ಹಿಂದಿನಂತೆಯೇ 50 ಕೋಟಿ ರೂ.ಗೆ ನಿಗದಿಗೊಳಿಸಲಾಗಿದೆ. ಲಕ್ಷ್ಮೀಬಾ ನ್ಯಾಷನಲ್ ರಾಷ್ಟ್ರೀಯ ದೈಹಿಕ ಶಿಕ್ಷಣ ಸಂಸ್ಥೆಗೆ ಕಳೆದ ವರ್ಷಕ್ಕಿಂತ 5 ಕೋಟಿ ರೂ. ಅಧಿಕ ಅನುದಾನ ಒದಗಿಸಿ 55 ಕೋಟಿ ರೂ.ಗೆ ನಿಗದಿಗೊಳಿಸಲಾಗಿದೆ. 2019-20ರ ಬಜೆಟ್‌ನಲ್ಲಿ ಕ್ರೀಡಾಕ್ಷೇತ್ರಕ್ಕೆ 2216.92 ಕೋಟಿ ರೂ. ಒದಗಿಸಲಾಗಿದ್ದರೂ ಬಳಿಕ ಈ ಮೊತ್ತವನ್ನು ಪರಿಷ್ಕರಿಸಿ 2776.92 ಕೋಟಿ ರೂ.ಗೆ ನಿಗದಿಗೊಳಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X