Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆದಾಯ ತೆರಿಗೆಯಲ್ಲಿ ಕಡಿತ : 2 ಹೊಸ ಆದಾಯ...

ಆದಾಯ ತೆರಿಗೆಯಲ್ಲಿ ಕಡಿತ : 2 ಹೊಸ ಆದಾಯ ತೆರಿಗೆ ಹಂತಗಳ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ1 Feb 2020 8:02 PM IST
share
ಆದಾಯ ತೆರಿಗೆಯಲ್ಲಿ ಕಡಿತ : 2 ಹೊಸ ಆದಾಯ ತೆರಿಗೆ ಹಂತಗಳ ಘೋಷಣೆ

ಹೊಸದಿಲ್ಲಿ, ಫೆ. 1: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ 2020-21ರ ಬಜೆಟ್‌ನಲ್ಲಿ ವೈಯಕ್ತಿಕ ಆದಾಯ ತೆರಿಗೆಯಲ್ಲಿ ಕಡಿತಗಳನ್ನು ಘೋಷಿಸಿದರು, ಕಡಿಮೆ ವೆಚ್ಚದ ಮನೆಗಳ ತೆರಿಗೆ ವಿನಾಯಿತಿಗಳನ್ನು ವಿಸ್ತರಿಸಿದರು ಹಾಗೂ ಡಿವಿಡೆಂಡ್ ವಿತರಣೆಯಲ್ಲಿ ಕಂಪೆನಿಗಳಿಗೆ ರಿಯಾಯಿತಿಗಳನ್ನು ನೀಡಿದರು.

ವೈಯಕ್ತಿಕ ಆದಾಯ ತೆರಿಗೆ ದರದಲ್ಲಿ ಐಚ್ಛಿಕ ವಿನಾಯಿತಿಯನ್ನು ಘೋಷಿಸಿದ ನಿರ್ಮಲಾ, 15 ಶೇಕಡ ಮತ್ತು 25 ಶೇಕಡಗಳ ನೂತನ ತೆರಿಗೆ ಹಂತಗಳನ್ನು ಸೃಷ್ಟಿಸಿದರು. ಇವುಗಳ ಜೊತೆಗೆ ಪ್ರಸಕ್ತ 10 ಶೇಕಡ, 20 ಶೇಕಡ ಮತ್ತು 30 ಶೇಕಡ ತೆರಿಗೆ ಹಂತಗಳು ಮುಂದುವರಿಯಲಿವೆ.

ನಿರ್ದಿಷ್ಟ ಕಡಿತಗಳು ಅಥವಾ ವಿನಾಯಿತಿಗಳನ್ನು ಪಡೆಯದ ವ್ಯಕ್ತಿಗಳಿಗಾಗಿ ನೂತನ ಆದಾಯ ತೆರಿಗೆ ದರ ಹಂತಗಳನ್ನು ಸೃಷ್ಟಿಸಲಾಗಿದೆ.

ನೂತನ ಪ್ರಸ್ತಾಪಿತ ತೆರಿಗೆ ಹಂತಗಳ ವಿವರಗಳು ಹೀಗಿವೆ:

*ವಾರ್ಷಿಕ 2.5 ಲಕ್ಷ ರೂ.ವರೆಗಿನ ಆದಾಯಕ್ಕೆ ತೆರಿಗೆಯಿಲ್ಲ

*ವಾರ್ಷಿಕ 2.5 ಲಕ್ಷ ರೂ.ನಿಂದ 5 ಲಕ್ಷ ರೂ.ವರೆಗಿನ ಆದಾಯಕ್ಕೆ 5 ಶೇಕಡ ತೆರಿಗೆ

*ವಾರ್ಷಿಕ 5 ಲಕ್ಷ ರೂ.ಯಿಂದ 7.5 ಲಕ್ಷ ರೂ.ವರೆಗಿನ ಆದಾಯಕ್ಕೆ 10 ಶೇಕಡ ತೆರಿಗೆ

*7.5 ಲಕ್ಷ ರೂ.ನಿಂದ 10 ಲಕ್ಷ ರೂ.ವರೆಗಿನ ಆದಾಯಕ್ಕೆ 15 ಶೇಕಡ ತೆರಿಗೆ

*10 ಲಕ್ಷ ರೂ. ಮತ್ತು 12.5 ಲಕ್ಷ ರೂ. ನಡುವಿನ ಆದಾಯಕ್ಕೆ 20 ಶೇಕಡ ತೆರಿಗೆ

*12.5 ಲಕ್ಷ ರೂ. ಮತ್ತು 15 ಲಕ್ಷ ರೂ. ನಡುವಿನ ಆದಾಯಕ್ಕೆ 25 ಶೇಕಡ ತೆರಿಗೆ

*ವಾರ್ಷಿಕ ಆದಾಯ 15 ಶೇಕಡಕ್ಕಿಂತ ಹೆಚ್ಚಾಗಿದ್ದರೆ 30 ಶೇಕಡ ತೆರಿಗೆ.

ಅದೇ ವೇಳೆ, ನೂತನ ತೆರಿಗೆ ದರದಂತೆ ಆದಾಯ ತೆರಿಗೆ ಪಾವತಿಸುವವರಿಗೆ ಸೆಕ್ಷನ್ 80ಸಿ ಮತ್ತು 80ಡಿ ಅಡಿಯಲ್ಲಿ ಸಿಗುವ ವಿನಾಯಿತಿ/ಕಡಿತ, ಎಲ್‌ಟಿಸಿ, ಮನೆ ಬಾಡಿಗೆ ಭತ್ತೆ, ಮನರಂಜನೆ ಭತ್ತೆ ಮತ್ತು ವೃತ್ತಿ ತೆರಿಗೆಯಲ್ಲಿ ಕಡಿತ ಹಾಗೂ ಸ್ವಯಂ ವಾಸಿಸುತ್ತಿರುವ ಅಥವಾ ಖಾಲಿ ಮನೆಗಳ ಮೇಲೆ ತೆರಿಗೆ ವಿನಾಯಿತಿ ಲಭಿಸುವುದಿಲ್ಲ.

ಪ್ರಸಕ್ತ, 2.5 ಲಕ್ಷ ರೂ.ವರೆಗಿನ ವಾರ್ಷಿಕ ಆದಾಯಕ್ಕೆ ಆದಾಯ ತೆರಿಗೆ ಇಲ್ಲ. 2.5 ಲಕ್ಷ ಮತ್ತು 5 ಲಕ್ಷ ರೂ. ನಡುವಿನ ಆದಾಯಕ್ಕೆ 5 ಶೇಕಡ, 5 ಲಕ್ಷ ರೂ. ಮತ್ತು 10 ಲಕ್ಷ ರೂ. ನಡುವಿನ ಆದಾಯಕ್ಕೆ 20 ಶೇಕಡ ಹಾಗೂ 10 ಲಕ್ಷ ರೂ.ಗಿಂತ ಹೆಚ್ಚಿನ ವಾರ್ಷಿಕ ಆದಾಯಕ್ಕೆ 30 ಶೇಕಡ ಆದಾಯ ತೆರಿಗೆ ವಿಧಿಸಲಾಗುತ್ತಿದೆ.

‘‘ನೂತನ ಆದಾಯ ತೆರಿಗೆ ವ್ಯವಸ್ಥೆಯು ತೆರಿಗೆದಾರರಿಗೆ ಐಚ್ಛಿಕವಾಗಿದೆ ಎಂದು ನಿರ್ಮಲಾ ಸೀತಾರಾಮನ್ ನುಡಿದರು.

‘‘ಪ್ರಸ್ತಾಪಿತ ತೆರಿಗೆ ವ್ಯವಸ್ಥೆಯು ತೆರಿಗೆ ಪಾವತಿದಾರರಿಗೆ, ಅದರಲ್ಲೂ ಮುಖ್ಯವಾಗಿ ಮಧ್ಯಮ ವರ್ಗದವರಿಗೆ ನೆಮ್ಮದಿ ನೀಡಲಿದೆ’’ ಎಂದು ಅವರು ಅಭಿಪ್ರಾಯಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X