Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಹಕಾರಿ ಸಂಸ್ಥೆಗಳ ಬೈಲಾ...

ಸಹಕಾರಿ ಸಂಸ್ಥೆಗಳ ಬೈಲಾ ತಿದ್ದುಪಡಿಗೊಳಿಸಿ-ಶ್ರೀಧರ್ ಶೆಟ್ಟಿ ಆಗ್ರಹ

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ ಹಸಿರು ಸೇನೆ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ1 Feb 2020 8:48 PM IST
share
ಸಹಕಾರಿ ಸಂಸ್ಥೆಗಳ ಬೈಲಾ ತಿದ್ದುಪಡಿಗೊಳಿಸಿ-ಶ್ರೀಧರ್ ಶೆಟ್ಟಿ ಆಗ್ರಹ

ಪುತ್ತೂರು: ಈಗಿನ ಸಹಕಾರಿ ಸಂಸ್ಥೆಗಳ ಬೈಲಾಗಳು ರೈತರಿಗೆ ವಿರೋಧಿಯಾಗಿದ್ದು, ಅದನ್ನು ರೈತರಿಗೆ ಸಂಬಂಧಪಟ್ಟಂತೆ ತಿದ್ದುಪಡಿ ಮಾಡಬೇಕು. ಜಂಟಿ ಖಾತೆಯಲ್ಲಿರುವ ಎಲ್ಲಾ ರೈತರ ಸಾಲ ಸೌಲಭ್ಯಗಳನ್ನು ನೀಡಬೇಕು. 2016-17 ನೇ ಸಾಲಿನಲ್ಲಿ ಬೆಳೆ ವಿಮೆ ಕಟ್ಟಿದವರಿಗೆ ಕೂಡಲೇ ಮಂಜೂರು ಮಾಡಬೇಕು ಎಂದು ರೈತ ಸಂಘ ಜಿಲ್ಲಾಧ್ಯಕ್ಷ ಬಿ. ಶ್ರೀಧರ ಶೆಟ್ಟಿ ಹೇಳಿದರು.

ಅವರು ಶನಿವಾರ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ, ಹಸಿರು ಸೇನೆ ದ. ಕ. ಜಿಲ್ಲಾ ಸಮಿತಿಯ ವತಿಯಿಂದ ಪುತ್ತೂರು ಮಿನಿ ವಿಧಾನಸೌಧದ ಮುಂಬಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ಈಗಿನ ಸಹಕಾರಿ ಸಂಸ್ಥೆಗಳ ಬೈಲಾಗಳು ರೈತರಿಗೆ ವಿರೋಧಿಯಾಗಿದ್ದು, ಅದನ್ನು ರೈತಸ್ನೇಹಿ ಮಾಡಬೇಕು. 2016-17 ನೇ ಸಾಲಿನಲ್ಲಿ ಬೆಳೆ ವಿಮೆ ಕಟ್ಟಿದವರಿಗೆ ಕೂಡಲೇ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.

ಸುಸ್ತಿದಾರರಾಗಿರುವ ಜಿಲ್ಲೆಯ ಸುಮಾರು 150 ಮಂದಿ ರೈತರ 2009 ಕ್ಕಿಂತ ಹಿಂದಿನ ಬೆಳೆಸಾಲ, ದೀರ್ಘಾವಧಿ ಸೇರಿದಂತೆ ಎಲ್ಲಾ ಸಾಲಗಳನ್ನು ಕೂಡಲೇ ಮನ್ನಾ ಮಾಡಲು ಸರಕಾರ ಕ್ರಮ ಕೈಗೊಳ್ಳಬೇಕು.  2018 ರ ಅಡಿಕೆ ಕೊಳೆರೋಗ ಪರಿಹಾರವನ್ನು ಶೇ.50 ರಷ್ಟು ಮಾತ್ರ ಕೊಟ್ಟಿದ್ದು, ಉಳಿಕೆ 50 ಶೇ. ಪರಿಹಾರವನ್ನು ಕೂಡಲೇ ನೀಡಬೇಕು. 2019 ರಲ್ಲೂ ಅಡಿಕೆ ಕೊಳೆರೋಗ ಪರಿಹಾರಕ್ಕೆ ಸಂಬಂಧಪಟ್ಟಂತೆ ಅರ್ಜಿ ಸ್ವೀಕರಿಸಿದ್ದು, ಕೂಡಲೇ ಹಣ ಬಿಡುಗಡೆ ಮಾಡಬೇಕು. ಕಾಡುಪ್ರಾಣಿಗಳ ಹಾವಳಿಯಿಂದ ಕೃಷಿಕ ಕಂಗೆಟ್ಟಿದ್ದು, ಕಾಡುಪ್ರಾಣಿಗಳು ಕೃಷಿ ಭೂಮಿಗೆ ಬರದಂತೆ ಮಾಡಲು ಅರಣ್ಯ ಇಲಾಖೆ ಅವುಗಳಿಗೆ ಪ್ರತ್ಯೇಕ ಸ್ಥಳವನ್ನು ಮೀಸಲಿಡಬೇಕು. ಬಂದೂಕು ಪರವಾನಿಗೆ ನೀಡುವ ಜವಾಬ್ದಾರಿಯನ್ನು ತಾಲೂಕಿನ ತಹಶೀಲ್ದಾರ್ ಅವರಿಗೇ ನೀಡಬೇಕು ಮತ್ತು ಪರವಾನಿಗೆ ಪಡೆಯಲು ಡಿಪಾಸಿಟ್ ಇಡುವ ಕ್ರಮ ರದ್ದುಗೊಳಿಸ ಬೇಕು. ಖಾಸಗಿಯವರಿಗೆ ನೀಡಿರುವ ಗೋಮಾಳ ಭೂಮಿಯ ಪಹಣಿಯನ್ನು ರದ್ದುಪಡಿಸಿ ಸರ್ಕಾರ ಗೋವುಗಳಿಗೆ ಮೇಯಲು ಆ ಪ್ರದೇಶವನ್ನು ಕಾಯ್ದಿರಿಸಬೇಕು ಎಂದು ಅವರು ಒತ್ತಾಯಿಸಿದರು.

ರೈತ ಸಂಘಟನೆಯ ಬೆಳ್ತಂಗಡಿ ತಾಲೂಕು ಸಮಿತಿ ಅಧ್ಯಕ್ಷ ಕೇಶವ ಪೂಜಾರಿ ಪಂಚಮಲೋಡಿ ಮಾತನಾಡಿ ಬಂದೂಕು ಪರವಾಣಗಿ ನೀಡುವ ಜವಾಬ್ದಾರಿಯನ್ನು ತಾಲೂಕಿನ ತಹಸೀಲ್ದಾರ್ ಅವರಿಗೇ ನೀಡಬೇಕು ಮತ್ತು ಪರವಾನಿಗೆ ಪಡೆಯಲು ಡಿಪಾಸಿಟ್ ಇಡುವ ಕ್ರಮ ರದ್ದುಗೊಳಿಸ ಬೇಕು. ಖಾಸಗಿಯವರಿಗೆ ನೀಡಿರುವ ಗೋಮಾಳ ಭೂಮಿಯ ಪಹಣಿಯನ್ನು ರದ್ದುಪಡಿಸಿ ಸರ್ಕಾರ ಗೋವುಗಳಿಗೆ ಮೇಯಲು ಆ ಪ್ರದೇಶವನ್ನು ಕಾಯ್ದಿರಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊನ್ನಪ್ಪ ಗೌಡ, ಕಡಬ ತಾಲೂಕು ಅಧ್ಯಕ್ಷ ವಿಕ್ಟರ್ ಮಾರ್ಟಿಸ್, ಕುಂಬ್ರ ವಲಯ ಅಧ್ಯಕ್ಷ ಶೇಖರ್ ರೈ, ಸಂಘದ ಪ್ರಮುಖರಾದ ಮುರುವ ಮಹಾಬಲ ಭಟ್, ರಾಮಕೃಷ್ಣ ಅಡ್ಯಂತಾಯ, ವಿನೋದ ಶೆಟ್ಟಿ, ಈಶ್ವರ ಗೌಡ ಕುಂತೂರು, ಇಸುಬು ಪುಣಚ, ವೆಂಕಟರಮಣ ಭಟ್, ಮಾಣಿಕ್ಯರಾಜ್ ಜೈನ್, ಇದಿನಬ್ಬ ಬಂಟ್ವಾಳ ಮತ್ತಿತರರು ಉಪಸ್ಥಿತರಿದ್ದರು.

ಪ್ರತಿಭಟನೆಯ ಬಳಿಕ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ, ಹಸಿರು ಸೇನೆ ದ. ಕ. ಜಿಲ್ಲಾ ಸಮಿತಿಯ ವತಿ ಯಿಂದ ಉಪವಿಭಾಗಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X