Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಜೆಟ್ ಮಂಡನೆ ವೇಳೆ ಸುಸ್ತಾದ ನಿರ್ಮಲಾ...

ಬಜೆಟ್ ಮಂಡನೆ ವೇಳೆ ಸುಸ್ತಾದ ನಿರ್ಮಲಾ ಸೀತಾರಾಮನ್ ರಿಗೆ ಕ್ಯಾಂಡಿ ನೀಡಿದ್ದೇಕೆ?: ಇಲ್ಲಿದೆ ಉತ್ತರ

ವಾರ್ತಾಭಾರತಿವಾರ್ತಾಭಾರತಿ1 Feb 2020 9:01 PM IST
share
ಬಜೆಟ್ ಮಂಡನೆ ವೇಳೆ ಸುಸ್ತಾದ ನಿರ್ಮಲಾ ಸೀತಾರಾಮನ್ ರಿಗೆ ಕ್ಯಾಂಡಿ ನೀಡಿದ್ದೇಕೆ?: ಇಲ್ಲಿದೆ ಉತ್ತರ

ಹೊಸದಿಲ್ಲಿ, ಫೆ.1: ಸಂಸತ್ತಿನ ಇದುವರೆಗಿನ ಬಜೆಟ್ ಭಾಷಣಕ್ಕೆ ಹೋಲಿಸಿದರೆ ಶನಿವಾರ ಅತಿ ದೀರ್ಘ ಬಜೆಟ್ ಭಾಷಣ ಮಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೊನೆಯ ಹಂತದಲ್ಲಿ ತನ್ನ ಭಾಷಣ ಮೊಟಕುಗೊಳಿಸಿದ್ದಾರೆ. ಅಸ್ವಸ್ಥರಾದ ಕಾರಣಕ್ಕೆ ಹಾಗೂ ರಕ್ತದೊತ್ತಡ ಸರಿದೂಗಿಸಲು ಅವರಿಗೆ ಸಕ್ಕರೆ ನೀಡಬೇಕಾಗಿರುವುದರಿಂದ ಅವರು ಭಾಷಣ ಪೂರ್ಣಗೊಳಿಸದೇ ವಿರಮಿಸಿದರು.

ಸುಮಾರು ಎರಡೂವರೆ ಗಂಟೆಗಳ ಕಾಲ ನಿಂತುಕೊಂಡು ಬಜೆಟ್ ಭಾಷಣ ಮಾಡಿದ ಕಾರಣ 60ರ ಹರೆಯದ ನಿರ್ಮಲಾ ಸೀತಾರಾಮನ್ ಸುಸ್ತಾದರು ಹಾಗೂ ಬೆವರಿದರು. ಅನಂತರ ರಕ್ತದೊತ್ತಡ ಸರಿದೂಗಿಸಲು ಸ್ವಲ್ಪ ಸಕ್ಕರೆ ಸೇವಿಸಿದರು ಹಾಗೂ ಹಣೆಯ ಬೆವರು ಒರೆಸಿಕೊಂಡರು. ಇನ್ನು ಓದಲು ಕೇವಲ ಎರಡು ಪುಟ ಮಾತ್ರ ಉಳಿದಿದೆ ಎಂದು ಅವರು ಲೋಕಸಭೆಗೆ ತಿಳಿಸಿದರು.

ಅವರ ರಕ್ತದೊತ್ತಡ ಇಳಿಕೆಯಾಗಿತ್ತು. ಕೂಡಲೇ ಕುಳಿತುಕೊಳ್ಳುವಂತೆ ಅವರಿಗೆ ಸಲಹೆ ನೀಡಲಾಯಿತು. ಸಹೋದ್ಯೋಗಿಗಳು ಅವರಿಗೆ ಕ್ಯಾಂಡಿ ನೀಡಿದರು. ಸಕ್ಕರೆ ಮಟ್ಟ ಕಡಿಮೆಯಾದರೆ ಸಕ್ಕರೆ ಕ್ಯಾಂಡಿ, ಗ್ಲೂಕೋಸ್ ಟ್ಯಾಬ್ಲೆಟ್ ಮತ್ತು ಸಿರಪ್ ನೀಡಲಾಗುತ್ತದೆ.

ಕೇಂದ್ರ ಸಚಿವ ಹರ್ಸಿಮ್ರಾತ್ ಕೌರ್ ಸೀತಾರಾಮನ್ ರಿಗೆ ಒಂದು ಗ್ಲಾಸ್ ನೀರು ನೀಡಿದರು. ನಿರ್ಮಲಾ ಸೀತಾರಾಮನ್ ಮತ್ತೆ ಓದಲು ಹಿಂಜರಿದಾಗ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಹುರಿದುಂಬಿಸಿದರು. ಅನಂತರ ನಿರ್ಮಲಾ ಸೀತಾರಾಮನ್, ತಾನು ಸುಧಾರಿಸಿಕೊಂಡಿದ್ದೇನೆ. ಬಜೆಟ್ ಮಂಡಿಸಲು ರಾಜ್ಯಸಭೆಗೆ ತೆರಳಲಿದ್ದೇನೆ ಎಂದು ಹೇಳಿದರು.

ಇಂದು ನಿರ್ಮಲಾ ಸೀತಾರಾಮನ್ ಅತೀ ದೀರ್ಘ ಬಜೆಟ್ ಭಾಷಣ ಮಾಡುವ ಮೂಲಕ ತನ್ನದೇ ದಾಖಲೆ ಮುರಿದಿದ್ದಾರೆ. ಕಳೆದ ವರ್ಷ ಅವರು 2 ಗಂಟೆ 17 ನಿಮಿಷಗಳ ದೀರ್ಘ ಕಾಲ ಬಜೆಟ್ ಭಾಷಣ ಮಾಡಿದ್ದರು. ಈ ವರ್ಷ ಅವರು 2 ಗಂಟೆ 41 ನಿಮಿಷಗಳ ಕಾಲ ಭಾಷಣ ಮಾಡಿದರು. ಈ ದೀರ್ಘ ಭಾಷಣದಲ್ಲಿ ಕಾಶ್ಮೀರಿ ಪದ್ಯ ಹಾಗೂ ತಮಿಳು ಕವನ ಹೇಳಿದರು. ನಿರ್ಮಲಾ ಸೀತಾರಾಮನ್‌ಗಿಂತ ಹಿಂದೆ ಅತಿ ದೀರ್ಘ ಬಜೆಟ್ ಭಾಷಣ ಮಾಡಿದವರು ಮಾಜಿ ವಿತ್ತ ಸಚಿವ ಜಸ್ವಂತ್ ಸಿಂಗ್. ಕಳೆದ ವರ್ಷ ನಿರ್ಮಲಾ ಸೀತಾರಾಮನ್ ಅವರು 2 ನಿಮಿಷಗಳ ಕಾಲ ಹೆಚ್ಚು ದೀರ್ಘ ಭಾಷಣ ಮಾಡುವ ಮೂಲಕ ಸಿಂಗ್ ಅವರ ದಾಖಲೆ ಮುರಿದಿದ್ದರು.

2014ರಲ್ಲಿ ಆಗಿನ ಹಣಕಾಸು ಸಚಿವ ಅರುಣ್ ಜೇಟ್ಲಿ 2 ಗಂಟೆ 10 ನಿಮಿಷಗಳ ದೀರ್ಘ ಬಜೆಟ್ ಭಾಷಣ ಮಾಡಿದ್ದರು. 1991ರಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೂಡ ದೀರ್ಘ ಭಾಷಣ ಮಾಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X