Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕಿವೀಸ್ ವಿರುದ್ಧ ಕ್ಲೀನ್‌ ಸ್ವೀಪ್ ಗೆ...

ಕಿವೀಸ್ ವಿರುದ್ಧ ಕ್ಲೀನ್‌ ಸ್ವೀಪ್ ಗೆ ಭಾರತದ ಲಕ್ಷ್ಯ

ನಾಳೆ ಐದನೇ ಕೊನೆಯ ಟ್ವೆಂಟಿ-20

ವಾರ್ತಾಭಾರತಿವಾರ್ತಾಭಾರತಿ1 Feb 2020 11:44 PM IST
share
ಕಿವೀಸ್ ವಿರುದ್ಧ ಕ್ಲೀನ್‌ ಸ್ವೀಪ್ ಗೆ ಭಾರತದ ಲಕ್ಷ್ಯ

ಮೌಂಟ್ ಮಾಂಗಾನುಯಿ(ನ್ಯೂಝಿಲ್ಯಾಂಡ್), ಫೆ.1: ರವಿವಾರ ಇಲ್ಲಿ ನಡೆಯಲಿರುವ ಅಂತಿಮ ಟ್ವೆಂಟಿ-20 ಅಂತರ್‌ರಾಷ್ಟ್ರೀಯ ಪಂದ್ಯದಲ್ಲಿ ನ್ಯೂಝಿಲ್ಯಾಂಡ್ ವಿರುದ್ಧ ಇದೇ ಮೊದಲ ಬಾರಿ 5-0 ಅಂತರದಿಂದ ಕ್ಲೀನ್‌ಸ್ವೀಪ್ ಸಾಧಿಸುವತ್ತ ಭಾರತ ಚಿತ್ತಹರಿಸಿದೆ.

ನ್ಯೂಝಿಲ್ಯಾಂಡ್ ತವರು ನೆಲದಲ್ಲಿ ಈ ವರೆಗೆ ದ್ವಿಪಕ್ಷೀಯ ಟ್ವೆಂಟಿ-20 ಸರಣಿಯ(ಮೂರು ಅಥವಾ ಅದಕ್ಕಿಂತ ಹೆಚ್ಚು ಪಂದ್ಯಗಳು)ಎಲ್ಲ ಪಂದ್ಯಗಳನ್ನು ಸೋತಿಲ್ಲ. ಒಂದು ವೇಳೆ ಭಾರತ 5ನೇ ಪಂದ್ಯವನ್ನು ಜಯಸಿದರೆ ಐಸಿಸಿ ಟ್ವೆಂಟಿ-20 ರ್ಯಾಂಕಿಂಗ್‌ನಲ್ಲಿ ಪ್ರಗತಿ ಸಾಧಿಸಬಹುದು. ಪ್ರಸ್ತುತ ಕೊಹ್ಲಿ ಪಡೆಯು ಪಾಕಿಸ್ತಾನ, ಆಸ್ಟ್ರೇಲಿಯ, ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾದ ಬಳಿಕ 5ನೇ ಸ್ಥಾನದಲ್ಲಿದೆ.ಚ್ಟ ಟ್ವೆಂಟಿ-20 ವಿಶ್ವಕಪ್ ಆರಂಭಕ್ಕೆ ಇನ್ನು 8 ತಿಂಗಳುಗಳಷ್ಟೇ ಬಾಕಿ ಉಳಿದಿದ್ದು, ನವಿರಾದ ಪ್ರಯೋಗಗಳು ಆರಂಭವಾಗಿವೆ. ನಾಲ್ಕನೇ ಟ್ವೆಂಟಿ-20ಯಲ್ಲಿ ಪ್ರಯೋಗ ಮಾಡುವತ್ತ ಹೆಜ್ಜೆ ಇಡಲಾಗಿತ್ತು. ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್ ಹಾಗೂ ನವದೀಪ ಸೈನಿ ಅವಕಾಶ ಗಿಟ್ಟಿಸಿಕೊಂಡಿದ್ದರು. ಶ್ರೀಲಂಕಾ ಹಾಗೂ ನ್ಯೂಝಿಲ್ಯಾಂಡ್ ವಿರುದ್ಧದ ಸೀಮಿತ ಅವಕಾಶದಲ್ಲಿ ಸ್ಯಾಮ್ಸನ್ ಅಗ್ರ ಸರದಿಗೆ ಭಡ್ತಿ ಪಡೆದಿದ್ದರು. ಆಕ್ರಮಣಕಾರಿ ಆಟಕ್ಕೆ ಮುಂದಾಗಿ ಬೇಗನೆ ವಿಕೆಟ್ ಕೈಚೆಲ್ಲಿದ್ದರು.ಚ್ಟ ಇದೇ ವೇಳೆ, ಕನ್ನಡಿಗ ಮನೀಷ್ ಪಾಂಡೆ ಭಾರತ 5 ಪಂದ್ಯಗಳ ಸರಣಿಯಲ್ಲಿ 4-0 ಮುನ್ನಡೆ ಸಾಧಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಮುಂಬೈನಲ್ಲಿ ನಡೆದ ಆಸ್ಟ್ರೇಲಿಯ ವಿರುದ್ಧ ಮೊದಲ ಏಕದಿನ ಪಂದ್ಯದ ವೇಳೆ ಚೆಂಡಿನೇಟಿಗೆ ಒಳಗಾಗಿದ್ದ ರಿಷಭ್ ಪಂತ್ ಸದ್ಯ ಕ್ರಿಕೆಟ್‌ನಿಂದ ದೂರ ಉಳಿದಿದ್ದು,ಪಂತ್ ಬದಲಿಗೆ ಪಾಂಡೆ ಐದನೇ ಹಾಗೂ ಆರನೇ ಸ್ಥಾನದಲ್ಲಿ ಆಡುತ್ತಿದ್ದಾರೆ.

ಒಂದು ವೇಳೆ ಪಂತ್‌ರನ್ನು ಆಡಿಸಲು ಟೀಮ್ ಮ್ಯಾನೇಜ್‌ಮೆಂಟ್ ಬಯಸಿದರೆ, ರಾಹುಲ್ ಆಡುವ ಬಳಗದಿಂದ ಹೊರಗುಳಿಯಲಿದ್ದಾರೆ.  ಕೊಹ್ಲಿ ವಿಶ್ರಾಂತಿ ಪಡೆದರೆ ವೆಲ್ಲಿಂಗ್ಟನ್‌ನಲ್ಲಿ ನಡೆದ 4ನೇ ಪಂದ್ಯದಿಂದ ವಿಶ್ರಾಂತಿ ಪಡೆದಿದ್ದ ರೋಹಿತ್ ಶರ್ಮಾ ಅಂತಿಮ ಪಂದ್ಯದಲ್ಲಿ ತಂಡದ ನೇತೃತ್ವವಹಿಸುವ ಸಾಧ್ಯತೆಯಿದೆ. ಬೌಲಿಂಗ್ ವಿಭಾಗದಲ್ಲಿ ಜಸ್‌ಪ್ರೀತ್ ಬುಮ್ರಾ ವಿಶ್ರಾಂತಿ ಪಡೆಯಲಿದ್ದು, ಶಮಿ ಮತ್ತೆ ತಂಡಕ್ಕೆ ವಾಪಸಾಗಲಿದ್ದಾರೆ. ಕುಲದೀಪ್ ಯಾದವ್ ಅವಕಾಶ ಪಡೆದರೆ, ಯಜುವೇಂದ್ರ ಚಹಾಲ್ ಜಾಗ ಖಾಲಿ ಮಾಡಬೇಕಾಗುತ್ತದೆ. ಚ್ಟ ಬಲ ಭುಜನೋವಿನಿಂದ 4ನೇ ಪಂದ್ಯದಿಂದ ವಂಚಿತರಾಗಿದ್ದ ನ್ಯೂಝಿಲ್ಯಾಂಡ್ ನಾಯಕ ಕೇನ್ ವಿಲಿಯಮ್ಸನ್ ಅಂತಿಮ ಹಣಾಹಣಿಗೆ ವಾಪಸಾಗುವ ನಿರೀಕ್ಷೆಯಿದೆ. ಮೂರು ದಿನಗಳಲ್ಲಿ ಎರಡು ಬಾರಿ ಭಾರತ ವಿರುದ್ಧ ಸೂಪರ್ ಓವರ್‌ನಲ್ಲಿ ಸೋತಿರುವ ನ್ಯೂಝಿಲ್ಯಾಂಡ್ ತೀವ್ರ ಹಿನ್ನಡೆ ಕಂಡಿದೆ. ವಿಲಿಯಮ್ಸನ್ ಬಳಗ 2019ರಲ್ಲಿ ಇಂಗ್ಲೆಂಡ್‌ನಲ್ಲಿ ನಡೆದಿದ್ದ ಏಕದಿನ ವಿಶ್ವಕಪ್ ಸಹಿತ ಒಟ್ಟು ನಾಲ್ಕು ಬಾರಿ ಸೂಪರ್ ಓವರ್ ಪಂದ್ಯ ಆಡಿತ್ತು. ಪ್ರತಿ ಬಾರಿಯೂ ಸೋಲಿನೊಂದಿಗೆ ತನ್ನ ಹೋರಾಟ ಕೊನೆಗೊಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X