Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗಾಂಧಿ, ನೆಹರೂ ಜತೆ ಹೆಗಡೆ ‘ಸ್ವಾತಂತ್ರ್ಯ...

ಗಾಂಧಿ, ನೆಹರೂ ಜತೆ ಹೆಗಡೆ ‘ಸ್ವಾತಂತ್ರ್ಯ ಹೋರಾಟ’ ನಡೆಸುತ್ತಿದ್ದರು: ಸಿದ್ದರಾಮಯ್ಯ ಲೇವಡಿ

ವಾರ್ತಾಭಾರತಿವಾರ್ತಾಭಾರತಿ3 Feb 2020 5:36 PM IST
share
ಗಾಂಧಿ, ನೆಹರೂ ಜತೆ ಹೆಗಡೆ ‘ಸ್ವಾತಂತ್ರ್ಯ ಹೋರಾಟ’ ನಡೆಸುತ್ತಿದ್ದರು: ಸಿದ್ದರಾಮಯ್ಯ ಲೇವಡಿ

ಹುಬ್ಬಳ್ಳಿ, ಫೆ.3: ‘ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ನೆಹರೂ, ವಲ್ಲಭಬಾಯಿ ಪಟೇಲ್ ಜತೆ ಅನಂತಕುಮಾರ ಹೆಗಡೆ ಸ್ವಾತಂತ್ರ್ಯ ಹೋರಾಟ ನಡೆಸುತ್ತಿದ್ದರು. ಹೀಗಾಗಿಯೇ ಅವರು ಅಹಿಂಸೆಯಿಂದ ಸ್ವಾತಂತ್ರ್ಯ ಬಂದಿಲ್ಲ ಎಂದು ಕರಾರುವಾಕ್ಕಾಗಿ ಹೇಳಿಕೆ ನೀಡಿದ್ದಾರೆ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಅಹಿಂಸೆಯಿಂದ ಸ್ವಾತಂತ್ರ್ಯ ಬಂದಿಲ್ಲ. ಸ್ವಾತಂತ್ರ್ಯ ಹೋರಾಟಗಾರರು ಎಂದು ಹೇಳಿಕೊಳ್ಳುತ್ತಿರುವವರು ಮತ್ತು ಪ್ರಗತಿಪರರು ಎಡಬಿಡಂಗಿಗಳು’ ಎಂಬ ಅನಂತಕುಮಾರ ಹೆಗಡೆ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅನಂತಕುಮಾರ್ ಹೆಗಡೆಗೆ ನಾಚಿಕೆ, ಮಾನ-ಮರ್ಯಾದೆ ಇಲ್ಲ. ಕೂಡಲೇ ಕೇಂದ್ರ ಸರಕಾರ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಹಿಂದೆ ಸಂವಿಧಾನ ಬದಲಾವಣೆ ಮಾಡುವ ಹೇಳಿಕೆ ನೀಡಿ ಕೇಂದ್ರದ ಸಚಿವರಾಗಿದ್ದರು. ಇದೀಗ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಲಘುವಾಗಿ ಮಾತನಾಡಿರುವುದು ಸಲ್ಲ ಎಂದು ಆಕ್ಷೇಪಿಸಿದರು.

ಸ್ವಾತಂತ್ರ್ಯ ಹೋರಾಟಗಾರರು ಕಾರಾಗೃಹದಲ್ಲಿದ್ದು, ಪ್ರಾಣ ಕಳೆದುಕೊಂಡು, ಕುಟುಂಬ ತ್ಯಜಿಸಿ ನಮಗೆ ಸ್ವಾತಂತ್ರ್ಯವನ್ನು ತಂದು ಕೊಟ್ಟಿದ್ದಾರೆ. ಅವರ ಬಗ್ಗೆ ಗೌರವದಿಂದ ಮಾತನಾಡಬೇಕೆಂದ ಅವರು, ಸ್ವಾತಂತ್ರ್ಯ ಹೋರಾಟಗಾರರು ಇಲ್ಲದಿದ್ದರೆ, ಸಂವಿಧಾನ ಇಲ್ಲದಿದ್ದರೆ ಅನಂತಕುಮಾರ್ ಹೆಗಡೆ ಸಂಸದ ಆಗುತ್ತಿದ್ದರೇ? ಎಂದು ಪ್ರಶ್ನಿಸಿದರು.

ದೇಶದಲ್ಲಿ ಸಂವಿಧಾನ ಬಂದ ಮೇಲೆಯೇ ಎಲ್ಲರಿಗೂ ಮತ ಹಾಕುವ ಹಕ್ಕು ಸಿಕ್ಕಿದೆ. ಸಂವಿಧಾನ ಓದದೆ ಇವರೆಲ್ಲ ಸಂಸದರು ಏಕೆ ಆಗಿದ್ದಾರೋ ಗೊತ್ತಾಗುತ್ತಿಲ್ಲ. ಗೋಡ್ಸೆ ಹಾಗೂ ಸಾವರ್ಕರ್ ಪೂಜೆ ಮಾಡುವವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ? ಎಂದು ವಾಗ್ದಾಳಿ ನಡೆಸಿದರು.

ಸ್ವಾತಂತ್ರ್ಯ ಹೋರಾಟದ ಬಗ್ಗೆ ಇವರಿಗೇನು ಗೊತ್ತು? ಸ್ವಾತಂತ್ರ್ಯ ಹೋರಾಟದಲ್ಲಿ ಬಲಿಯಾದವರ ಹೆಸರನ್ನು ಅನಂತಕುಮಾರ್ ಹೆಗಡೆ ಹೇಳಲಿ ನೋಡೋಣ. ಗಾಂಧೀಜಿ ಎಷ್ಟು ವರ್ಷಗಳ ಕಾಲ ಜೈಲಿನಲ್ಲಿದ್ದರು ಎಂಬುವುದು ಹೆಗಡೆಗೆ ಗೊತ್ತಿಲ್ಲ. ನಾನು 1947ರ ಆಗಸ್ಟ್ 3ರಂದು ಸ್ವಾತಂತ್ರ್ಯ ಪೂರ್ವದಲ್ಲೇ ಹುಟ್ಟಿದ್ದೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಇನ್ನು ಸ್ವಾತಂತ್ರ್ಯ ಬಂದ ದಿನಕ್ಕೆ 12ರ ಹಸಿಗೂಸಿನ ಈತ, ಸ್ವಾತಂತ್ರ್ಯದ ಬಗ್ಗೆ ಮಾತನಾಡಲು ಅದನ್ನೇ ಅರ್ಹತೆಯೆಂದು ತಿಳಿದಿದ್ದರೆ, ಈ ಸಿದ್ದಣ್ಣನನ್ನು ದಿವಾಳಿಯೆದ್ದ ಮನಸ್ಸಿನ ಸಾಕ್ಷಿ-ಪ್ರಜ್ಞೆ ಎನ್ನಬಹುದಲ್ಲವೇ? ಸಿಎಎ ಬಗ್ಗೆ ಹುಟ್ಟಿನ ದಾಖಲೆ ನೀಡಲು ಆಗುವುದಿಲ್ಲವೆಂದ ಈ ಸಿದ್ದಣ್ಣ ಈಗ ತನ್ನೆಲ್ಲ ದಾಖಲೆಗಳನ್ನು ಸರಿ ಮಾಡಿಸಿಕೊಂಡು ಒದರಲಿಕ್ಕೆ ಪ್ರಾರಂಭಿಸಿರುವುದು, ಪ್ರಧಾನಿ ಮೋದಿಯವರು ತೆಗೆದುಕೊಂಡ ಕ್ರಮ ಸಾರ್ಥಕವಾಯ್ತಲ್ಲವೇ???’

-ಅನಂತಕುಮಾರ್ ಹೆಗಡೆ , ಸಂಸದ(ಟ್ವೀಟ್)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X