Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಜೆಟ್ ವಿರುದ್ಧ ಆಕ್ರೋಶ: ‘ಜವಾಬ್ ದೋ...

ಬಜೆಟ್ ವಿರುದ್ಧ ಆಕ್ರೋಶ: ‘ಜವಾಬ್ ದೋ ಮಂತ್ರಿ ಜೀ’ ಅಭಿಯಾನ ಆರಂಭಿಸಿದ ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ3 Feb 2020 7:44 PM IST
share
ಬಜೆಟ್ ವಿರುದ್ಧ ಆಕ್ರೋಶ: ‘ಜವಾಬ್ ದೋ ಮಂತ್ರಿ ಜೀ’ ಅಭಿಯಾನ ಆರಂಭಿಸಿದ ಕಾಂಗ್ರೆಸ್

ಬೆಂಗಳೂರು, ಫೆ.3: ಕೇಂದ್ರ ಸರಕಾರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2020-21ನೇ ಸಾಲಿನ ಬಜೆಟ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್, ಟ್ವಿಟರ್‌ನಲ್ಲಿ ‘ಜವಾಬ್ ದೋ ಮಂತ್ರಿ ಜೀ’(ಉತ್ತರ ಕೊಡಿ ಮಂತ್ರಿಗಳೆ) ಅಭಿಯಾನವನ್ನು ಆರಂಭಿಸಿದೆ.

ನರೇಂದ್ರ ಮೋದಿ ಅವರು ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಕಳೆದ ವರ್ಷ 1 ಕೋಟಿ ಉದ್ಯೋಗಗಳು ನಷ್ಟವಾಗಿ, ಯುವಜನತೆ ಬೀದಿಗೆ ಬಿದ್ದಿದ್ದಾರೆ. ಮೋದಿಯವರು ಹೋದ ಕಡೆಯೆಲ್ಲಾ ಸಿಎಎ, ಎನ್‌ಆರ್‌ಸಿ ಬಗ್ಗೆ ಮಾತನಾಡುತ್ತಿದ್ದಾರೆ, ನಿರುದ್ಯೋಗ ಸಮಸ್ಯೆಯ ಬಗ್ಗೆ ಪ್ರಸ್ತಾಪಿಸುತ್ತಿಲ್ಲ ಏಕೆ? ಉತ್ತರ ಕೊಡಿ ಮಂತ್ರಿಗಳೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಹೊಸ ವೈಯಕ್ತಿಕ ಆದಾಯ ತೆರಿಗೆ ವ್ಯವಸ್ಥೆಯ ಬಗ್ಗೆ ನರೇಂದ್ರ ಮೋದಿ ಸರಕಾರಕ್ಕೆ ಸ್ಪಷ್ಟನೆ ಇಲ್ಲ. ಹೊಸ ತೆರಿಗೆ ದರದಿಂದ ಆಗುವ ಪ್ರಯೋಜನಗಳ ಬಗ್ಗೆ ಸಚಿವಾಲಯಕ್ಕೂ ಇನ್ನು ಲೆಕ್ಕ ಸಿಕ್ಕಿಲ್ಲ. ಹಾಗಿದ್ದರೂ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗೊಂದಲದಲ್ಲೇ ಬಜೆಟ್ ಮಂಡಿಸಿದ್ದು ಏಕೆ? ಜನರಿಗೆ ಗೊಂದಲ ಮೂಡಿಸುತ್ತಿರುವುದೇಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ನಿರ್ಮಲಾ ಸೀತಾರಾಮನ್ ಅವರ ಬಜೆಟ್‌ನಲ್ಲಿ ಆಡಳಿತಾತ್ಮಕ ದೂರದೃಷ್ಟಿಯ ಕೊರತೆ ಎದ್ದು ಕಾಣುತ್ತಿದೆ. ಕುಸಿದಿರುವ ಆರ್ಥಿಕತೆಯ ಸುಧಾರಣೆಗೆ, ಉದ್ಯೋಗ ಸೃಷ್ಟಿಗೆ, ನಿರುದ್ಯೋಗ ನಿಯಂತ್ರಣಕ್ಕೆ ಯಾವುದೇ ಕಾರ್ಯಕ್ರಮಗಳಿಲ್ಲ ಏಕೆ? ಜನರ ಕೊಳ್ಳುವ ಸಾಮರ್ಥ್ಯ ಹೆಚ್ಚಿಸುವ ಆಶಯದಲ್ಲಿದ್ದ ಬಡ-ಮಧ್ಯಮ ವರ್ಗಕ್ಕೆ ನೀವು ಕೊಟ್ಟ ಕೊಡುಗೆ ಏನು? ಎಂದು ಕಾಂಗ್ರೆಸ್ ಕೇಳಿದೆ.

ಗ್ರಾಮೀಣ ಆರ್ಥಿಕತೆ ಗಣನೀಯವಾಗಿ ಕುಸಿಯುತ್ತಿದ್ದರೂ ಉದ್ಯೋಗ ಖಾತರಿ ಯೋಜನೆಯ ಬಜೆಟ್ ಅನ್ನು 13% ಕಡಿತಗೊಳಿಸಲಾಗಿದೆ. 2019-20ರಲ್ಲಿ 71,002 ಕೋಟಿ ರೂ.ಇದ್ದ ಉದ್ಯೋಗ ಖಾತರಿ ಯೋಜನೆ ಬಜೆಟ್, 2020-21ನೇ ಸಾಲಿನಲ್ಲಿ 61,500 ಕೋಟಿ ರೂ.ಗಳಿಗೆ ಇಳಿಕೆಯಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

'@nsitharaman ಅವರ ಬಜೆಟ್ ನಲ್ಲಿ ಆಡಳಿತಾತ್ಮಕ ದೂರದೃಷ್ಟಿಯ ಕೊರತೆ ಎದ್ದು ಕಾಣುತ್ತಿದೆ.

ಕುಸಿದಿರುವ ಆರ್ಥಿಕತೆಯ ಸುಧಾರಣೆಗೆ, ಉದ್ಯೋಗ ಸೃಷ್ಟಿಗೆ, ನಿರುದ್ಯೋಗ ನಿಯಂತ್ರಣಕ್ಕೆ ಯಾವುದೇ ಕಾರ್ಯಕ್ರಮಗಳಿಲ್ಲ ಏಕೆ?

ಜನರ ಕೊಳ್ಳುವ ಸಾಮರ್ಥ್ಯ ಹೆಚ್ಚಿಸುವ ಆಶಯದಲ್ಲಿದ್ದ ಬಡ-ಮಧ್ಯಮ ವರ್ಗಕ್ಕೆ ನೀವು ಕೊಟ್ಟ ಕೊಡುಗೆ ಏನು?#JawabDoMantriJi

— Karnataka Congress (@INCKarnataka) February 3, 2020

ಹೊಸ ವಯಕ್ತಿಕ ಆದಾಯ ತೆರಿಗೆ ವ್ಯವಸ್ಥೆಯ ಬಗ್ಗೆ @narendramodi ಸರ್ಕಾರಕ್ಕೇ ಸ್ಪಷ್ಟನೆ ಇಲ್ಲ.

‘ಹೊಸ ತೆರಿಗೆ ದರದಿಂದ ಆಗುವ ಪ್ರಯೋಜನಗಳ ಬಗ್ಗೆ ಸಚಿವಾಲಯಕ್ಕೂ ಇನ್ನು ಲೆಕ್ಕ ಸಿಕ್ಕಿಲ್ಲ.

ಹಾಗಿದ್ದರೂ ಸಚಿವೆ @nsitharaman ಅವರು ಗೊಂದಲದಲ್ಲೇ ಬಜೆಟ್ ಮಂಡಿಸಿದ್ದು ಏಕೆ?

ಜನರಿಗೆ ಗೊಂದಲ ಮೂಡಿಸುತ್ತಿರುವುದೇಕೆ?#JawabDoMantriJi

— Karnataka Congress (@INCKarnataka) February 3, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X