Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆತ್ಮಾನಂದ, ನೆಮ್ಮದಿ, ಸಾರ್ಥಕತೆ...

ಆತ್ಮಾನಂದ, ನೆಮ್ಮದಿ, ಸಾರ್ಥಕತೆ ಸಿಗುವುದು ಕಲೆ, ಸಾಹಿತ್ಯಗಳಿಂದ: ಕವಿ ಬಿ.ಆರ್.ಲಕ್ಷ್ಮಣ್‌ ರಾವ್

ವಿದ್ಯಾರ್ಥಿಗಳೊಂದಿಗೆ ಪ್ರೇಮಕವಿಯ ಆತ್ಮೀಯ ಸಂವಾದ

ವಾರ್ತಾಭಾರತಿವಾರ್ತಾಭಾರತಿ3 Feb 2020 8:22 PM IST
share
ಆತ್ಮಾನಂದ, ನೆಮ್ಮದಿ, ಸಾರ್ಥಕತೆ ಸಿಗುವುದು ಕಲೆ, ಸಾಹಿತ್ಯಗಳಿಂದ: ಕವಿ ಬಿ.ಆರ್.ಲಕ್ಷ್ಮಣ್‌ ರಾವ್

ಹಿರಿಯಡಕ, ಫೆ.3: ಮನುಷ್ಯನಿಗೆ ನಿಜವಾದ ಸಂತೋಷ, ಆತ್ಮಾನಂದ, ನೆಮ್ಮದಿ, ಧನ್ಯತಾಭಾವ ಹಾಗೂ ಸಾರ್ಥಕತೆ ಸಿಗುವುದು ಕಲೆಗಳಿಂದ ಹಾಗೂ ಸಾಹಿತ್ಯದಿಂದ ಎಂದು ಕನ್ನಡದ ಖ್ಯಾತ ಕವಿ ಬಿ.ಆರ್.ಲಕ್ಷ್ಮಣ್‌ರಾವ್ ಅಭಿಪ್ರಾಯ ಪಟ್ಟಿದ್ದಾರೆ.

ಅಮೋಘ ಹಿರಿಯಡಕ ಹಾಗೂ ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ನಡೆದ ಕನ್ನಡದ ಪ್ರೇಮ ಕವಿ ಎಂದೇ ಖ್ಯಾತರಾದ ಬಿ.ಆರ್.ಲಕ್ಷ್ಮಣ್‌ರಾವ್ ಅವರ ಉಪಸ್ಥಿತಿಯಲ್ಲಿ ನಡೆದ ಕಾವ್ಯ-ಗಾನ-ಕುಂಚ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಅವರೊಂದಿಗೆ ನಡೆಸಿದ ಆತ್ಮೀಯ ಸಂವಾದದ ವೇಳೆ ಈ ಅಭಿಪ್ರಾಯ ವ್ಯಕ್ತಪಡಿಸಿದರು.

ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಬಿ.ಆರ್.ಲಕ್ಷ್ಮಣ್ ರಾವ್, ಪ್ರತಿಯೊಬ್ಬ ಮನುಷ್ಯನಿಗೂ ಹೊರಬಾಳು ಮತ್ತು ಒಳಬಾಳು ಎಂಬುದಿರುತ್ತೆ. ಹೊರಬಾಳಿಗೆ ಉದ್ಯೋಗ, ಸಂಪಾದನೆ, ಮನೆ, ಆಸ್ತಿ-ಪಾಸ್ತಿ ಮೊದಲಾದವು ಮುಖ್ಯವಾಗುತ್ತವೆ. ಕೇವಲ ಇದರಿಂದಷ್ಟೇ ವ್ಯಕ್ತಿ ಸಂತೋಷ ಪಡೆಯಲು ಸಾಧ್ಯವಿಲ್ಲ ಎಂದರು.

ಮನುಷ್ಯನಿಗೆ ನಿಜವಾದ ಸಂತೋಷ, ಆತ್ಮಾನಂದ, ನೆಮ್ಮದಿ ಹಾಗೂ ಸಾರ್ಥಕತೆ ಸಿಗುವುದು ಒಳಬಾಳು ಆದ ಕಲೆಗಳಿಂದ ಹಾಗೂ ಸಾಹಿತ್ಯ ದಿಂದ. ನಾಗರಿಕತೆ ಹೊರಗಿನದು, ಸಂಸ್ಕೃತಿ ಒಳಗಿನದು ಎಂದರು.

ಬೇರೆಲ್ಲಾ ಉದ್ಯೋಗ ಬಿಟ್ಟು, ವ್ರತ ತೊಟ್ಟು, ಹಗಲಿರುಳು ಕನ್ನಡ ಸಾಹಿತ್ಯ ಓದಿದ್ದಕ್ಕೆ, ಕನ್ನಡದಲ್ಲಿ ಕಾವ್ಯ ಬರೆದದ್ದಕ್ಕೆ, ನನಗೆ ಸಿಕ್ಕ ಜೋಡಿ ಪದಕ, ಈ ಕನ್ನಡಕ ಎಂಬ ತಮ್ಮ ಹನಿಗವನವನ್ನು ವಾಚಿಸಿದರು. ಅನಂತರ ಕನ್ನಡದ ಹಿರಿಯ ಕವಿ, ಸಭಿಕರೊಂದಿಗೆ ಆತ್ಮೀಯ ಸಂವಾದ ನಡೆಸಿದರು.

ಬೇರೆಲ್ಲಾ ಉದ್ಯೋಗ ಬಿಟ್ಟು, ವ್ರತ ತೊಟ್ಟು, ಹಗಲಿರುಳು ಕನ್ನಡ ಸಾಹಿತ್ಯ ಓದಿದ್ದಕ್ಕೆ, ಕನ್ನಡದಲ್ಲಿ ಕಾವ್ಯ ಬರೆದದ್ದಕ್ಕೆ, ನನಗೆ ಸಿಕ್ಕ ಜೋಡಿ ಪದಕ, ಈ ಕನ್ನಡಕ ಎಂಬ ತಮ್ಮ ಹನಿಗವನವನ್ನು ವಾಚಿಸಿದರು. ಅನಂತರ ಕನ್ನಡದ ಹಿರಿಯ ಕವಿ, ಸಭಿಕರೊಂದಿಗೆ ಆತ್ಮೀಯ ಸಂವಾದ ನಡೆಸಿದರು. ‘ಅಮ್ಮ ನಿನ್ನ ಎದೆಯಾಳದಲ್ಲಿ ಗಾಳಕ್ಕೆ ಸಿಕ್ಕ ಮೀನು...’ ಗೀತೆಯ ಒಳಾರ್ಥವೇನು ಎಂಬ ಪ್ರಶ್ನೆಗೆ ತಾಯಿ-ಭೂಮಿ ತಾಯಿ ಸಮೀಕರಣ ಈ ಕವಿತೆಯಲ್ಲಿದೆ ಎಂದುತ್ತರಿಸಿದರು. ಈ ಇಳಿವಯಸ್ಸಿನಲ್ಲಿ ತಮ್ಮ ಉತ್ಸಾಹದ ಗುಟ್ಟೇನು ಎಂಬ ಮತ್ತೊಂದು ಪ್ರಶ್ನೆಗೆ ಶಿಕ್ಷಕ ನಾಗಿರುವುದೇ ನನ್ನ ಉತ್ಸಾಹದ ಗುಟ್ಟು, ಯುವಕರೊಂದಿಗಿದ್ದು, ಯುವಕನಾಗಿದ್ದೇನೆ. ಶಿಕ್ಷಕರಿಗೆ ವಯಸ್ಸಾಗುವುದೇ ಇಲ್ಲ ಎಂದರು.

ನಿವೃತ್ತ ಉಪನ್ಯಾಸಕ ಸಜಂಗದ್ದೆ ರಾಮ ಭಟ್, ಕನ್ನಡ ಉಪನ್ಯಾಸಕಿ ನಳಿನಿ, ಇತಿಹಾಸ ಉಪನ್ಯಾಸಕ ಮಂಜುನಾಥ್ ಬಿ.ಡಿ., ವಿದ್ಯಾರ್ಥಿ ಗಳಾದ ಪ್ರಜ್ಞಾ, ವೆಂಕಟೇಶ್ ನಾಯಕ್, ವಿಶ್ವನಾಥ್ ಹಾಗೂ ಅಮೋಘದ ಸದಸ್ಯರು ಸಂವಾದದಲ್ಲಿ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಅಮೋಘ ಹಿರಿಯಡಕದ ಕಾರ್ಯದರ್ಶಿ ಸತ್ಯಾನಂದ ನಾಯಕ್, ಅನಿಲ್ ಶೆಟ್ಟಿ, ಬೊಮ್ಮರಬೆಟ್ಟು ಗ್ರಾಪಂ ಉಪಾಧ್ಯಕ್ಷ ಹರೀಶ್ ಸಾಲ್ಯಾನ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ನಿಕೇತನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಮೋಘ ಹಿರಿಯಡಕದ ನಿರ್ದೇಶಕಿ ಪೂರ್ಣಿಮಾ ಸುರೇಶ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಕನ್ನಡ ಉಪನ್ಯಾಸಕ ರವಿಚಂದ್ರ ಬಾಯಿರಿ, ವಿದ್ಯಾರ್ಥಿನಿ ಅನನ್ಯ, ಕವಿ ಬಿ.ಆರ್.ಲಕ್ಷ್ಮಣ್‌ರಾವ್ ಅವರ ಕವಿತೆಗಳನ್ನು ಹಾಡಿದರು. ಕವಿಯ ಭಾವಚಿತ್ರ ವಿದ್ಯಾರ್ಥಿ ಶರಣಬಸವನ ಕುಂಚದಲ್ಲಿ ಮೂಡಿತು. ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಸುಜಯಾ ಕೆ.ಎಸ್. ಕವಿಯನ್ನು ಪರಿಚಯಿ ಸಿದರು. ಆಂಗ್ಲ ಭಾಷಾ ಸಹಾಯಕ ಪ್ರಾಧ್ಯಾಪಕ ಪ್ರವೀಣ ಶೆಟ್ಟಿ ಸ್ವಾಗತಿಸಿದರು. ಸಮಾಜಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ಸುಮನಾ ಬಿ. ನಿರೂಪಿಸಿದರು. ಕನ್ನಡ ಸಹಾಯಕ ಪ್ರಾಧ್ಯಾಪಕ ಡಾ.ರಾಘವೇಂದ್ರ ಪಿ.ಕೆ. ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X