ಗ್ರಂಥಾಲಯಗಳ ಆಧುನೀಕರಣ ಅತ್ಯಗತ್ಯ: ಪ್ರೀತಿ ಗೆಹ್ಲೋಟ್

ಉಡುಪಿ, ಫೆ.3: ಗ್ರಂಥಾಲಯಗಳು ಅತ್ಯಾಧುನಿಕ ಸೌಕರ್ಯಗಳನ್ನು ಅಳವಡಿಸಿಕೊಂಡು ಓದುಗರ ಸ್ನೇಹಿಯಾಗಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಕೇಂದ್ರ ಗ್ರಂಥಾಲಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಗ್ರಂಥಾಲಯ ಗಳನ್ನು ಮೇಲ್ದರ್ಜೆಗೇರಿಸುವ ಚಿಂತನೆ ನಡೆದಿದೆ ಎಂದು ಉಡುಪಿ ಜಿಪಂನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್ ತಿಳಿಸಿದ್ದಾರೆ.
ಮಣಿಪಾಲದ ಜಿಪಂನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆ ಹಾಗೂ ಜಿಲ್ಲಾ ಕೇಂದ್ರ ಗ್ರಂಥಾಲಯ ಉಡುಪಿ ಸಹಭಾಗಿತ್ವದಲ್ಲಿ ಜಿಲ್ಲೆಯ ಗ್ರಾಪಂ ಗ್ರಂಥಾಲಯಗಳ ಮೇಲ್ವಿಚಾರಕ ರಿಗಾಗಿ ಹಮ್ಮಿಕೊಂಡ ಡಿಜಿಟಲ್ ಗ್ರಂಥಾಲಯ ತರಬೇತಿ ಕಾರ್ಯಾಗಾರದ ಸಮಾರೋಪ ಕಾರ್ಯಾಗಾರದಲ್ಲಿ ಭಾಗವಹಿಸಿ ಪ್ರಮಾಣ ಪತ್ರ ವಿತರಿಸಿ ಮಾತನಾಡುತಿದ್ದರು.
ಗ್ರಂಥಾಲಯದಲ್ಲಿ ಓದುಗರ ಸಂಖ್ಯೆ ಇಳಿಮುಖವಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಗ್ರಂಥಾಲಯಗಳಿಗೆ ಮಕ್ಕಳನ್ನು ಆಕರ್ಷಿಸುವ ನಿಟ್ಟಿನಲ್ಲಿ ಮಕ್ಕಳ ಕಥೆಗಳು, ಸ್ಪರ್ಧಾತ್ಮಕ ಪರೀಕ್ಷಾ ಮಾಹಿತಿ ಪುಸ್ತಕಗಳು ಮೊದಲಾದ ಗ್ರಂಥಗಳನ್ನು ಹೊಂದಿರುವ ಅಗತ್ಯವಿದೆ. ಪ್ರಸ್ತುತ ಗ್ರಂಥಾಲಯಗಳನ್ನು ಡಿಜಿಟಲೀಕರಣಗೊಳಿಸುವ ನಿಟ್ಟಿನಲ್ಲಿ ಕಂಪ್ಯೂಟರ್, ಕಟ್ಟಡ ಮೊದಲಾದ ಸೌಕರ್ಯಗಳನ್ನು ಕಲ್ಪಿಸಲು ಪ್ರಯತ್ನಿಸಲಾ ಗುವುದು ಎಂದರು.
ಜಿಪಂ ಯೋಜನಾಧಿಕಾರಿ ಶ್ರೀನಿವಾಸ ರಾವ್ ಮಾತನಾಡಿ, ಗ್ರಂಥಾಲಯ ಗಳ ದೊಡ್ಡ ಸಮಸ್ಯೆ ಎಂದರೆ ಓದುಗರ ಸಂಖ್ಯೆಯನ್ನು ಹೆಚ್ಚಿಸುವು ದಾಗಿದೆ. ಸರಕಾರಿ ಶಾಲೆಗಳನ್ನು ಉಳಿಸಲು ಎಲ್ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಿರುವಂತೆ, ಇಲಾಖೆ ಉಳಿಯಬೇಕಾದರೆ ಬದಲಾ ವಣೆ ತರುವುದು ಅಗತ್ಯವಾಗಿದೆ. ಹೀಗಾಗಿ ಗ್ರಂಥಾಲಯಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪಿಡಿಓಗಳ ಜೊತೆಗೆ ಚರ್ಚಿಸಲಾಗುವುದು ಎಂದರು.
ಬ್ಯಾಂಕಿಂಗ್, ಐಎಎಸ್, ಕೆಪಿಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ ಪುಸ್ತಕಗಳು ಲೈಬ್ರೇರಿಯಲ್ಲಿರಬೇಕು. ಹಾಗೆಯೇ ಹಿರಿಯ ನಾಗರಿಕರನ್ನು ಸೆಳೆಯಲು ಸೂಕ್ತ ಬದಲಾವಣೆಗಳು ಅಗತ್ಯವಾಗಿವೆ. ಪುಸ್ತಕಗಳನ್ನು ಖರೀದಿಸಲು ಅನುದಾನದ ಕೊರತೆ ಯಿದ್ದರೆ, ದಾನಿಗಳ ನೆರವಿನ ಮೂಲಕ ಪುಸ್ತಕಗಳನ್ನು ಹೊಂದಲು ಮೇಲ್ವಿಚಾರಕರು ಪ್ರಯತ್ನಿಸಬೇಕು. ಸ್ಥಳೀಯವಾಗಿ ಬೇಡಿಕೆ ಇರುವ ಪುಸ್ತಕಗಳನ್ನು ಹೆಚ್ಚಾಗಿ ತರಿಸಿಕೊಳ್ಳಿ ಎಂದು ಅವರು ಕಿವಿಮಾತು ಹೇಳಿದರು.
ಎರಡು ದಿನಗಳ ತರಬೇತಿ ಕಾರ್ಯಕ್ರಮದಲ್ಲಿ ಮಣಿಪಾಲ ವಿವಿಯ ಗ್ರಂಥಾಲಯ ಹಾಗೂ ಮಾಹಿತಿ ತಂತ್ರಜ್ಞಾನ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ.ಶಿವಾನಂದ ಭಟ್ ಅವರಿಂದ ಸಾರ್ವಜನಿಕ ಗ್ರಂಥಾಲಯ ಓದುಗರು ಮತ್ತು ಮಾಹಿತಿ ಆವಶ್ಯಕತೆಗಳು, ಪ್ರೊ. ಮಹಾಬಲೇಶ್ವರ ರಾವ್ ಇವರಿಂದ ಸ್ಮಾರ್ಟ್ ಲೈಬ್ರೇರಿ, ಕಾಪು ಪ್ರಥಮ ದರ್ಜೆ ಕಾಲೇಜಿನ ಗ್ರಂಥಪಾಲಕ ರಾಜಶೇಖರ ಕಂಬಾರ ಅವರು ಸಾರ್ವಜನಿಕ ಮಾಧ್ಯಮ ಪರಿಕರಗಳು ಮತ್ತು ಗ್ರಂಥಾಲಯದಲ್ಲಿ ಅದರ ಉಪಯೋಗಗಳು ಎಂಬ ವಿಷಯದ ಬಗ್ಗೆ ಹಾಗೂ ಜಗತ್ ವೆಂಚರ್ಸ್ ಬೆಂಗಳೂರು ಸಂಸ್ಥೆಯ ಕೀರ್ತಿ ಅವರಿಂದ ಇ-ಗ್ರಂಥಾಲಯ ಬಗ್ಗೆ ಉಪ್ಯಾಸ ನಡೆಯಿತು.
ಬ್ರಹ್ಮಾವರ ಕ್ರಾಸ್ಲ್ಯಾಂಡ್ ಕಾಲೇಜಿನ ಸೋಶಿಯಲ್ ಸೈನ್ಸ್ ವಿಭಾಗದ ಡಾ.ರಾಬರ್ಟ್ ಕ್ಲೈವ್ ಜಿ. ಅವರು ಒತ್ತಡ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ., ಶಕುಂತಳಾ ಕುಂದರ್ ಉಪಸ್ಥಿತರಿದ್ದರು.









