Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರತಿ ಹತ್ತು ಭಾರತೀಯರಲ್ಲಿ ಒಬ್ಬರು...

ಪ್ರತಿ ಹತ್ತು ಭಾರತೀಯರಲ್ಲಿ ಒಬ್ಬರು ಕ್ಯಾನ್ಸರ್‌ಗೆ ತುತ್ತಾಗುತ್ತಾರೆ:ಡಬ್ಲ್ಯುಎಚ್‌ಒ

ವಾರ್ತಾಭಾರತಿವಾರ್ತಾಭಾರತಿ4 Feb 2020 7:50 PM IST
share
ಪ್ರತಿ ಹತ್ತು ಭಾರತೀಯರಲ್ಲಿ ಒಬ್ಬರು ಕ್ಯಾನ್ಸರ್‌ಗೆ ತುತ್ತಾಗುತ್ತಾರೆ:ಡಬ್ಲ್ಯುಎಚ್‌ಒ

ಹೊಸದಿಲ್ಲಿ,ಫೆ.4: ಭಾರತದಲ್ಲಿ 2018ನೇ ಸಾಲಿನಲ್ಲಿ ಅಂದಾಜು 11.6 ಲಕ್ಷ ಹೊಸ ಕ್ಯಾನ್ಸರ್ ಪ್ರಕರಣಗಳು ಪತ್ತೆಯಾಗಿದ್ದು,ಪ್ರತಿ ಹತ್ತು ಭಾರತೀಯರಲ್ಲಿ ಓರ್ವರು ತಮ್ಮ ಜೀವಿತಾವಧಿಯಲ್ಲಿ ಕ್ಯಾನ್ಸರ್‌ಗೆ ತುತ್ತಾಗುತ್ತಾರೆ ಮತ್ತು ಪ್ರತಿ 15 ಭಾರತೀಯರಲ್ಲಿ ಓರ್ವರು ಈ ರೋಗದಿಂದಾಗಿ ಸಾವನ್ನಪ್ಪುತ್ತಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ವಿಶ್ವ ಕ್ಯಾನ್ಸರ್ ದಿನ ಸಂದರ್ಭದಲ್ಲಿ ಬಿಡುಗಡೆಗೊಳಿಸಿರುವ ತನ್ನ ವರದಿಯಲ್ಲಿ ಹೇಳಿದೆ.

2018ರಲ್ಲಿ ಭಾರತದಲ್ಲಿ 7,84,800 ಸಾವುಗಳು ಕ್ಯಾನ್ಸರ್‌ನಿಂದ ಸಂಭವಿಸಿವೆ ಮತ್ತು ಐದು ವರ್ಷಗಳಷ್ಟು ಹಳೆಯದಾದ 22.6 ಲಕ್ಷ ಕ್ಯಾನ್ಸರ್ ಪ್ರಕರಣಗಳಿದ್ದವು ಎಂದಿರುವ ವರದಿಯು,ಸ್ತನ ಕ್ಯಾನ್ಸರ್ (1,62,500 ಪ್ರಕರಣ),ಬಾಯಿ ಕ್ಯಾನ್ಸರ್ (1,20,000),ಗರ್ಭಕೋಶ ಕ್ಯಾನ್ಸರ್ (97,000),ಶ್ವಾಸಕೋಶ ಕ್ಯಾನ್ಸರ್ (68,000),ಹೊಟ್ಟೆಯ ಕ್ಯಾನ್ಸರ್ ಮತ್ತು ಕರುಳು-ಗುದನಾಳ ಕ್ಯಾನ್ಸರ್ (ತಲಾ 57,000) ಭಾರತದಲ್ಲಿ ಆರು ಅತ್ಯಂತ ಸಾಮಾನ್ಯ ಕ್ಯಾನ್ಸರ್‌ಗಳಾಗಿವೆ. ಎಲ್ಲ ಹೊಸ ಕ್ಯಾನ್ಸರ್ ಪ್ರಕರಣಗಳಲ್ಲಿ ಇವುಗಳ ಪಾಲು ಶೇ.49ರಷ್ಟಿದೆ ಎಂದು ತಿಳಿಸಿದೆ.

ಪುರುಷರಲ್ಲಿ 5,70,000 ಹೊಸ ಕ್ಯಾನ್ಸರ್ ಪ್ರಕರಣಗಳಲ್ಲಿ ಬಾಯಿ,ಶ್ವಾಸಕೋಶ,ಹೊಟ್ಟೆ,ಕರುಳು-ಗುದನಾಳ ಮತ್ತು ಅನ್ನನಾಳ ಕ್ಯಾನ್ಸರ್‌ಗಳ ಪಾಲು ಶೇ.45ರಷ್ಟಿತ್ತು. ಮಹಿಳೆಯರಲ್ಲಿ 5,87,000 ಹೊಸ ಕ್ಯಾನ್ಸರ್ ಪ್ರಕರಣಗಳಲ್ಲಿ ಸ್ತನ,ಗರ್ಭಕೋಶ,ಅಂಡಾಶಯ,ಬಾಯಿ ಮತ್ತು ಕರುಳು-ಗುದನಾಳ ಕ್ಯಾನ್ಸರ್‌ಗಳ ಪಾಲು ಶೇ.60ರಷ್ಟಿತ್ತು ಎಂದು ವರದಿಯು ಉಲ್ಲೇಖಿಸಿದೆ.

ಪುರುಷರಲ್ಲಿ ತಂಬಾಕು ಬಳಕೆ ಸಂಬಂಧಿತ ತಲೆ ಮತ್ತು ಗಂಟಲು ಕ್ಯಾನ್ಸರ್‌ಗಳು,ನಿರ್ದಿಷ್ಟವಾಗಿ ಬಾಯಿ ಕ್ಯಾನ್ಸರ್ ಮತ್ತು ಮಹಿಳೆಯರಲ್ಲಿ ಗರ್ಭಕೋಶ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗಿದ್ದು,ಈ ಕ್ಯಾನ್ಸರ್ ವಿಧಗಳು ಕೆಳಮಟ್ಟದ ಸಾಮಾಜಿಕ-ಆರ್ಥಿಕ ಸ್ಥಿತಿಗತಿಯೊಂದಿಗೆ ಗುರುತಿಸಿಕೊಂಡಿವೆ ಎಂದು ವರದಿಯು ಹೇಳಿದೆ.

ಕೆಳ ಮತ್ತು ಮಧ್ಯಮ ಆದಾಯದ ದೇಶಗಳಲ್ಲಿ ಕ್ಯಾನ್ಸರ್ ಕುರಿತು ಹೆಚ್ಚಿನ ಕಾಳಜಿಯನ್ನು ವಹಿಸದಿದ್ದರೆ ಮುಂದಿನ 20 ವರ್ಷಗಳಲ್ಲಿ ಜಾಗತಿಕ ಕ್ಯಾನ್ಸರ್ ಪ್ರಮಾಣ ಶೇ.60ರಷ್ಟು ಹೆಚ್ಚಬಹುದು ಎಂದೂ ಡಬ್ಲುಎಚ್‌ಒ ಎಚ್ಚರಿಕೆಯನ್ನು ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X