Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಾಹೀನ್‌ಬಾಗ್ ಶೂಟರ್ ಆಪ್ ಸದಸ್ಯ ಎಂದ...

ಶಾಹೀನ್‌ಬಾಗ್ ಶೂಟರ್ ಆಪ್ ಸದಸ್ಯ ಎಂದ ಪೊಲೀಸರು

ಆಪ್‌ನಿಂದ ನಿರಾಕರಣೆ

ವಾರ್ತಾಭಾರತಿವಾರ್ತಾಭಾರತಿ4 Feb 2020 11:28 PM IST
share
ಶಾಹೀನ್‌ಬಾಗ್ ಶೂಟರ್ ಆಪ್ ಸದಸ್ಯ ಎಂದ ಪೊಲೀಸರು

ಹೊಸದಿಲ್ಲಿ,ಫೆ.4: ಸಿಎಎ ವಿರುದ್ಧ ಧರಣಿ ಪ್ರತಿಭಟನೆ ನಡೆಯುತ್ತಿರುವ ದಿಲ್ಲಿಯ ಶಾಹೀನ್‌ಬಾಗ್‌ನಲ್ಲಿ ಗುಂಡು ಹಾರಿಸಿದ್ದ ಕಪಿಲ್  ಬೈಸಲಾ ಆಮ್ ಆದ್ಮಿ ಪಾರ್ಟಿ (ಆಪ್)ಯ ಸದಸ್ಯ ಎಂದು ಪೊಲೀಸರು ಹೇಳಿದ್ದು,ಇದನ್ನು ಆಪ್ ನಿರಾಕರಿಸಿದೆ. ಇದರೊಂದಿಗೆ ಬಿಜೆಪಿ ಮತ್ತು ಆಪ್ ನಡುವೆ ರಾಜಕೀಯ ಕೆಸರೆರಚಾಟ ನಡೆದಿದೆ. ತನ್ಮಧ್ಯೆ  ಕಪಿಲ್  ಆಪ್ ಸದಸ್ಯ ಎನ್ನುವುದನ್ನು ಆತನ ಕುಟುಂಬವೂ ನಿರಾಕರಿಸಿದೆ.

ಕಪಿಲ್ ಮತ್ತು ಆತನ ತಂದೆ 2019ರ ಆರಂಭದಲ್ಲಿ ಆಪ್‌ಗೆ ಸೇರ್ಪಡೆಗೊಂಡಿದ್ದರು. ಕಪಿಲ ಹಾಗೂ ಆತನ ತಂದೆ ಆಪ್‌ಗೆ ಸೇರ್ಪಡೆಗೊಳ್ಳುತ್ತಿರುವ ಫೋಟೊಗಳು ಆತನ ಮೊಬೈಲ್‌ನಲ್ಲಿ ಪತ್ತೆಯಾಗಿದ್ದು,ಪೋನ್‌ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ರಾಜೇಶ ದೇವ್ ಮಂಗಳವಾರ ಇಲ್ಲ ಸುದ್ದಿಗಾರರಿಗೆ ತಿಳಿಸಿದರು. ಕಪಿಲ್ ಆಪ್ ನಾಯಕರು ಮತ್ತು ಕಾರ್ಯಕರ್ತರೊಂದಿಗೆ ಇರುವ ಫೋಟೊಗಳನ್ನು ಪೊಲೀಸರು ಬಿಡುಗಡೆಗೊಳಿಸಿದ್ದಾರೆ.

ಆಪ್ ಅನ್ನು ತರಾಟೆಗೆತ್ತಿಕೊಂಡಿರುವ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು, ಆಪ್ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರು ರಾಷ್ಟ್ರದ ಭದ್ರತೆಯೊಂದಿಗೆ ಆಟವಾಡುತ್ತಿದ್ದಾರೆ ಮತ್ತು ಅಂತಹವರನ್ನು ದೇಶವು ಎಂದಿಗೂ ಕ್ಷಮಿಸುವುದಿಲ್ಲ. ದಿಲ್ಲಿಯ ಜನರು ಸೂಕ್ತ ಉತ್ತರವನ್ನು ನೀಡಲಿದ್ದಾರೆ ಎಂದು ಟ್ವೀಟಿಸಿದ್ದಾರೆ.

ಚುನಾವಣೆ ಸಮೀಪಿಸಿರುವಾಗ ದಿಲ್ಲಿ ಪೊಲೀಸರು ಹೇಳಿಕೆಯನ್ನು ನೀಡಿರುವ ಸಮಯ ಮತ್ತು ಅದರ ಹಿಂದಿನ ಉದ್ದೇಶವನ್ನು ಪ್ರಶ್ನಿಸಿರುವ ಕೇಜ್ರಿವಾಲ್,ದೇವ್ ವಿರುದ್ಧ ಚುನಾವಣಾ ಆಯೋಗದ ಮೆಟ್ಟಿಲೇರುವುದಾಗಿ ತಿಳಿಸಿದ್ದಾರೆ.

ಈ ಸಂಚಿನಲ್ಲಿ ಎಷ್ಟು ಜನ ಭಾಗಿಯಾಗಿದ್ದಾರೆ? ಇಂತಹ ಹೇಳಿಕೆಗಳನ್ನು ನೀಡುವಂತೆ ದೇವ್‌ಗೆ ಗೃಹಸಚಿವ ಅಮಿತ್ ಶಾ ಸೂಚಿಸುತ್ತಿದ್ದಾರೆಯೇ? ಯಾರ ನಿರ್ದೇಶನದ ಮೇರೆಗೆ ದೇವ್ ಇಂತಹ ಹೇಳಿಕೆ ನೀಡಲು ಧೈರ್ಯ ಮಾಡಿದ್ದರು ಎಂದು ಆಪ್ ನಾಯಕ ಸಂಜಯ ಸಿಂಗ್ ಪ್ರಶ್ನಿಸಿದರು. ತನಿಖೆಯಿನ್ನೂ ಪ್ರಗತಿಯಲ್ಲಿರುವಾಗ ಶೂಟರ್ ಆಪ್‌ಗೆ ಸೇರಿದವನು ಎಂದು ದೇವ್ ಹೇಳಿದ್ದೇಕೆ ಎಂದೂ ಅವರು ಪ್ರಶ್ನಿಸಿದರು.

ಇದಕ್ಕೂ ಮುನ್ನ ಸಿಂಗ್ ಅವರು ಈ ಘಟನೆಯು ಬಿಜೆಪಿಯ ಪಿತೂರಿಯಾಗಿದೆ ಮತ್ತು ಅದರ ಕೊಳಕು ರಾಜಕೀಯಕ್ಕೆ ಇನ್ನೊಂದು ಉದಾಹರಣೆಯಾಗಿದೆ ಎಂದಿದ್ದರು.

‘ಎಲ್ಲಿಂದ ಈ ಚಿತ್ರಗಳು ಹರಿದಾಡುತ್ತಿವೆ ಎನ್ನುವದು ನನಗೆ ಗೊತ್ತಿಲ್ಲ. ಕಪಿಲ್‌ ಗಾಗಲೀ ನನ್ನ ಕುಟುಂಬದ ಇತರ ಸದಸ್ಯರಿಗೆ ಯಾವುದೇ ರಾಜಕೀಯ ಪಕ್ಷದ ನಂಟಿಲ್ಲ. ನನ್ನ ಸೋದರ ಗಜೆ ಸಿಂಗ್ (ಕಪಿಲ ತಂದೆ) 2008ರಲ್ಲಿ ಬಿಎಸ್‌ಪಿ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. ಆ ಬಳಿಕ  ಕುಟುಂಬದ ಯಾರೂ ಯಾವುದೇ ರಾಜಕೀಯ ಪಕ್ಷದೊಂದಿಗೆ ಗುರುತಿಸಿಕೊಂಡಿಲ್ಲ ’ಎಂದು ಕಪಿಲ್ ಚಿಕ್ಕಪ್ಪ ಫತೇಶ ಸಿಂಗ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X