Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎನ್‌ಆರ್‌ಸಿಯಿಂದ ಎಲ್ಲಾ ಧರ್ಮಗಳ ಮೇಲೂ...

ಎನ್‌ಆರ್‌ಸಿಯಿಂದ ಎಲ್ಲಾ ಧರ್ಮಗಳ ಮೇಲೂ ಪರಿಣಾಮ: ಜಾರಿಗೆ ಅವಕಾಶ ನೀಡುವುದಿಲ್ಲ; ಉದ್ಧವ್ ಠಾಕ್ರೆ

ವಾರ್ತಾಭಾರತಿವಾರ್ತಾಭಾರತಿ5 Feb 2020 7:53 PM IST
share
ಎನ್‌ಆರ್‌ಸಿಯಿಂದ ಎಲ್ಲಾ ಧರ್ಮಗಳ ಮೇಲೂ ಪರಿಣಾಮ: ಜಾರಿಗೆ ಅವಕಾಶ ನೀಡುವುದಿಲ್ಲ; ಉದ್ಧವ್ ಠಾಕ್ರೆ

ಮುಂಬೈ, ಫೆ.5: ಪೌರತ್ವ ಕಾಯ್ದೆ ಹಿಂದುಗಳ ಸಹಿತ ಎಲ್ಲಾ ಧರ್ಮದವರ ಮೇಲೂ ಪರಿಣಾಮ ಬೀರುತ್ತದೆ. ಈ ಕಾಯ್ದೆ ಜಾರಿಯಾಗಲು ತನ್ನ ಸರಕಾರ ಅವಕಾಶ ನೀಡುವುದಿಲ್ಲ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ಪಕ್ಷದ ಮುಖವಾಣಿ ‘ಸಾಮ್ನ’ದಲ್ಲಿ ಪ್ರಕಟವಾದ ಸಂದರ್ಶನದ ಅಂತಿಮ ಕಂತಿನಲ್ಲಿ ಪೌರತ್ವ ಕಾಯ್ದೆಯ ಬಗ್ಗೆ ಪ್ರಸ್ತಾಪಿಸಿರುವ ಠಾಕ್ರೆ, ಪೌರತ್ವ ಕಾಯ್ದೆಯು ದೇಶದ ನಾಗರೀಕರನ್ನು ದೇಶದಿಂದ ಹೊರಗಟ್ಟುವ ಉದ್ದೇಶ ಹೊಂದಿಲ್ಲ ಎಂಬುದನ್ನು ವಿಶ್ವಾಸದಿಂದ ಹೇಳಬಲ್ಲೆ. ಆದರೆ ಈ ಕಾಯ್ದೆಯು ಹಿಂದುಗಳ ಮೇಲೂ ಪರಿಣಾಮ ಬೀರುತ್ತದೆ ಎಂದಿದ್ದಾರೆ. ಎನ್‌ಆರ್‌ಸಿ ಪ್ರಕ್ರಿಯೆಯಡಿ ಎಲ್ಲಾ ಪೌರರೂ ತಮ್ಮ ಪೌರತ್ವ ಸಾಬೀತುಪಡಿಸಬೇಕು. ಅಸ್ಸಾಂನಲ್ಲಿ 19 ಲಕ್ಷ ಜನರು ತಮ್ಮ ಪೌರತ್ವ ಸಾಬೀತುಪಡಿಸಲು ವಿಫಲವಾಗಿದ್ದು ಇದರಲ್ಲಿ 14 ಲಕ್ಷ ಹಿಂದೂಗಳು. ಎನ್‌ಆರ್‌ಸಿ ಜಾರಿಯಾದರೆ ಈಗ ಅದನ್ನು ಬೆಂಬಲಿಸುವವರ ಮೇಲೂ ಪರಿಣಾಮ ಬೀರುತ್ತದೆ ಎಂದು ಪೌರತ್ವ ಕಾಯ್ದೆ ಬೆಂಬಲಿಸುತ್ತಿರುವ ತನ್ನ ಸೋದರ ಸಂಬಂಧಿ ರಾಜ್‌ಠಾಕ್ರೆಯವರನ್ನು ಪರೋಕ್ಷವಾಗಿ ಟೀಕಿಸಿದರು. ತಮ್ಮ ದೇಶದಲ್ಲಿ ಕಿರುಕುಳಕ್ಕೆ ಒಳಗಾಗಿ ಭಾರತದಲ್ಲಿ ಪೌರತ್ವ ಪಡೆಯಲು ಅರ್ಜಿ ಸಲ್ಲಿಸಿದ ನೆರೆದೇಶಗಳ ಅಲ್ಪಸಂಖ್ಯಾತರ ಬಗ್ಗೆ ತಿಳಿದುಕೊಳ್ಳಲು ಭಾರತೀಯರಿಗೆ ಹಕ್ಕು ಇದೆ. ಅವರು ಇಲ್ಲಿಗೆ ಬಂದಾಗ ಅವರಿಗೆ ಪ್ರಧಾನಮಂತ್ರಿ ಆವಾಸ್(ವಸತಿ) ಯೋಜನೆಯಡಿ ಮನೆ ನಿರ್ಮಿಸಿ ಕೊಡಲಾಗುತ್ತದೆಯೇ? ಅವರ ಮಕ್ಕಳ ಶಿಕ್ಷಣ ಮತ್ತು ಉದ್ಯೋಗದ ಕತೆ ಏನು? ಇಂತಹ ಪ್ರಮುಖ ವಿಷಯಗಳ ಬಗ್ಗೆ ತಿಳಿದುಕೊಳ್ಳುವ ಹಕ್ಕು ಇದೆ. ನನ್ನ ರಾಜ್ಯದಲ್ಲಿ ಇವರಿಗೆ ಉಳಿದುಕೊಳ್ಳಲು ಎಲ್ಲಿ ವ್ಯವಸ್ಥೆ ಮಾಡಲಾಗುತ್ತದೆ ಎಂಬುದನ್ನು ಮುಖ್ಯಮಂತ್ರಿಯಾಗಿ ತಿಳಿದುಕೊಳ್ಳುವ ಅಧಿಕಾರ ತನಗಿದೆ. ರಾಜ್ಯದ ಜನತೆಗೇ ಸೂಕ್ತ ವಸತಿ ಸೌಕರ್ಯವಿಲ್ಲ. ಹೀಗಿರುವಾಗ ಹೊಸದಾಗಿ ಬರುವವರನ್ನು ಹೇಗೆ ನೆಲೆಗೊಳಿಸಲಾಗುತ್ತದೆ ಎಂದು ಠಾಕ್ರೆ ಪ್ರಶ್ನಿಸಿದ್ದಾರೆ. ಪಾಕ್ ಮೂಲದ ಗಾಯಕ ಅದ್ನಾನ್ ಸಮಿಗೆ ಪದ್ಮಶ್ರೀ ಪುರಸ್ಕಾರ ನೀಡುವ ಕೇಂದ್ರ ಸರಕಾರದ ನಿರ್ಧಾರವನ್ನು ಟೀಕಿಸಿದ ಠಾಕ್ರೆ, ವಲಸಿಗರು ವಲಸಿಗರೇ. ಅವರಿಗೆ ಪದ್ಮಶ್ರೀ ಪುರಸ್ಕಾರ ನೀಡುವುದು ಸರಿಯಲ್ಲ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X