ಆಪ್ತ ಸಹಾಯಕನಿಂದ ಶೂ ಹಾಕಿಸಿಕೊಂಡ ಮಾಜಿ ಸಿಎಂ ಸಿದ್ದರಾಮಯ್ಯ
ಚಾಮರಾಜನಗರ, ಫೆ.6: ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆಪ್ತ ಸಹಾಯಕನಿಂದ ಶೂ ಹಾಕಿಸಿಕೊಂಡ ಘಟನೆ ನಡೆದಿದೆ.
ಚಾಮರಾಜನಗರ ಜಿಲ್ಲೆಯ ನಲ್ಲೂರು ಮೋಳೆ ಗ್ರಾಮದ ಮಲ್ಲಿಗಮ್ಮ ದೇವಸ್ಥಾನ ಉದ್ಘಾಟನೆಗೆ ಆಗಮಿಸಿರುವ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಸಹಾಯಕನಿಂದ ಶೂ ಹಾಕಿಸಿಕೊಂಡರು. ದೇವಸ್ಥಾನದ ರಾಜಗೋಪುರ ಉದ್ಘಾಟನೆ ನಂತರ ಸಿದ್ದರಾಮಯ್ಯ ಮಾದ್ಯಮದವರ ಜೊತೆ ಮಾತನಾಡುವ ವೇಳೆ ಈ ಘಟನೆ ನಡೆಯಿತು. ಸಿದ್ದರಾಮಯ್ಯ ಅವರು ದೇವಸ್ಥಾನಕ್ಕೆ ಆಗಮಿಸಿದಾಗಲೂ ತನ್ನ ಶೂ ಅನ್ನು ಆಪ್ತ ಸಹಾಯಕನ ಮೂಲಕ ತೆಗೆಸಿದ್ದಾರೆ ಎನ್ನಲಾಗಿದೆ.
ಈ ಸಂದರ್ಭ ಮಾಜಿ ಸಂಸದರಾದ ಧ್ರುವನಾರಾಯಣ್, ಮಾಜಿ ಸಚಿವ ಹಾಗೂ ಸ್ಥಳೀಯ ಶಾಸಕ ಸಿ.ಪುಟ್ಟರಂಗಶೆಟ್ಟಿ, ಮಾಜಿ ಶಾಸಕ ಎ.ಆರ್ ಕೃಷ್ಣಮೂರ್ತಿ ಹಾಜರಿದ್ದರು.
Next Story