Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಮಾನತುಲ್ಲಾ ಖಾನ್ ರ 'ಝರಿಯಾ' ಸಂಬಿತ್...

ಅಮಾನತುಲ್ಲಾ ಖಾನ್ ರ 'ಝರಿಯಾ' ಸಂಬಿತ್ ಪಾತ್ರಾಗೆ 'ಶರಿಯಾ ಆದ ಕಥೆ !

ವಾರ್ತಾಭಾರತಿವಾರ್ತಾಭಾರತಿ6 Feb 2020 10:59 PM IST
share
ಅಮಾನತುಲ್ಲಾ ಖಾನ್ ರ ಝರಿಯಾ ಸಂಬಿತ್ ಪಾತ್ರಾಗೆ ಶರಿಯಾ ಆದ ಕಥೆ !

ಹೊಸದಿಲ್ಲಿ: ಸುಳ್ಳು ಸುದ್ದಿಗಳನ್ನು ಟ್ವೀಟ್ ಮಾಡುತ್ತಾ ನಗೆಪಾಟಲಿಗೀಡಾಗುವ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಈ ಬಾರಿ ಮತ್ತೊಂದು ವಿಡಿಯೋದಿಂದ ಮತ್ತೊಮ್ಮೆ ನಗೆಪಾಟಲಿಗೀಡಾಗಿದ್ದಾರೆ.

ಈ ಬಾರಿ ಅವರು ದಿಲ್ಲಿಯಲ್ಲಿ ಆಮ್ ಆದ್ಮಿ ಪಕ್ಷದ ಓಖ್ಲಾ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಅಮಾನತುಲ್ಲಾ ಖಾನ್ ಅವರ ಹೇಳಿಕೆಯೊಂದನ್ನು ತಿರುಚಿ ಸುಳ್ಳು ಪ್ರಚಾರ ಮಾಡುವ ಯತ್ನ ನಡೆಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿ, "ದಬ್ಬಾಳಿಕೆಗೊಂದು ಕೊನೆ ಇರಬೇಕು ಎಂದು ಅಲ್ಲಾಹನು ನಿರ್ಧರಿಸಿದ್ದಾನೆ. ನಾವು ಶರಿಯಾವನ್ನು ಅನುಸರಿಸುತ್ತೇವೆ. ಇದು ಎಲ್ಲಿಂದಲೋ ಆರಂಭವಾಗಬೇಕು?" ಎಂದು ಅಮಾನತುಲ್ಲಾ ಖಾನ್ ಹೇಳಿದ್ದಾಗಿ ಪಾತ್ರಾ ಟ್ವೀಟ್  ನಲ್ಲಿ ಆರೋಪಿಸಿದ್ದರು. ಈ ಟ್ವೀಟ್ ಗಾಗಿ ಅವರು ಒಂದು ವಿಡಿಯೋ ಕೂಡ ಪೋಸ್ಟ್ ಮಾಡಿದ್ದರು. 15 ಸಾವಿರ ಬಾರಿ ಈ ಟ್ವೀಟ್ ರಿಟ್ವೀಟ್ ಆಗಿತ್ತು.

ಇದಿಷ್ಟೇ ಅಲ್ಲದೆ ಸಂಬಿತ್ ಪಾತ್ರಾ ಇದು ಆಮ್ ಆದ್ಮಿ ಪಕ್ಷದ ಸಿದ್ಧಾಂತ ಎಂದಿದ್ದರು. "ಎಲ್ಲವನ್ನೂ ಅಲ್ಲಾಹನೇ ನಿರ್ಧರಿಸುತ್ತಾನೋ ಅಥವಾ ನಿರ್ಧರಿಸುವವರು ನೀವೋ? ನೀವು ಶರಿಯಾ ಆಗಲು ಬಯಸಿದ್ದೀರೋ ಅಥವಾ ಇಲ್ಲವೇ?" ಎಂದು ಪ್ರಶ್ನಿಸಿದ್ದರು.

ವಾಸ್ತವವೇನು?

ಆದರೆ ಈ ವಿಡಿಯೋದ ಸತ್ಯಾಂಶದ ಬಗ್ಗೆ ಪರಿಶೀಲಿಸಿದಾಗ ಅಮಾನತುಲ್ಲಾ 'ಹಮ್ ಝರಿಯಾ ಬನೇಂಗೇ' ಎಂದು ಹೇಳಿದ್ದರು ಎನ್ನುವುದು ಖಚಿತಗೊಂಡಿದೆ. ಆದರೆ ಸಂಬಿತ್ ಪಾತ್ರಾ ಮತ್ತು ಇತರ ಬಿಜೆಪಿ ಬೆಂಬಲಿಗರು 'ಝರಿಯಾ'ವನ್ನು  'ಶರಿಯಾ' ಎಂದು ತಿರುಚಿದ್ದಾರೆ.

ಹೀಗಾಗಿ ಅಮಾಮತುಲ್ಲಾ ಖಾನ್ ಮಾತುಗಳ ಅರ್ಥ, "ದಬ್ಬಾಳಿಕೆಗೊಂದು ಕೊನೆ ಇರಬೇಕು ಎಂದು ಅಲ್ಲಾಹನು ನಿರ್ಧರಿಸಿದ್ದಾನೆ. ನಮಗೊಂದು ದಾರಿ ಸಿಗುತ್ತದೆ. ಇದು ಎಲ್ಲಿಂದಲೋ ಆರಂಭವಾಗಬೇಕು?" ಎಂದಾಗಿದೆ.

ಬಿಜೆಪಿ ವಕ್ತಾರರ ಈ ಸುಳ್ಳು ಬಯಲಾಗುತ್ತಲೇ ಹಲವು ಟ್ವಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದು, 'ಕಿವಿಗೆ ಎಣ್ಣೆ ಬಿಟ್ಟಿದ್ದೀರಾ' ಎಂದು ಪ್ರಶ್ನಿಸಿದ್ದಾರೆ.

“अल्लाह ने तय कर दिया है की इन ज़ालिमों का ख़ात्मा होगा ..हम शरिया बनेंगे ..कहीं न कहीं से शुरुआत तो होती ही है ..”
AAP का अमानतउल्लाह खान
दोस्तों ये है AAP के विचार
अब ज़रा आप भी सोचिए ..सब अल्लाह ही तय करेंगे या आप भी कुछ तय करेंगे?
आप शरिया बनना चाहतें है या नहीं?? pic.twitter.com/v2nRfESBBF

— Sambit Patra (@sambitswaraj) February 5, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X