Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಇಂತಹ ಸ್ಪರ್ಧೆಗಳು ಬೇಕಿತ್ತೇ?

ಇಂತಹ ಸ್ಪರ್ಧೆಗಳು ಬೇಕಿತ್ತೇ?

-ಇಸ್ಮತ್ ಪಜೀರ್, ಮಂಗಳೂರು-ಇಸ್ಮತ್ ಪಜೀರ್, ಮಂಗಳೂರು6 Feb 2020 11:49 PM IST
share

ಮಾನ್ಯರೇ,

ಬೆಳಗಾವಿಯಲ್ಲಿರುವ ಕರ್ನಾಟಕ ಸರಕಾರದ ಅಧೀನ ಸಂಸ್ಥೆಯಾದ ಬಸವರಾಜ ಕಟ್ಟೀಮನಿ ಪ್ರತಿಷ್ಠಾನವು 2019ರ ಕೊನೆಯಲ್ಲಿ ಬಸವರಾಜ ಕಟ್ಟೀಮನಿಯವರ ಕಥೆಗಳ ಮೇಲೆ ವಿಮರ್ಶಾ ಸ್ಪರ್ಧೆ ಏರ್ಪಡಿಸಿತ್ತು. ಸ್ಪರ್ಧೆಯ ನಿಯಮಾವಳಿಯಂತೆ ವಿಜೇತ ಪ್ರಬಂಧಗಳಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನ, ನಗದು ಬಹುಮಾನ ನೀಡುವುದಾಗಿಯೂ ಪ್ರಕಟನೆಯಲ್ಲಿ ತಿಳಿಸಲಾಗಿತ್ತು. ಅದರಂತೆ ರಾಜ್ಯದ ವಿವಿಧೆಡೆಯಿಂದ ಅನೇಕಾರು ವಿದ್ಯಾರ್ಥಿಗಳು, ಬರಹಗಾರರು ಮತ್ತು ಸಾಹಿತ್ಯಾಸಕ್ತರು ಸ್ಪರ್ಧೆಗೆ ಪ್ರಬಂಧಗಳನ್ನು ಕಳುಹಿಸಿದ್ದರು.

ಮೊನ್ನೆ ಜನವರಿ 21ನೇ ತಾರೀಕಿಗೆ ಫಲಿತಾಂಶ ಪ್ರಕಟಿಸಲಾಗಿತ್ತು. ಆದರೆ ಫಲಿತಾಂಶ ಮಾತ್ರ ವಿಚಿತ್ರವಾಗಿತ್ತು. ಹೇಗೆಂದರೆ ಪ್ರಥಮ ಬಹುಮಾನ ಯಾರಿಗೂ ಇಲ್ಲ. ದ್ವಿತೀಯ ಮತ್ತು ತೃತೀಯ ಬಹುಮಾನಕ್ಕೆ ತಲಾ ಇಬ್ಬರ ಪ್ರಬಂಧಗಳನ್ನು ಆಯ್ಕೆ ಮಾಡಲಾಗಿತ್ತು.ಸದ್ರಿ ಸ್ಪರ್ಧೆಯಲ್ಲಿ ವಿಜೇತನಾದ ನನ್ನ ಗೆಳೆಯನೊಬ್ಬ ಬಸವರಾಜ ಕಟ್ಟೀಮನಿ ಪ್ರತಿಷ್ಠಾನದ ಕಚೇರಿಯನ್ನು ಸಂಪರ್ಕಿಸಿ ವಿವರಣೆ ಕೇಳಿದಾಗ ಪ್ರಥಮ ಬಹುಮಾನಕ್ಕೆ ಆಯ್ಕೆಯಾಗುವ ಗುಣಮಟ್ಟದ ಪ್ರಬಂಧಗಳು ಬರಲಿಲ್ಲವಾದ್ದರಿಂದ ಪ್ರಥಮ ಬಹುಮಾನ ಘೋಷಿಸಿಲ್ಲ ಎಂಬ ಸಮಜಾಯಿಷಿ ಕೊಟ್ಟರು. ಇದೆಂತಹ ವಿಚಿತ್ರ ಸ್ಪಷ್ಟೀಕರಣವೋ ಗೊತ್ತಾಗುತ್ತಿಲ್ಲ. ಮೌಲ್ಯಮಾಪಕರು ಅಂಕ ಹಾಕಿದ್ದರಲ್ಲಿ ಯಾವುದಕ್ಕೆ ಅತೀ ಹೆಚ್ಚು ಅಂಕ ಬರುತ್ತದೋ ಅದನ್ನು ಪ್ರಥಮ ಎಂದು ಘೋಷಿಸುವುದು ವಾಡಿಕೆ. ಪ್ರಥಮ ಬಹುಮಾನಕ್ಕೆ ಆಯ್ಕೆಯಾಗದೆ ದ್ವಿತೀಯ ಮತ್ತು ತೃತೀಯ ಬಹುಮಾನ ಹೇಗೆ ಘೋಷಿಸಲಾಗುತ್ತದೆ...?

 ಸಾಮಾನ್ಯವಾಗಿ ಒಂದು ನಿರ್ದಿಷ್ಟ ಸಂಖ್ಯೆಯ ಪ್ರಬಂಧಗಳು ಬರದಿದ್ದಾಗ ಸ್ಪರ್ಧೆಯ ಕೊನೆಯ ದಿನಾಂಕವನ್ನು ಮತ್ತಷ್ಟು ಮುಂದೂಡಿ ಪುನಃ ಪ್ರಕಟನೆ ಕೊಡುವುದು, ಅದಕ್ಕೂ ಸೂಕ್ತ ಸ್ಪಂದನೆ ಸಿಗದಿದ್ದಾಗ ಸ್ಪರ್ಧೆಯನ್ನು ರದ್ದುಪಡಿಸುವ ಕ್ರಮವಾದರೂ ಇದೆ. ಆದರೆ ಇದಂತೂ ಬಹಳ ವಿಚಿತ್ರ ಸ್ಪರ್ಧಾ ನಿಯಮದಂತೆ ಕಾಣುತ್ತಿದೆ. ಒಂದು ವೇಳೆ ಯಾವುದಾದರೂ ಆರ್ಥಿಕ ಚೈತನ್ಯವಿಲ್ಲದ ಸಂಸ್ಥೆಯೊಂದು ಬಹುಮಾನದ ಮೊತ್ತ ಕೊಡಲಾಗದೆ ಅದನ್ನು ಕಡಿತಗೊಳಿಸಿದರೆ ಅದನ್ನು ಕ್ಷಮಿಸಬಹುದಿತ್ತು. ಆದರೆ ಇದು ಸರಕಾರಿ ಸಂಸ್ಥೆಯಾಗಿರುವುದರಿಂದ ಇಂತಹ ನಿಯಮಾವಳಿಗಳನ್ನು ಸ್ಪರ್ಧೆಗೆ ಪ್ರಬಂಧಗಳು ಬಂದು ಮೌಲ್ಯಮಾಪಕರು ಆಯ್ಕೆ ಮಾಡಿದ ಬಳಿಕ ಏಕಾಏಕಿ ಹೇರುವುದು ಸಮಂಜಸವಲ್ಲ. ಕನ್ನಡದ ಓರ್ವ ಅತೀ ಮಹತ್ವದ ಸಾಹಿತಿಯಾದ ಬಸವರಾಜ್ ಕಟ್ಟೀಮನಿ ಹೆಸರಲ್ಲಿ ಸರಕಾರಿ ಸಂಸ್ಥೆಯೊಂದು ಸ್ಪರ್ಧೆ ನಡೆಸಿ ಪ್ರಥಮ ಬಹುಮಾನವನ್ನು ರದ್ದುಗೊಳಿಸುವುದು ಅವರಿಗೆ ಮತ್ತು ಕನ್ನಡ ಸಾಹಿತ್ಯಕ್ಕೆ ಮಾಡುವ ಅವಮಾನ. ಆದುದರಿಂದ ಯಾರಿಗೆ ಮೌಲ್ಯಮಾಪಕರು ಅತೀ ಹೆಚ್ಚು ಅಂಕ ನೀಡಿದ್ದಾರೋ ಅವರಿಗೆ ಪ್ರಥಮ ಬಹುಮಾನ ಘೋಷಣೆ ಮಾಡಬೇಕು. ಅದು ಸಾಧ್ಯವಿಲ್ಲವಾದರೆ ಇಂತಹ ಸ್ಪರ್ಧೆಗಳನ್ನು ಮುಂದೆಂದೂ ಏರ್ಪಡಿಸಬಾರದು.

share
-ಇಸ್ಮತ್ ಪಜೀರ್, ಮಂಗಳೂರು
-ಇಸ್ಮತ್ ಪಜೀರ್, ಮಂಗಳೂರು
Next Story
X