Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಮರ್ ಅಬ್ದುಲ್ಲಾ ವಿರುದ್ಧ ಹರಿಹಾಯಲು...

ಒಮರ್ ಅಬ್ದುಲ್ಲಾ ವಿರುದ್ಧ ಹರಿಹಾಯಲು ಸಂಸತ್ತಿನಲ್ಲಿ 'ಫೇಕಿಂಗ್ ನ್ಯೂಸ್' ಲೇಖನದ ಹೇಳಿಕೆ ಉಲ್ಲೇಖಿಸಿದ ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ7 Feb 2020 12:24 PM IST
share
ಒಮರ್ ಅಬ್ದುಲ್ಲಾ ವಿರುದ್ಧ ಹರಿಹಾಯಲು ಸಂಸತ್ತಿನಲ್ಲಿ ಫೇಕಿಂಗ್ ನ್ಯೂಸ್ ಲೇಖನದ ಹೇಳಿಕೆ ಉಲ್ಲೇಖಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ: ಗುರುವಾರ ಲೋಕಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಒಂದು ಗಂಟೆಗೂ ಅಧಿಕ  ಸಮಯ ಮಾಡಿದ ಭಾಷಣದಲ್ಲಿ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ನಾಯಕ, ಸದ್ಯ ಸಾರ್ವಜನಿಕ ಸುರಕ್ಷತಾ ಕಾಯಿದೆಯನ್ವಯ ಬಂಧನದಲ್ಲಿರುವ ಒಮರ್ ಅಬ್ದುಲ್ಲಾ ಅವರು ಹಿಂದೆ ನೀಡಿದ್ದಾರೆನ್ನಲಾದ ಹೇಳಿಕೆಯೊಂದನ್ನು ಉಲ್ಲೇಖಿಸಿದ್ದರು. "370ನೇ ವಿಧಿ ರದ್ದತಿ ಭಾರೀ ಭೂಕಂಪನವನ್ನೇ ಸೃಷ್ಟಿಸಿ ಕಾಶ್ಮೀರವನ್ನು ಭಾರತದಿಂದ ಪ್ರತ್ಯೇಕಿಸುವುದು,'' ಎಂಬುದೇ ಆ ಹೇಳಿಕೆಯಾಗಿತ್ತು.

ಪ್ರಧಾನಿಯ ಭಾಷಣದ ಈ ನಿರ್ದಿಷ್ಟ ತುಣುಕನ್ನು ಬಿಜೆಪಿ ತನ್ನ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ ಮೂಲಕ ಕೂಡ ಪೋಸ್ಟ್ ಮಾಡಿದೆ.

ವಾಸ್ತವವೇನು? : ವಾಸ್ತವವಾಗಿ ವಿಡಂಬನಾತ್ಮಕ ವೆಬ್ ತಾಣ `ಫೇಕಿಂಗ್ ನ್ಯೂಸ್' ಇದರಲ್ಲಿ ಪ್ರಕಟವಾದ  ಲೇಖನವೊಂದರಲ್ಲಿದ್ದ ಓಮರ್ ಅಬ್ದುಲ್ಲಾ ಅವರ ಹೇಳಿಕೆಯನ್ನು ಸಂಸತ್ತಿನಲ್ಲಿ ಪ್ರಧಾನಿ ಉಲ್ಲೇಖಿಸಿದ್ದರು. ಫೇಕಿಂಗ್ ನ್ಯೂಸ್‍ನ ಈ ನಿರ್ದಿಷ್ಟ ಲೇಖನ ಮೇ 28, 2014ರಂದು ಪ್ರಕಟವಾಗಿತ್ತು.

ಈ ವಿಡಂಬನಾತ್ಮಕ ಲೇಖನ ಪ್ರಕಟಗೊಳ್ಳುವ ಮುನ್ನಾ ದಿನ  ಒಮರ್ ಅಬ್ದುಲ್ಲಾ ಅವರು 370ನೇ ವಿಧಿ  ಹಾಗೂ ಮೋದಿ ಸರಕಾರದ ಕುರಿತಂತೆ ಒಂದು ಟ್ವೀಟ್ ಪೋಸ್ಟ್ ಮಾಡಿದ್ದರು. 370ನೇ ವಿಧಿ ಅಸ್ತಿತ್ವದಲ್ಲಿಲ್ಲದೇ ಇದ್ದರೆ ಜಮ್ಮು ಕಾಶ್ಮೀರ ಭಾರತದ  ಭಾಗವಾಗಿ ಉಳಿಯುವುದಿಲ್ಲ ಎಂಬರ್ಥದ ಟ್ವೀಟ್ ಅನ್ನು ಅವರು ಪೋಸ್ಟ್ ಮಾಡಿದ್ದರು. ಆದರೆ ಅಲ್ಲಿ ಭೂಕಂಪನದ ಉಲ್ಲೇಖವಿರಲಿಲ್ಲ. ಈ ಶಬ್ದ ಫೇಕಿಂಗ್ ನ್ಯೂಸ್ ಲೇಖನದಲ್ಲಿ ಮಾತ್ರ ಕಾಣಿಸಿದೆ.

ಗೂಗಲ್ ಸರ್ಚ್ ಮಾಡಿದಾಗಲೂ ಮೋದಿ ಅವರು ಉಲ್ಲೇಖಿಸಿದ ಓಮರ್ ಅಬ್ದುಲ್ಲಾ ಅವರ ಹೇಳಿಕೆಯ 'ಭೂಕಂಪ' ಪದ ಇರುವ ವರದಿ ಎಲ್ಲೂ ಕಂಡು ಬರುವುದಿಲ್ಲ. ಟ್ವಿಟ್ಟರ್ ನಲ್ಲಿ  ಇದೇ ಪದವನ್ನು ಹಿಂದಿ ಹಾಗೂ ಇಂಗ್ಲಿಷಿನಲ್ಲಿ ಉಲ್ಲೇಖಿಸಿ ಮಾಡಿದ ಅಡ್ವಾನ್ಸ್ಡ್ ಸರ್ಚ್ ಕೂಡ ಕೇವಲ ಫೇಕಿಂಗ್ ನ್ಯೂಸ್ ಲೇಖನವನ್ನು ಮಾತ್ರ ತೋರಿಸುತ್ತದೆ.

ಆರು ವರ್ಷಗಳಷ್ಟು ಹಿಂದೆ ವಿಡಂಬನಾತ್ಮಕ ವೆನ್ ತಾಣವೊಂದರಲ್ಲಿ ಪ್ರಕಡವಾದ ಲೇಖನವೊಂದನ್ನು ಆಧರಿಸಿ ಹೇಳಿಕೆಯನ್ನು ಪ್ರಧಾನಿ ಸಂಸತ್ತಿನಲ್ಲಿ ಏಕೆ ಉಲ್ಲೇಖಿಸಿದರೆಂದು ತಿಳಿಯದಾಗಿದೆ.

ಅಷ್ಟಕ್ಕೂ ಒಮರ್ ಅಬ್ದುಲ್ಲಾ ಅವರ ಟ್ವಿಟ್ಟರ್ ಖಾತೆಯಿಂದ ಕಳೆದ ವರ್ಷದ ಆಗಸ್ಟ್ 5ರಂದು ಮಾಡಲಾದ ಎರಡು ಕೊನೆಯ ಟ್ವೀಟ್‍ಗಳಲ್ಲಿಯೂ ಅವರು "ರಾಜ್ಯಕ್ಕೆ ಏನು ಕಾದಿದೆಯೆಂದು ತಿಳಿದಿಲ್ಲ, ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ, ಶಾಂತಿ ಕಾಪಾಡಿ,'' ಎಂದು ಹೇಳಿದ್ದರು.

Omar Abdullah had said that the abrogation of Article 370 would bring a massive earthquake and will divide Kashmir from India.

Farukh Abdullah had said the removal of Article 370 will strengthen the road of freedom for Kashmiris: PM Modi #PMInLokSabha

— BJP (@BJP4India) February 6, 2020

BREAKING: Removing Article 370 will cause earthquakes separating Kashmir from India: Omar Abdullah http://t.co/KMHDKKx0LW

— Faking News (@fakingnews) May 28, 2014
share
ವಾರ್ತಾಭಾರತಿ
ವಾರ್ತಾಭಾರತಿ
Next Story
X