ಅಕ್ರಮ ಮರಳು ದಾಸ್ತಾನು ಕಂಡುಬಂದಲ್ಲಿ ಕ್ರಿಮಿನಲ್ ಮೊಕದ್ದಮೆ : ಉಡುಪಿ ಜಿಲ್ಲಾಧಿಕಾರಿ
ಉಡುಪಿ, ಫೆ.7: ಜಿಲ್ಲೆಯಲ್ಲಿ ಸಿಆರ್ಝಡ್ ವ್ಯಾಪ್ತಿಯಲ್ಲಿ ಮರಳು ತೆಗೆಯುವ ಅವಧಿ ಮುಕ್ತಾಯಗೊಂಡಿದ್ದು, ಈ ಅವಧಿಯಲ್ಲಿ 4 ಲಕ್ಷ ಮೆಟ್ರಿಕ್ ಟನ್ ಮರಳು ತೆಗೆದು ವಿತರಿಸಲಾಗಿದೆ. ಪ್ರಸ್ತುತ ತೆಗೆದಿರುವ ಮರಳು ಜಿಲ್ಲೆಯಿಂದ ಹೊರ ಹೋಗಲು ಅವಕಾಶ ನೀಡಿಲ್ಲ. ಆದರೆ ತೆಗೆದಿರುವ ಅಷ್ಟೂ ಮರಳು ಸಾರ್ವಜನಿಕರಿಗೆ ಸಂಪೂರ್ಣವಾಗಿ ವಿತರಣೆಯಾಗದೇ, ಅನಧಿಕೃತ ವಾಗಿ ದಾಸ್ತಾನು ಮಾಡಿರುವ ಸಾಧ್ಯತೆಯಿದ್ದು, ಹೀಗೆ ಅನಧಿಕೃತ ವಾಗಿ ಮರಳು ದಾಸ್ತಾನು ಮಾಡಿರುವವರನ್ನು ಪತ್ತೆ ಹಚ್ಚಿ ಅವರ ವಿರುದ್ದ ಕ್ರಮಿನಲ್ ಪ್ರಕರಣ ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾ ಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಅನಧಿಕೃತ ಮರಳು ದಾಸ್ತಾನು ಪತ್ತೆ ಹಚ್ಚಲು, ಮರಳು ತುಂಬಿದ ವಾಹನಗಳು ಸ್ಟಾಕ್ಯಾರ್ಡ್ನಿಂದ ಹೊರಟಿರುವ ಮತ್ತು ಮರಳು ವಿತರಣೆ ಮಾಡಿರುವ ಪ್ರದೇಶಗಳ ಮಾಹಿತಿಯನ್ನು, ಮರಳು ಸಾಗಾಟ ವಾಹನಗಳಿಗೆ ಅಳವಡಿಸಿರುವ ಜಿಪಿಎಸ್ ಮೂಲ ಪತ್ತೆ ಹಚ್ಚಲಾಗುತ್ತಿದೆ ಎಂದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಅನಧಿಕೃತ ಮರಳು ದಾಸ್ತಾನು ಪತ್ತೆ ಹಚ್ಚಲು, ಮರಳು ತುಂಬಿದ ವಾಹನಗಳು ಸ್ಟಾಕ್ಯಾರ್ಡ್ನಿಂದ ಹೊರಟಿರುವ ಮತ್ತು ಮರಳು ವಿತರಣೆ ಮಾಡಿರುವ ಪ್ರದೇಶಗಳ ಮಾಹಿತಿಯನ್ನು, ಮರಳು ಸಾಗಾಟ ವಾಹನಗಳಿಗೆ ಅಳವಡಿಸಿರುವ ಜಿಪಿಎಸ್ ಮೂಲಕ ಪತ್ತೆ ಹಚ್ಚಲಾಗುತ್ತಿದೆ ಎಂದರು. ಅನಧಿಕೃತವಾಗಿ ಮರಳು ದಾಸ್ತಾನು ಮಾಡಿರುವವರ ವಿರುದ್ದ ನಿರ್ದಾಕ್ಷಿಣ್ಯ ವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ ಅವರು ಜಿಲ್ಲೆಯಲ್ಲಿ ಕೆಸಿಝಡ್ಎಂಎ ಮೂಲಕ ಇನ್ನೂ 4 ಲಕ್ಷ ಮೆಟ್ರಿಕ್ ಟನ್ ಮರಳು ತೆಗೆಯಲು ಪ್ರಸ್ಥಾವನೆಯನ್ನು ಅನುಮೋದನೆಗೆ ಕಳುಹಿಸಿದ್ದು, ಶೀಘ್ರದಲ್ಲಿ ಅನುಮೋದನೆ ದೊರೆಯಲಿದ್ದು, ಅನುಮೋದನೆ ನಂತರ ಮರಳು ವಿತರಣೆ ಆರಂಭಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.







