Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬ್ಯಾಂಕ್‌ಗಳ ವಿಲೀನಕ್ಕೆ ಬೆಂಬಲವಿಲ್ಲ:...

ಬ್ಯಾಂಕ್‌ಗಳ ವಿಲೀನಕ್ಕೆ ಬೆಂಬಲವಿಲ್ಲ: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ವಿಲೀನ ವಿರೋಧಿ ಹೋರಾಟದ ಲೋಗೋ ಅನಾವರಣ

ವಾರ್ತಾಭಾರತಿವಾರ್ತಾಭಾರತಿ7 Feb 2020 10:08 PM IST
share
ಬ್ಯಾಂಕ್‌ಗಳ ವಿಲೀನಕ್ಕೆ ಬೆಂಬಲವಿಲ್ಲ: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಮಂಗಳೂರು, ಫೆ.7: ಅವಿಭಜಿತ ದ.ಕ.ಜಿಲ್ಲೆಯು ದೇಶ-ವಿದೇಶಗಳಲ್ಲಿ ಗಮನ ಸೆಳೆಯಲು, ಪ್ರಖ್ಯಾತಗೊಳ್ಳಲು ಇಲ್ಲಿ ಜನ್ಮ ತಾಳಿದ ಬ್ಯಾಂಕ್‌ಗಳ ಕೊಡುಗೆಯೂ ಇದೆ. ಈಗಾಗಲೆ ವಿಜಯಾ ಬ್ಯಾಂಕನ್ನು ಕಳೆದ ವರ್ಷ ವಿಲೀನಗೊಳಿಸಲಾಗಿದೆ. ಇದೀಗ ಸಿಂಡಿಕೇಟ್ ಮತ್ತು ಕಾರ್ಪೊರೇಶನ್ ಬ್ಯಾಂಕ್‌ಗಳನ್ನು ವಿಲೀನಗೊಳಿಸಲು ಸರಕಾರ ಮುಂದಾಗಿದೆ. ಇದಕ್ಕೆ ನಮ್ಮ ಸಹಮತವಿಲ್ಲ, ಬೆಂಬಲವಿಲ್ಲ. ಕೇಂದ್ರ ಸರಕಾರ ಈ ವಿಲೀನ ಪ್ರಕ್ರಿಯೆಯನ್ನು ಕೈ ಬಿಡಬೇಕು ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.

ಕರಾವಳಿ ಬ್ಯಾಂಕ್‌ಗಳ ಉಳಿಸಿ ಹೋರಾಟ ಸಮಿತಿಯ ವತಿಯಿಂದ ಶುಕ್ರವಾರ ನಗರ ಸಿಬಿಒಒ ಸೆಂಟರ್‌ನಲ್ಲಿ ಬ್ಯಾಂಕ್‌ಗಳ ವಿಲೀನ ವಿರೋಧಿಸಿ ನಡೆಸಲಾಗುವ ಹೋರಾಟದ ಲೋಗೋ ಅನಾವರಣಗೊಳಿಸಿ ಅವರು ಮಾತನಾಡಿದರು.

ಕರಾವಳಿಗರಿಗೆ ಸರಕಾರ ಅರ್ಹತೆಗೆ ಆಧಾರದ ಮೇಲೆ ಸೂಕ್ತ ಉದ್ಯೋಗವಕಾಶ ಕಲ್ಪಿಸಿಕೊಟ್ಟಿಲ್ಲ. ಆದರೂ ಇಲ್ಲಿನ ಜನರು ಸ್ವಾವಲಂಬಿಗಳಾಗಿ ದ್ದಾರೆ. ಅದರ ಫಲವಾಗಿಯೇ ಜಿಲ್ಲೆಯಲ್ಲಿ ಹಲವು ಬ್ಯಾಂಕ್‌ಗಳು ಜನ್ಮ ತಾಳಿವೆ. ಅವುಗಳು ನಾಡಿನ ಬಹುತೇಕ ಮಂದಿಯ ಜೀವನಮಟ್ಟ ಹೆಚ್ಚಿ ಸಿವೆ, ಉದ್ಯೋಗ ದೊರಕಿಸಿಕೊಟ್ಟಿವೆ. ಅಂತಹ ಬ್ಯಾಂಕ್‌ಗಳನ್ನು ವಿಲೀನಗೊಳಿಸಿದರೆ ಮತ್ತೆ ಇಲ್ಲಿ ನಿರುದ್ಯೋಗ ಭೀತಿಯಾಗಬಹುದು. ಅದನ್ನು ಅರ್ಥ ಮಾಡಿಕೊಂಡು ಸರಕಾರ ತನ್ನ ವಿಲೀನ ಪ್ರಕ್ರಿಯೆಯಿಂದ ಹಿಂದೆ ಸರಿಯಬೇಕು ಎಂದು ಸ್ವಾಮೀಜಿ ಕರೆ ನೀಡಿದರು.

ಮಂಗಳೂರು ಬಿಷಪರ ಸಾರ್ವಜನಿಕ ಸಂಪರ್ಕ ಅಧಿಕಾರಿ ಫಾ. ವಿಕ್ಟರ್ ವಿಜಯ್ ಲೋಬೋ ಕರಪತ್ರ ಬಿಡುಗಡೆಗೊಳಿಸಿದರು. ಮಾಜಿ ಸಚಿವ ಸುಬ್ಬಯ್ಯ ಶೆಟ್ಟಿ ಸ್ಟಿಕ್ಕರ್ ಅನಾವರಣಗೊಳಿಸಿದರು. ಕಾರ್ಪೊರೇಶನ್ ಬ್ಯಾಂಕ್ ಅಧಿಕಾರಿಗಳ ಸಂಘದ ಮುಖಂಡ ಟಿ.ಆರ್.ಭಟ್ ‘ಜನಪ್ರತನಿಧಿ ಗಳಿಗೆ ನೀಡಲಾಗುವ ಮನವಿ ಪತ್ರ’ವನ್ನು ಬಿಡುಗಡೆಗೊಳಿಸಿದರು.

ಪ್ರಾಸ್ತಾವಿಕ ಮಾತುಗಳನ್ನಾಡಿದ ಹೋರಾಟ ಸಮಿತಿಯ ಸಂಚಾಲಕ ದಿನೇಶ್ ಹೆಗ್ಡೆ ಉಳೆಪ್ಪಾಡಿ ದ.ಕ.ಜಿಲ್ಲೆಯಲ್ಲಿ ಜನ್ಮ ತಾಳಿದ ವಿಜಯಾ ಬ್ಯಾಂಕನ್ನು ಕಳೆದ ಬಾರಿ ವಿಲೀನಗೊಳಿಸುವಾಗ ಇಲ್ಲಿನ ಆಡಳಿತ ಮತ್ತು ವಿಪಕ್ಷಗಳು ಸಮರ್ಪಕವಾಗಿ ಹೋರಾಟ ಮಾಡಿರಲಿಲ್ಲ. ಅದರ ಫಲವಾಗಿಯೇ ಅವಿಭಜಿತ ದ.ಕ.ಜಿಲ್ಲೆಯಲ್ಲಿ ಜನ್ಮ ತಾಳಿದ ಸಿಂಡಿಕೇಟ್ ಮತ್ತು ಕಾರ್ಪೊರೇಶನ್ ಬ್ಯಾಂಕನ್ನು ವಿಲೀನಗೊಳಿಸಲು ಕೇಂದ್ರ ಸರಕಾರ ಮುಂದಾಗಿದೆ. ಈ ಸಂದರ್ಭ ಆಡಳಿತ ಪಕ್ಷವು ಇದರ ವಿರುದ್ಧ ಧ್ವನಿ ಎತ್ತದು. ಆದರೆ, ವಿಪಕ್ಷವು ವೌನ ತಾಳಿರುವುದು ಅಚ್ಚರಿ ಹುಟ್ಟಿಸಿದೆ. ಒಂದೋ ವಿಪಕ್ಷಗಳು ನಮ್ಮ ಹೋರಾಟವನ್ನು ಬೆಂಬಲಿಸಬೇಕು ಇಲ್ಲವೇ ಹೋರಾಟಕ್ಕೆ ನೇತೃತ್ವ ನೀಡಬೇಕು. ಇಲ್ಲದಿದ್ದರೆ ಈ ಎರಡೂ ಬ್ಯಾಂಕ್‌ ಗಳನ್ನು ನಾವು ಕಳಕೊಳ್ಳಲಿದ್ದೇವೆ ಎಂದರು.

ಬ್ಯಾಂಕ್‌ಗಳ ವಿಲೀನದ ಹಿಂದೆ ಪ್ರಬಲ ರಾಜಕೀಯ ಅಜೆಂಡಾ ಇದೆ. ಇದನ್ನು ವಿಪಕ್ಷಗಳು ಅರ್ಥ ಮಾಡಿಕೊಳ್ಳಬೇಕು. ಬ್ಯಾಂಕ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತನ್ನದೇ ರೀತಿಯಲ್ಲಿ ಹೋರಾಟ ಮಾಡುತ್ತಿದ್ದಾರೆ. ಆದರೆ, ಅವರು ಜನಸಾಮಾನ್ಯರ ಬಳಿಗೆ ಈ ಸಮಸ್ಯೆಯನ್ನು ಕೊಂಡೊಯ್ದು ಅವರ ಸಹಕಾರ ಪಡೆದು ತೀವ್ರತರದ ಹೋರಾಟ ಮಾಡಬೇಕಿದೆ. ಮುಂದಿನ ದಿನಗಳಲ್ಲಿ ಹೋರಾಟ ಸಮಿತಿಯು ಕರಾವಳಿಯ ಮೂರು ಜಿಲ್ಲೆಗಳಲ್ಲಿ ಹೋಬಳಿ ಮಟ್ಟದಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ದಿನೇಶ್ ಹೆಗ್ಡೆ ಉಳೆಪ್ಪಾಡಿ ಎಚ್ಚರಿಸಿದರು.

ಹೋರಾಟ ಸಮಿತಿಯ ಎಚ್.ವಿ.ರಾವ್ ವಂದಿಸಿದರು. ಮುನೀರ್ ಕಾಟಿಪಳ್ಳ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X