Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದರಿದ್ರ ಸ್ಥಿತಿಯಲ್ಲಿ ರಾಜ್ಯದ ಸಾಹಿತ್ಯ...

ದರಿದ್ರ ಸ್ಥಿತಿಯಲ್ಲಿ ರಾಜ್ಯದ ಸಾಹಿತ್ಯ ಲೋಕ: ಡಾ.ಮಹಾಬಲೇಶ್ವರ ರಾವ್

ಮುರಾರಿ-ಕೆದ್ಲಾಯ ರಂಗೋತ್ಸವದಲ್ಲಿ ಕಸಾಪ, ನಾಟಕ ಅಕಾಡೆಮಿ ವಿರುದ್ಧ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ7 Feb 2020 10:28 PM IST
share
ದರಿದ್ರ ಸ್ಥಿತಿಯಲ್ಲಿ ರಾಜ್ಯದ ಸಾಹಿತ್ಯ ಲೋಕ: ಡಾ.ಮಹಾಬಲೇಶ್ವರ ರಾವ್

ಉಡುಪಿ, ಫೆ.7: ಶೃಂಗೇರಿ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ನಡೆದ ದಾಂಧಲೆ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಪ್ರಕಟಿಸಿದ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಹಿಂಪಡೆದಿರುವುದನ್ನು ವಿರೋಧಿಸಿ ಕನ್ನಡ ಸಾಹಿತ್ಯ ಪರಿಷತ್ ಆಗಲಿ ಅಥವಾ ಯಾವುದೇ ಕಲಾ ಸಂಘಟನೆಗಳು ಆಗಲಿ ಗಟ್ಟಿ ಧ್ವನಿಯಲ್ಲಿ ಪ್ರತಿಭಟನೆ ವ್ಯಕ್ತಪಡಿಸಿಲ್ಲ. ಕರ್ನಾಟಕದಲ್ಲಿ ಸಾಂಸ್ಕೃತಿಕ ಹಾಗೂ ಸಾಹ್ಯಿತಿಕ ಲೋಕ ಇಷ್ಟು ದರಿದ್ರ ಸ್ಥಿತಿಯಲ್ಲಿ ಯಾವತ್ತೂ ಇರಲಿಲ್ಲ ಎಂದು ಉಡುಪಿ ಟಿ.ಎಂ.ಎ.ಪೈ ಶಿಕ್ಷಣ ಮಹಾವಿದ್ಯಾಲಯದ ಸಮನ್ವಯಾಧಿ ಕಾರಿ ಹಾಗೂ ಲೇಖಕ ಡಾ.ಮಹಾಬಲೇಶ್ವರ ರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ ರಥಬೀದಿ ಗೆಳೆಯರು ಸಾಂಸ್ಕೃತಿಕ ವೇದಿಕೆಯ ವತಿಯಿಂದ ಉಡುಪಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಹಮ್ಮಿಕೊಳ್ಳಲಾದ ಮೂರು ದಿನಗಳ ಡಾ.ನಿ.ಮುರಾರಿ ಬಲ್ಲಾಳ್ ಹಾಗೂ ಪ್ರೊ.ಕೆ.ಎಸ್.ಕೆದ್ಲಾಯ ನೆನಪಿನ ಮುರಾರಿ -ಕೆದ್ಲಾಯ ರಂಗೋತ್ಸವವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ನಾಟಕ ಅಕಾಡೆಮಿ ಪ್ರಕಟಿಸಿದ ಪ್ರಶಸ್ತಿ ವಿಜೇತರ ಪಟ್ಟಿಯನ್ನು, ನಂತರ ಬಂದ ಸರಕಾರ ಹಿಂಪಡೆದು ಬೇರೆಯೇ ಹೆಸರು ಪ್ರಕಟಿಸಿರುವುದನ್ನು ವಿರೋಧಿಸಿ ಉಡುಪಿ ಜಿಲ್ಲೆಯ ಯಾವುದೇ ನಾಟಕ ತಂಡ, ಕಲಾವಿದರು ಗಟ್ಟಿ ಧ್ವನಿಯಲ್ಲಿ ಪ್ರತಿಭಟನೆ ಮಾಡಿಲ್ಲ. ಅಕಾಡೆಮಿಯ ನಿರಂಕುಶ, ಅಪ್ರಜಾಸತಾತ್ಮಕ ಹಾಗೂ ಕಲಾವಿದರನ್ನು ಅವಮಾನ ಮಾಡುವ ಧೋರಣೆಯನ್ನು ಖಂಡಿಸುವ ಪ್ರತಿಭಟನೆ ಯಾಗಲಿ ವಿಚಾ ಸಂಕಿರಣವಾಗಲಿ ನಡೆದಿಲ್ಲ ಎಂದರು.

ಶೃಂಗೇರಿಯಲ್ಲಿ ಇತ್ತೀಚೆಗೆ ನಡೆದ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರು ತಮ್ಮ ರಾಜಕೀಯ ಧೋರಣೆಗೆ ವಿರುದ್ಧವಾಗಿದ್ದರೆ ಎಂಬ ಕಾರಣಕ್ಕೆ ನಕ್ಸಲ್ ಹಣೆಪಟ್ಟಿ ಕಟ್ಟಿ, ಅನುದಾನ ನಿಲ್ಲಿಸಿದರು. ಅಲ್ಲದೆ ಪೊಲೀಸರ ಸರ್ಪಗಾವಲಿನಲ್ಲಿ ದಾಂಧಲೆ ಸೃಷ್ಟಿಸಿ ಎರಡು ದಿನಗಳ ಗೋಷ್ಠಿಯನ್ನು ಒಂದು ದಿನಕ್ಕೆ ಈ ಸರಾಕರ ಮೊಟಕು ಗೊಳಿಸಿದೆ. ಆದರೂ ರಾಜ್ಯದಲ್ಲಿ ಹೋಬಳಿ ಮಟ್ಟದಿಂದ ಜಿಲ್ಲಾಮಟ್ಟದವರೆಗೆ ಇರುವ ಕಸಾಪ ಘಟಕಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಇದರ ವಿರುದ್ಧ ಮಾತನಾಡಿಲ್ಲ ಎಂದು ಅವರು ದೂರಿದರು.

ಅಲ್ಲದೆ ಕಲ್ಬುರ್ಗಿಯಲ್ಲಿ ನಡೆದ ಸಮ್ಮೇಳನಾಧ್ಯಕ್ಷರು ಕೂಡ ಶೃಂಗೇರಿಯ ಬಗ್ಗೆ ಎಲ್ಲೂ ಒಂದೇ ಒಂದು ಮಾತನಾಡಿಲ್ಲ ಮತ್ತು ಪ್ರತಿಭಟನೆಯನ್ನು ಕೂಡ ವ್ಯಕ್ತಪಡಿಸಿರಲಿಲ್ಲ. ನಾವು ಇಂದು ಯಾವ ಮಾತನಾಡಿದರೆ ಲಾಭ ಆಗುತ್ತೆ, ಯಾವ ಮಾತು ಆಡಿದರೆ ನಮಗೆ ನಷ್ಟ ಆಗುತ್ತೆ ಎಂಬ ಲೆಕ್ಕಚಾರ ಮನುಷ್ಯರಾಗಿ ದ್ದೇವೆ ಎಂದು ಅವರು ಕಟುವಾಗಿ ಟೀಕಿಸಿದರು.

ಇಂದಿನ ಸಾಂಸ್ಕೃತಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಕೆದ್ಲಾಯ ಮತ್ತು ಮುರಾರಿ ಬಲ್ಲಾಳ್ ತುಂಬಾ ಅವಶ್ಯಕ ಹಾಗೂ ಪ್ರಸ್ತುತ ಎಂದು ಆಗುತ್ತಿದೆ. ಇವರಿಬ್ಬರು ಇಂದು ಬದುಕಿದ್ದರೆ ಇದನ್ನು ನೇರವಾಗಿ ಖಂಡಿಸುತ್ತಿದ್ದರು. ಪ್ರತಿಭಟನೆಯ ನೆಲೆಯಾಗಿ, ಜನತೆಯ ಅಂತರಂಗದ ಆತ್ಮಸಾಕ್ಷಿಯಾಗಿ ಇವರು ಅನನ್ಯರು ಹಾಗೂ ಉಡುಪಿಗೆ ಬೇಕಾಗಿದ್ದವರು. ಅವರಿಬ್ಬರು ಇವತ್ತಿಗೂ ಪ್ರಸ್ತುತರು ಎಂದು ಅವರು ಹೇಳಿದರು.

ಸಾಮಾಜಿಕ ಕಾರ್ಯಕರ್ತ ಹರ್ಷಕುಮಾರ್ ಕುಗ್ವೆ ಮಾತನಾಡಿ, ನಾಟಕ, ಚಿತ್ರಕಲೆ, ಸಿನೆಮಾ ಕ್ಷೇತ್ರ ನಮ್ಮ ಬದುಕಿನ ಸೌಂದರ್ಯವನ್ನು ತೋರಿಸಲು ಇರುವ ಮಾಧ್ಯಮವಾಗಿದೆ. ಇಂದು ನಮ್ಮ ಬದುಕಿನ ಆ ಸೌಂದರ್ಯಗಳನ್ನು ನಾಶ ಮಾಡುವ ಕೆಲಸ ಕೆಲವು ಶಕ್ತಿಗಳು ಮಾಡುತ್ತಿವೆ. ಅದನ್ನು ಎದುರಿಸುವ ಶಕ್ತಿ ಬೇರೆ ಎಲ್ಲ ಮಾಧ್ಯಮಗಳಿಗಿಂತಲೂ ಹೆ್ಚು ರಂಗಭೂಮಿಗೆ ಇದೆ ಎಂದರು.

ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಪ್ರೊ.ಮುರಳೀಧರ ಉಪಾಧ್ಯ ಹಿರಿಯಡ್ಕ ವಹಿಸಿದ್ದರು. ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಜಿ.ವಿಜಯ, ಸಂತೋಷ್ ಬಲ್ಲಾಳ್, ಸಂಸ್ಥೆಯ ಕಾರ್ಯದರ್ಶಿ ಪ್ರೊ.ಸುಬ್ರಹ್ಮಣ್ಯ ಜೋಶಿ ಉಪಸ್ಥಿತರಿದ್ದರು.

ಉದ್ಯಾವರ ನಾಗೇಶ್ ಕುಮಾರ್ ಸ್ವಾಗತಿಸಿದರು. ನಾಟಕ ವಿಭಾಗದ ಸಂಚಾಲಕ ಸಂತೋಷ್ ಶೆಟ್ಟಿ ಹಿರಿಯಡ್ಕ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಬೆಂಗಳೂರಿನ ರಂಗರಥ ತಂಡದಿಂದ ಮಾಳವಿಕಾಗ್ನಿವಿುತ್ರ ನಾಟಕ ಪ್ರದರ್ಶನ ಗೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X