Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 2034ರ ವೇಳೆಗೆ ಅರಬ್ ದೇಶಗಳ 2 ಟ್ರಿಲಿಯನ್...

2034ರ ವೇಳೆಗೆ ಅರಬ್ ದೇಶಗಳ 2 ಟ್ರಿಲಿಯನ್ ಡಾಲರ್ ಸಂಪತ್ತು ಮಾಯ!

ವಾರ್ತಾಭಾರತಿವಾರ್ತಾಭಾರತಿ7 Feb 2020 10:33 PM IST
share
2034ರ ವೇಳೆಗೆ ಅರಬ್ ದೇಶಗಳ 2 ಟ್ರಿಲಿಯನ್ ಡಾಲರ್ ಸಂಪತ್ತು ಮಾಯ!

ನ್ಯೂಯಾರ್ಕ್, ಫೆ. 7: ಪರ್ಷಿಯನ್ ಕೊಲ್ಲಿಯಲ್ಲಿರುವ ಅರಬ್ ರಾಜಪ್ರಭುತ್ವಗಳು ಇನ್ನು 15 ವರ್ಷಗಳಲ್ಲಿ ತಮ್ಮ 2 ಟ್ರಿಲಿಯ ಡಾಲರ್ (ಸುಮಾರು 140 ಲಕ್ಷ ಕೋಟಿ ರೂಪಾಯಿ) ಸಂಪತ್ತನ್ನು ಕಳೆದುಕೊಳ್ಳಲಿವೆ ಎಂದು ಅಂತರ್‌ರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಅಭಿಪ್ರಾಯಪಟ್ಟಿದೆ.

ಈಗ ತೈಲ ಬೇಡಿಕೆ ಗರಿಷ್ಠ ಮಟ್ಟವನ್ನು ತಲುಪಿದ್ದು, ಇನ್ನು 15 ವರ್ಷಗಳಲ್ಲಿ ಬೇಡಿಕೆ ಇಳಿಮುಖವಾಗಲು ಆರಂಭಿಸುತ್ತದೆ ಹಾಗೂ ಆಗ ಅದರ ಬಿಸಿ ಅರಬ್ ದೇಶಗಳಿಗೆ ತಟ್ಟುತ್ತದೆ ಎಂದು ಐಎಂಎಫ್ ಅಭಿಪ್ರಾಯಪಟ್ಟಿದೆ.

ಜಾಗತಿಕ ತೈಲ ಬೇಡಿಕೆಯು ನಿರೀಕ್ಷೆಗಿಂತ ಮುಂಚೆಯೇ ಕುಸಿಯಲು ಆರಂಭಿಸಬಹುದು. ಆಗ ಆರು ಸದಸ್ಯರ ಕೊಲ್ಲಿ ಸಹಕಾರ ಮಂಡಳಿಯ ಆರ್ಥಿಕತೆ ಒತ್ತಡಕ್ಕೆ ಸಿಲುಕುತ್ತದೆ ಎಂದು ಐಎಂಎಫ್ ಗುರುವಾರ ವರದಿಯೊಂದರಲ್ಲಿ ಹೇಳಿದೆ. ಕೊಲ್ಲಿ ಸಹಕಾರ ಮಂಡಳಿಯ ಈ ಆರು ದೇಶಗಳು ಜಗತ್ತಿನ ಒಟ್ಟು ತೈಲ ಉತ್ಪಾದನೆಯ ಐದನೇ ಒಂದು ಭಾಗವನ್ನು ಉತ್ಪಾದಿಸುತ್ತದೆ.

ಕೊಲ್ಲಿ ಸಹಕಾರ ಮಂಡಳಿಯ ಸದಸ್ಯ ದೇಶಗಳು: ಸೌದಿ ಅರೇಬಿಯ, ಕುವೈತ್, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ), ಒಮಾನ್, ಬಹರೈನ್ ಮತ್ತು ಕತರ್.

 ನಿರ್ಣಾಯಕ ಆರ್ಥಿಕ ಸುಧಾರಣೆಗಳಿಲ್ಲದೆ ಮಧ್ಯ ಪ್ರಾಚ್ಯದ ಅತಿ ಶ್ರೀಮಂತ ದೇಶಗಳು 2034ರ ವೇಳೆಗೆ ತಮ್ಮ ನಿವ್ವಳ ಆರ್ಥಿಕ ಸಂಪತ್ತನ್ನು ಕಳೆದುಕೊಳ್ಳಬಹುದು. ಯಾಕೆಂದರೆ, ಆ ವೇಳೆಗೆ ಈ ದೇಶಗಳು ಸಾಲಗಾರ ದೇಶಗಳಾಗಿರುತ್ತವೆ ಎಂದು ಐಎಂಎಫ್ ವರದಿ ಅಭಿಪ್ರಾಯಪಟ್ಟಿದೆ. ಇನ್ನೊಂದು ದಶಕದಲ್ಲಿ ಆ ದೇಶಗಳ ಒಟ್ಟು ತೈಲೇತರ ಸಂಪತ್ತು ಕೂಡ ವ್ಯಯವಾಗುತ್ತದೆ ಎಂದಿದೆ.

ಐಎಂಎಫ್‌ನ ವರದಿಯನ್ನು ಅದರ ಮಧ್ಯಪ್ರಾಚ್ಯ ಮತ್ತು ಮಧ್ಯ ಏಶ್ಯ ಪರಿಣತರು ಅದರ ಸಂಶೋಧನಾ ವಿಭಾಗದ ನೆರವಿನೊಂದಿಗೆ ತಯಾರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X