ಕಾಸರಗೋಡಿನಲ್ಲಿ ದಕ್ಷಿಣ ಭಾರತ ಮಟ್ಟದ ಕನ್ನಡ ಕಾವ್ಯ ಕಮ್ಮಟ: ಯುವ ಕವಿಗಳಿಂದ ಅರ್ಜಿ ಆಹ್ವಾನ
ಬೆಂಗಳೂರು, ಫೆ.7: ಸಾಹಿತ್ಯ ಅಕಾಡೆಮಿಯು ರಾಜ್ಯ ಹಾಗೂ ಹೊರ ರಾಜ್ಯಗಳ ಕನ್ನಡ ಬರಹಗಾರರಿಗಾಗಿ ಮಾರ್ಚ್ನಲ್ಲಿ 3ದಿನಗಳ ‘ದಕ್ಷಿಣ ಭಾರತ ಮಟ್ಟದ ಕನ್ನಡ ಕಾವ್ಯ ಕಮ್ಮಟ’ವನ್ನು ಕಾಸರಗೋಡಿನಲ್ಲಿ ಏರ್ಪಡಿಸಲು ಉದ್ದೇಶಿಸಿದ್ದು, ಆಸಕ್ತ ಯುವ ಕವಿಗಳಿಂದ ಅರ್ಜಿ ಆಹ್ವಾನಿಸಿದೆ.
20ರಿಂದ 40 ವರ್ಷ ವಯಸ್ಸುಳ್ಳ ಕನ್ನಡ ಕಾವ್ಯ ರಚನೆಯಲ್ಲಿ ತೊಡಗಿರುವ ದಕ್ಷಿಣ ಭಾರತದ (ಕರ್ನಾಟಕ, ತಮಿಳುನಾಡು, ಆಂಧ್ರ, ತೆಲಂಗಾಣ ಮತ್ತು ಕೇರಳ) ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಫೆ.15 ಕೊನೆಯ ದಿನ. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆುಯ ವೆಬ್ಸೈಟ್ http://karnatakasahithyaacademy.org ನಿಂದ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.
Next Story