Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜಾನಪದ ಸಂಸ್ಕೃತಿ ಬೆವರಿನ ಭಾಷೆ: ಬರಗೂರು...

ಜಾನಪದ ಸಂಸ್ಕೃತಿ ಬೆವರಿನ ಭಾಷೆ: ಬರಗೂರು ರಾಮಚಂದ್ರಪ್ಪ

ವಾರ್ತಾಭಾರತಿವಾರ್ತಾಭಾರತಿ7 Feb 2020 11:50 PM IST
share
ಜಾನಪದ ಸಂಸ್ಕೃತಿ ಬೆವರಿನ ಭಾಷೆ: ಬರಗೂರು ರಾಮಚಂದ್ರಪ್ಪ

ಬೆಂಗಳೂರು, ಫೆ.7: ಜಾನಪದ ಸಂಸ್ಕೃತಿಯು ಬೆವರಿನ ಭಾಷೆಯಾಗಿದ್ದು, ಹೃದಯಕ್ಕೆ ಹತ್ತಿರವಾದಾಗ ಸಂಸ್ಕೃತಿಯ ಅಸ್ಮಿತೆ ದೊರೆಯುತ್ತದೆ ಎಂದು ಬಂಡಾಯ ಸಾಹಿತಿ ಬರಗೂರು ರಾಮಚಂದ್ರಪ್ಪ ಪ್ರತಿಪಾದಿಸಿದರು.

ಶುಕ್ರವಾರ ಬಿಎಂಎಸ್ ಮಹಿಳಾ ವಿಶ್ವವಿದ್ಯಾಲಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ಜಾನಪದ ಜಾತ್ರೆ -2020 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಿರಾಕಾರವಾದ ಜಾನಪದ ಸಾಹಿತ್ಯಕ್ಕೆ ಹೃದಯಕ್ಕೆ ತಲುಪುವ ಶಕ್ತಿ ಇದೆ. ವೈವಿಧ್ಯಮಯ ಜಾನಪದ ಸಂಸ್ಕೃತಿಯು ಜನರ ಜೀವನದ ಭಾಗವಾಗಿದೆ ಎಂದು ಹೇಳಿದರು.

ಸಂಸ್ಕೃತಿ ಕೇವಲ ಆಚರಣೆಯಲ್ಲ, ಅದೊಂದು ಜನರ ಜೀವನ ವಿಧಾನ. ಭಾರತೀಯರ ಜನರ ಜೀವನ ವಿಧಾನದಲ್ಲಿ ವೈವಿಧ್ಯತೆಯಿದ್ದು ಈ ಬಹುತ್ವದ ಸಂಸ್ಕೃತಿಯ ಅರಿವು ಮೂಡಿಸುವುದೇ ಜಾನಪದ ಸಂಸ್ಕೃತಿ. ಎಲ್ಲೆಲ್ಲಿ ಜನರಿದ್ದಾರೆಯೋ ಅದೆಲ್ಲವನ್ನೂ ಜಾನಪದ ಎನ್ನಬಹುದು. ನಗರದಲ್ಲಿನ ಜಾನಪದಕ್ಕೆ ಲಿಖಿತ ಜಾನಪದ ಎಂಬ ಹೊಸ ವ್ಯಾಖ್ಯಾನ ನೀಡಲಾಗಿದೆ ಎಂದು ಹೇಳಿದರು.

ದೇಶದಲ್ಲಿರುವ 11 ಕೋಟಿ ಬುಡಕಟ್ಟು ಜನರ ಜೀವನ ಕ್ರಮದಲ್ಲಿ ವೈವಿಧ್ಯವಿದೆ. ವಿಭಿನ್ನ ಜೀವನಕ್ರಮಗಳ ಸಮ್ಮಿಳಿತವೇ ಜಾನಪದ. ಉತ್ಪಾದನಾ ಪದ್ಧತಿ ಬದಲಾದ್ದರಿಂದ ಜನರ ಜೀವನ ಕ್ರಮದಲ್ಲೂ ಬದಲಾವಣೆಯಾಯಿತು. ನಾವು ಆರೋಗ್ಯಕರವಾದದ್ದನ್ನು ಸ್ವೀಕರಿಸಿದಾಗ ಮಾತ್ರ ಜಾನಪದ ಸಂಸ್ಕೃತಿಯ ಉಳಿವು ಸಾಧ್ಯವಾಗುತ್ತದೆ. ಜನಪದವು ಅನುಭವವಾಗಬೇಕೇ ಹೊರತು ಅಭಿನಯವಾಗಬಾರದು ಎಂದು ಹೇಳಿದರು.

ನಾನು ಜಾನಪದ ಸಾಹಿತಿಯಲ್ಲ, ಜನಪರ ಸಾಹಿತಿ. ಮನುಷ್ಯರಾಗಲು ಯಾವುದು ಸಹಕಾರಿಯಾಗಿದೆಯೋ ಅದೆಲ್ಲವೂ ಜನಪದ. ಇಂತಹ ಸಮೂಹ ಕಲೆಯು ಅವಿದ್ಯಾವಂತರದ್ದು ಎಂಬ ಭಾವನೆಯಿದೆ. ಆದರೆ ಶಿಕ್ಷಣ ಸಂಸ್ಕೃತಿಯ ಮಾನದಂಡವಲ್ಲ. ಹಳ್ಳಿಗಳಲ್ಲಿ ವೈವಿಧ್ಯವಾದ ರಾಮಾಯಣ, ಮಹಾಭಾರತಗಳನ್ನು ಕಟ್ಟಿದವರು ಅನಕ್ಷರಸ್ಥರು. ಆದ್ದರಿಂದ ಜಾನಪದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಅಧ್ಯಕ್ಷೆ ಡಾ. ಬಿ.ಎಸ್. ರಾಗಿಣಿ ನಾರಾಯಣ್, ನಿವೃತ್ತ ಐಎಎಸ್ ಅಧಿಕಾರಿ ಎಂ. ಮದನ್ ಗೋಪಾಲ್, ವಿಶ್ವವಿದ್ಯಾಲಯದ ಧರ್ಮದರ್ಶಿ ಅವಿರಾಮ್ ಶರ್ಮ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X