Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಂಗ್ರೆಸ್ ನಾಯಕನ ಕುರಿತ ನಕಲಿ ವೀಡಿಯೋ...

ಕಾಂಗ್ರೆಸ್ ನಾಯಕನ ಕುರಿತ ನಕಲಿ ವೀಡಿಯೋ ಪೋಸ್ಟ್ ಮಾಡಿದ ಸಂಬಿತ್ ಪಾತ್ರ ಕೇಳಿದ್ದೇನು ?

ವಾರ್ತಾಭಾರತಿವಾರ್ತಾಭಾರತಿ8 Feb 2020 12:11 PM IST
share
ಕಾಂಗ್ರೆಸ್ ನಾಯಕನ ಕುರಿತ ನಕಲಿ ವೀಡಿಯೋ ಪೋಸ್ಟ್ ಮಾಡಿದ ಸಂಬಿತ್ ಪಾತ್ರ ಕೇಳಿದ್ದೇನು ?

ಹೊಸದಿಲ್ಲಿ : ಮಾಜಿ ಕಾಂಗ್ರೆಸ್ ಸಂಸದ ಹಾಗೂ ಮಾಜಿ ಶಾಸಕ ನಸೀಂ ಖಾನ್ ಅವರು ‘ಪಾಕಿಸ್ತಾನ್ ಜಿಂದಾಬಾದ್' ಎಂಬ ಘೋಷಣೆ ಕೂಗುತ್ತಿರುವಂತೆ ಕೇಳಿಸುವ ನಕಲಿ ವೀಡಿಯೋವೊಂದನ್ನು ಶುಕ್ರವಾರ ಟ್ವೀಟ್ ಮಾಡಿದ  ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ  ನಂತರ ಅದರ ಸತ್ಯಾಸತ್ಯತೆ ಪರಾಮರ್ಶಿಸುವಂತೆ ತಮ್ಮ ಫಾಲೋವರ್ಸ್‍ಗೆ ಹೇಳಿದ್ದಾರೆ.

ಅವರ ಈ ಪೋಸ್ಟ್‍ಗೆ 6,000ಕ್ಕೂ ಅಧಿಕ ರಿಟ್ವೀಟ್‍ಗಳು ಹಾಗೂ 15,000 ಲೈಕ್‍ಗಳು ದೊರಕಿವೆ.

ವೀಡಿಯೋದಲ್ಲಿ ಖಾನ್ ಅವರು ‘ಪಾಕಿಸ್ತಾನ್ ಜಿಂದಾಬಾದ್, ಅಗರ್ ಹಿಮ್ಮತ್ ಹೈ ಮೋದೀ ಜಿ ಕೆ ಅಂದರ್, ಔರ್ ಅಗರ್ ರಾಜನಾಥ್ ನೆ ಅಪ್ನಿ ಮಾ ಕಾ ದೂದ್ ಪಿಯಾ ಹೈ, ತೋ ಉನ್‍ಕೇ ಖಿಲಾಫ್ ದೇಶದ್ರೋಹಿ ಕಾ ಮುಕದ್ಮ ದರ್ಜ್ ಕಿಯಾ ಜಾಯೆ,'' (ಮೋದಿಗೆ ಧೈರ್ಯವಿದ್ದರೆ ಹಾಗೂ ರಾಜನಾಥ್ ಸಿಂಗ್ ತಮ್ಮ ತಾಯಿಯ ಹಾಲನ್ನು ಕುಡಿದಿದ್ದೇ ಆದಲ್ಲಿ ಅವರ ವಿರುದ್ಧ ದೇಶದ್ರೋಹದ ಮೊಕದ್ದಮೆ ದಾಖಲಿಸಬೇಕು).

ಖಾನ್ ಅವರು ಮಹಾರಾಷ್ಟ್ರದ ಚಾಂದಿವಲಿ ಕ್ಷೇತ್ರದಿಂದ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದವರು. ಕಳೆದ ವರ್ಷದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಅವರು ಶಿವಸೇನೆಯ ದಿಲೀಪ್ ಲಂಡೆ ಅವರೆದುರು ಸೋತಿದ್ದರು.

ಸಂಬಿತ್ ಪಾತ್ರ ಅವರ ಟ್ವೀಟ್ ಬೆನ್ನಲ್ಲೇ ಖಾನ್ ಅವರು ಮುಂಬೈಯ ಸಾಕಿ ನಾಕ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ವಾಸ್ತವವೇನು?

ಈ ವೀಡಿಯೋ 2015ರದ್ದಾಗಿದೆ. ಕವಿಗೋಷ್ಠಿ (ಮುಶಾಯರಾ) ಒಂದರಲ್ಲಿ  ಖಾನ್ ಅವರು ಭಾರತ-ಪಾಕ್ ಏಕತೆಯ ಕುರಿತಂತೆ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ರವಿಶಂಕರ್ ಅವರ ಹೇಳಿಕೆಯನ್ನು ಉಲ್ಲೇಖಿಸಿದ್ದರು. ಆ ವರ್ಷ ರವಿಶಂಕರ್ ಅವರು “ಭಾರತ ಮತ್ತು ಪಾಕಿಸ್ತಾನ ನಡುವೆ ಶಾಂತಿ ಹಾಗೂ ಅಭಿವೃದ್ಧಿಗೆ ಜೈ ಹಿಂದ್ ಹಾಗೂ  ಪಾಕಿಸ್ತಾನ್ ಜಿಂದಾಬಾದ್ ಜತೆಜತೆಯಾಗಿ ಸಾಗಬೇಕು'' ಎಂದು ಯಮುನಾ ತೀರದಲ್ಲಿ ನಡೆದ ಮೂರು ದಿನಗಳ ಜಾಗತಿಕ ಸಾಂಸ್ಕೃತಿಕ ಉತ್ಸವದ ಸಂದರ್ಭ ಹೇಳಿದ್ದರು.

ಖಾನ್ ಅವರ ಕುರಿತಾದ ಮೂಲ ವೀಡಿಯೋದಲ್ಲಿ ಅವರು ಪ್ರಧಾನಿ ಮೋದಿ ಹಾಗೂ ರವಿಶಂಕರ್ ಹೇಳಿಕೆಗಳ ಬಗ್ಗೆ ಮಾತನಾಡುವುದು ಕೇಳಬಹುದು.

ಮೂಲ ವೀಡಿಯೋದಲ್ಲಿ ಖಾನ್ ಅವರು “ಶ್ರೀ ರವಿಶಂಕರ್ ಅವರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆಯನ್ನು ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿಯೇ ಹೇಳಿದ್ದಾರೆ. ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲಾಗುವುದೇ ಎಂದು ದಿಲ್ಲಿಯ ಯಮುನಾ ತೀರದಲ್ಲಿ ನಾನು ಮೋದೀ ಜಿ ಅವರನ್ನು ಕೇಳಬಯಸುತ್ತೇನೆ,'' ಎಂದು  ಹೇಳಿದ್ದರು.

ನನ್ನ ಹಾಗೂ ಕಾಂಗ್ರೆಸ್ ಪಕ್ಷದ ಮಾನಹಾನಿಗೈಯ್ಯುವ ಉದ್ದೇಶದಿಂದ ಸತ್ಯಾಸತ್ಯತೆಯನ್ನು ಪರಾಮರ್ಶಿಸದೆ ಸಂಬಿತ್ ಪಾತ್ರ ಅವರು ಹಳೆಯ ವೀಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ವಿಧಾನಸಭಾ ಚುನಾವಣೆ ವೇಳೆ ಕೂಡ ಈ ವೀಡಿಯೋ ತಿರುಚಲಾಗಿತ್ತು, ಆಗ ಕೂಡ ಪೊಲೀಸ್ ದೂರು ದಾಖಲಿಸಲಾಗಿತ್ತು,'' ಎಂದಿದ್ದಾರೆ.

क्या कोई मेरे लिए इस विडीओ की सत्यता की जाँच कर सकता है?
Social Media में लोगों का कहना है यह व्यक्ति कांग्रेस का नेता नसीम खान है जो पाकिस्तान ज़िंदाबाद के नारे लगा रहा है और मोदी जी को challenge कर रहा है ..
Please run a fact check on this friends ..do let me know .. pic.twitter.com/7SyM2dkE4V

— Sambit Patra (@sambitswaraj) February 7, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X