Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಎಎ ಮುಸ್ಲಿಮರ ಸಮಸ್ಯೆ ಮಾತ್ರವಲ್ಲ,...

ಸಿಎಎ ಮುಸ್ಲಿಮರ ಸಮಸ್ಯೆ ಮಾತ್ರವಲ್ಲ, ದೇಶದ ಸಮಸ್ಯೆ: ಎಚ್.ಡಿ ದೇವೇಗೌಡ

"ದೇಶವನ್ನು ಹಿಂದೂ ರಾಷ್ಟ್ರ ಮಾಡಲು...."

ವಾರ್ತಾಭಾರತಿವಾರ್ತಾಭಾರತಿ8 Feb 2020 6:27 PM IST
share
ಸಿಎಎ ಮುಸ್ಲಿಮರ ಸಮಸ್ಯೆ ಮಾತ್ರವಲ್ಲ, ದೇಶದ ಸಮಸ್ಯೆ: ಎಚ್.ಡಿ ದೇವೇಗೌಡ

ಹಾಸನ, ಫೆ.8: ಸಿಎಎಯಿಂದ ಮುಸ್ಲಿಮರನ್ನು ಹೊರಗೆ ಇಟ್ಟಿರುವುದರಲ್ಲಿ ತಂತ್ರಗಾರಿಗೆ ಇದೆ. ದೇಶದ ಜನರನ್ನು ಇಬ್ಬಾಗ ಮಾಡಲಾಗುತ್ತಿದೆ. ಪೌರತ್ವ ಕಾಯ್ದೆ ಮುಸ್ಲಿಮರ ಸಮಸ್ಯೆ ಮಾತ್ರವಲ್ಲ, ಇದು ದೇಶದ ಸಮಸ್ಯೆ ಎಂದು ಮಾಜಿ ಪ್ರಧಾನ ಮಂತ್ರಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.

ಸಂವಿಧಾನ ರಕ್ಷಿಸಿ, ಪ್ರಜಾಪ್ರಭುತ್ವ ಉಳಿಸಿ ಸಂಘಟನೆಯ ಆಶ್ರಯದಲ್ಲಿ ಕೇಂದ್ರ ಸರಕಾರದ ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್ ವಿರುದ್ಧ ನಗರದ ಎ.ಪಿ.ಜೆ ಅಬ್ದುಲ್ ಕಲಾಂ ರಸ್ತೆ, ಹೊಸ ಈದ್ಗಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ದೇವೇಗೌಡ ಅವರು, ಅಂದು ಇಂದಿರಾ ಗಾಂದಿ ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿದ್ದರು. ಆ ತುರ್ತು ಪರಿಸ್ಥಿತಿ ಪಾರ್ಲಿಮೆಂಟ್ ಒಳಗೆ ಇರಲಿಲ್ಲ. ಇಂದು ಮೋದಿ ಆಡಳಿತದಲ್ಲಿ ಪಾರ್ಲಿಮೆಂಟ್ ಒಳಗೂ ತುರ್ತು ಪರಿಸ್ಥಿತಿ ಹೇರಲಾಗಿದೆ. ಜನ ಪ್ರತಿನಿಧಿಗಳಿಗೆ ಮಾತನಾಡಲು ಬಿಡುತ್ತಿಲ್ಲ. ಸಿಎಎಗೆ ರಾಜ್ಯಸಭೆಯಲ್ಲಿ ಬಹುಮತವಿರಲಿಲ್ಲ. ಆದರೆ ಹೇಗೆ ಬಹುಮತ ಪಡೆದರು ಎಂಬುದನ್ನು ದೇಶದ ಜನತೆ ತಿಳಿದುಕೊಳ್ಳಬೇಕಾಗಿದೆ. ಪ್ರಾದೇಶಿಕ ಪಕ್ಷಗಳನ್ನು ತನ್ನದೇ ದಾಟಿಯಲ್ಲಿ ನಡೆಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ದೇಶವನ್ನು ಹಿಂದೂ ರಾಷ್ಟ್ರ ಮಾಡುವುದು ಸುಲಭ ಸಾಧ್ಯವಲ್ಲ. ಈ ದೇಶದ ಜನ ಇದಕ್ಕೆ ಅವಕಾಶ ನೀಡುವುದಿಲ್ಲ. ಗಾಂಧಿ ಹತ್ಯೆಗೆ ಕಾರಣರಾದವರಿಗೆ ಭಾರತ ರತ್ನ ನೀಡಿ ಎಂದು ಒತ್ತಾಯಿಸುತ್ತಾರೆ. ಗಾಂಧಿಯ ಬಗ್ಗೆ ಮಾತನಾಡುವುದನ್ನು ಕೇಳಿದರೆ ಕರುಳು ಕತ್ತರಿಸಿದಂತಾಗುತ್ತದೆ ಎಂದು ಹೇಳಿದರು.

ನಾವು ರಾಷ್ಟ್ರದಲ್ಲಿ ರಾಜಕೀಯ ಶಕ್ತಿಯನ್ನು ಬೆಳೆಸಿಕೊಳ್ಳಬೇಕು. ಕೇವಲ ಭಾಷಣದಿಂದ ಎಲ್ಲವೂ ಸಾಧ್ಯವಿಲ್ಲ. ಜಾತ್ಯತೀತ ಪಕ್ಷಗಳು ಒಂದಾಗಬೇಕು. ಅಯಾ ರಾಜ್ಯಗಳಲ್ಲಿ ಅವರ ಶಕ್ತಿಯ ಅನುಗುಣವಾಗಿ ಕೆಲಸ ಮಾಡಿದರೆ ಮುಂದಿನ ಅನಾಹುತ ತಡೆಯಬಹುದು. ಸುಪ್ರೀಂ ಕೋರ್ಟ್ ಸಹ ಸ್ವಲ್ಪ ಮಟ್ಟಿಗೆ ಶಕ್ತಿ ಕಳೆದುಕೊಂಡಿದೆ ಎಂಬ ಭಯ ಕಾಡುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ನಮ್ಮನ್ನು ರಕ್ಷಿಸುವವರು ಯಾರು ಎಂಬ ಭಯ ಕಾಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಖ್ಯಾತ ವಕೀಲ ಎಸ್.ಬಾಲಕೃಷ್ಣ ನ್ ಮಾತನಾಡಿ, ದೇಶದಲ್ಲಿ ಸರ್ವಾಧಿಕಾರ ಆಡಳಿತ ಜಾರಿಗೆ ತರಲು ಪ್ರಯತ್ನಿಸಲಾಗುತ್ತಿದೆ. ಈ ದೇಶದಲ್ಲಿ ನಡೆಯುತ್ತಿರುವ ಪ್ರತಿಯೊಂದು ನಡೆಯು ಸರ್ವಾಧಿಕಾರದ ಕಡೆ ನಡೆಯುತ್ತಿದೆ. ಅನೇಕ ಸುಳ್ಳು ಮಾಹಿತಿಗಳನ್ನು ಪ್ರಚಾರ ಮಾಡಲಾಗುತ್ತಿದೆ. ಪೌರತ್ವ ಕಾನೂನು ಹಿಟ್ಲರ್ ನ ಆಡಳಿತದ ಪ್ರಥಮ ನಡೆಯಾಗಿದೆ ಎಂದು ಹೇಳಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X