Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೂಳೂರು ‘ಕಮಾನು ಸೇತುವೆ’ ದುರಸ್ತಿ...

ಕೂಳೂರು ‘ಕಮಾನು ಸೇತುವೆ’ ದುರಸ್ತಿ ಹಿನ್ನೆಲೆ: ಫೆ.20ರಿಂದ ಸಂಚಾರ ನಿಷೇಧಕ್ಕೆ ಹೆದ್ದಾರಿ ಇಲಾಖೆ ಪ್ರಸ್ತಾವನೆ

ವಾರ್ತಾಭಾರತಿವಾರ್ತಾಭಾರತಿ8 Feb 2020 10:24 PM IST
share

ಮಂಗಳೂರು, ಫೆ.8: ರಾ.ಹೆ.66ರ ಕೂಳೂರುವಿನಲ್ಲಿ ಲ್ಗುಣಿ ನದಿಗೆ ಅಡ್ಡವಾಗಿ ಕಟ್ಟಿರುವ ಹಳೆಯ ಕಮಾನು ಸೇತುವೆಯನ್ನು ದುರಸ್ತಿ ಮಾಡಲು ಮುಂದಾಗಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಫೆ.20ರಿಂದ ಈ ಸೇತುವೆಯಲ್ಲಿ ಸಂಚಾರ ನಿಷೇಧಿಸಬೇಕು ಎಂದು ಜಿಲ್ಲಾಡಳಿತಕ್ಕೆ ಪತ್ರ ಬರೆದು ಪ್ರಸ್ತಾವಿಸಿದೆ.

ಸುಮಾರು 68 ವರ್ಷ ಹಳೆಯ ಈ ಕಮಾನು ಸೇತುವೆ ದುರಸ್ತಿ ಕಾಮಗಾರಿಗೆ ಹೆದ್ದಾರಿ ಪ್ರಾಧಿಕಾರವು ಪ್ರಸ್ತಾವಿಸಿದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಸಂಚಾರಿ ಪೊಲೀಸರ ಉಪಸ್ಥಿತಿಯಲ್ಲಿ ಸಭೆ ನಡೆಸಿ ಸಂಚಾರ ಸ್ಥಗಿತದ ಬಗ್ಗೆ ದಿನಾಂಕ ನಿಗದಿಪಡಿಸಲು ಜಿಲ್ಲಾಡಳಿತ ನಿರ್ಧರಿಸಿದೆ.

ಕೂಳೂರಿನಲ್ಲಿ ಈಗ ಇರುವ ಎರಡೂ ಸೇತುವೆಗಳ ಮಧ್ಯೆ ಹೊಸದಾಗಿ 6 ಲೇನ್‌ನ 66 ಕೋ.ರೂ. ವೆಚ್ಚದ ನೂತನ ಸೇತುವೆ ನಿರ್ಮಾಣದ ಪ್ರಸ್ತಾವವು ಪ್ರಸ್ತುತ ಎನ್‌ಎಚ್‌ಎಐ ಪ್ರಧಾನ ಕಚೇರಿಯಲ್ಲಿದೆ. ಆದರೆ ಅದಕ್ಕೆ ಇನ್ನೂ ಅನುಮೋದನೆ ಸಿಕ್ಕಿಲ್ಲ. ಇನ್ನು ಅನುಮೋದನೆಯಾಗಿ ಕಾಮಗಾರಿ ಪೂರ್ಣಗೊಳ್ಳಲು 2-3 ವರ್ಷ ಬೇಕಾದುದರದಿಂದ ಅಲ್ಲಿಯವರೆಗೆ ಹಾಲಿ ಕಮಾನು ಸೇತುವೆಯನ್ನು ದುರಸ್ತಿಪಡಿಸಲು ಹೆದ್ದಾರಿ ಪ್ರಾಧಿಕಾರವು ಮುಂದಾಗಿದೆ. ಇದು ಸುಮಾರು 38 ಲಕ್ಷ ರೂ. ವೆಚ್ಚದಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.

ಕಾಮಗಾರಿ ನಡೆಯುವ ಸಂದರ್ಭ ಪ್ರಯಾಣಿಕರಿಗೆ ಪ್ರಾಧಿಕಾರವು ಪರ್ಯಾಯ ವ್ಯವಸ್ಥೆಗೆ ಆದ್ಯತೆ ನೀಡಲಿದೆ. ಹಾಗಾಗಿ ಉಡುಪಿ ಕಡೆಯಿಂದ ಬರುವ ವಾಹನಗಳು ಕಮಾನು ಸೇತುವೆಗೆ ಮೊದಲೇ ಬಲಕ್ಕೆ ತಿರುಗಿ ಕೂಳೂರು ಹೊಸ ಸೇತುವೆಯಲ್ಲಿ ಸಂಚರಿಸಿ, ಬಳಿಕ ಎಡಕ್ಕೆ ಹಾಕಿರುವ ಹೊಸ ಸಂಪರ್ಕ ರಸ್ತೆಯಲ್ಲಿ ತೆರಳಿ ಮೇಲ್ಸೇತುವೆ ಮೂಲಕ ಸಾಗಬೇಕು. ಅದಕ್ಕಾಗಿ ಅಯ್ಯಪ್ಪ ದೇವಸ್ಥಾನದ ಬಳಿ ಮಧ್ಯೆ ಡಾಮರು ಹಾಕಿ ವ್ಯವಸ್ಥೆ ಮಾಡಲಾಗುತ್ತಿದೆ.

‘ಅಪಾಯಕಾರಿ’ ಅಂದಿದ್ದ ಸೇತುವೆಗೆ ‘ದುರಸ್ಥಿ’!

ಭೂಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯವು ಹೈದರಾಬಾದ್‌ನ ‘ಮೆಸರ್ಸ್ ಆರ್ವಿ ಅಸೋಸಿಯೇಟ್ಸ್’ ಎಂಬ ಏಜೆನ್ಸಿ ನೇಮಕ ಮಾಡಿ ಎಂಬಿಐವಿ ಯಂತ್ರದ ಮೂಲಕ ಈಗಿನ ಹಳೆಯ ಕಮಾನು ಸೇತುವೆಯ ಮೇಲ್ಭಾಗ, ಕೆಳಭಾಗವನ್ನು ತಪಾಸಣೆ, ದಾಖಲೆ ಹಾಗೂ ಮಾದರಿಯನ್ನು ಪರಿಶೀಲಿಸಿ ‘ಸಂಚಾರಕ್ಕೆ ಅನರ್ಹ’ ಎಂದು ರಾ.ಹೆ.ಪ್ರಾಧಿಕಾರಕ್ಕೆ 2018ರಲ್ಲಿ ವರದಿ ನೀಡಿತ್ತು. ಭಾರತ್‌ಮಾಲಾ ಯೋಜನೆ ಬಗ್ಗೆ ಸರ್ವೆ ನಡೆಸುತ್ತಿರುವ ತಜ್ಞರ ತಂಡ ಕೂಡ ಹಳೆಯ ಸೇತುವೆ ಸಂಚಾರಕ್ಕೆ ಯೋಗ್ಯವಾಗಿಲ್ಲ ಎಂದಿತ್ತು. ಹಾಗಾಗಿ ಇದರಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಬೇಕು ಎಂದು ರಾ.ಹೆ. ಪ್ರಾಧಿಕಾರವು ದ.ಕ. ಜಿಲ್ಲಾಡಳಿತಕ್ಕೆ ವರದಿ ನೀಡಿತ್ತು. ಈ ಸೇತುವೆಯ ಮೇಲೆ ಸಂಚಾರ ನಿರ್ಬಂಧ ಮಾಡುವ ಬಗ್ಗೆ ಕಳೆದ ವರ್ಷ ಅಂದಿನ ಜಿಲ್ಲಾಧಿಕಾರಿ ಸಶಿಕಾಂತ್ ಸೆಂಥಿಲ್ ಪ್ರಕಟಿಸಿದ್ದರು. ಆದರೂ ಅದು ಜಾರಿಯಾಗಿರಲಿಲ್ಲ. ಆದರೆ ಪ್ರಸ್ತುತ ಎಂದಿನಂತೆ ಲಘು ಹಾಗೂ ಘನವಾಹನಗಳು ಈ ಸೇತುವೆಯ ಮೇಲೆ ಸಂಚರಿಸುತ್ತಿವೆ.

ಕೂಳೂರುವಿನ ಹಳೇ ಕಮಾನು ಸೇತುವೆಯ ದುರಸ್ತಿ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಕೆಲವು ದಿನ ಸಂಚಾರ ನಿಷೇಧಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಜಿಲ್ಲಾಡಳಿತಕ್ಕೆ ಪತ್ರ ಬಂದಿದೆ. ಸಂಚಾರ ಬದಲಾವಣೆಗೆ ಕ್ರಮ ಕೈಗೊಳ್ಳಬೇಕಾದ ಕಾರಣದಿಂದ ಕೆಲವೇ ದಿನದಲ್ಲಿ ಸಂಚಾರಿ ಪೊಲೀಸರ ಜತೆಗೆ ಸಭೆ ನಡೆಸಿ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆಗಳನ್ನು ಸಿದ್ದಪಡಿಸಿ ಸೂಕ್ತ ದಿನಾಂಕವನ್ನು ತಿಳಿಸಲಾಗುವುದು ಎಂದು ದ.ಕ.ಜಿಲ್ಲಾಧಿಕಾರಿ ಸಿಂಧು ಬಿ.ರೂಪೇಶ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X