Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಾರ್ಚ್ ತಿಂಗಳಾದ್ಯಂತ ಕರ್ನಾಟಕ ಮುಸ್ಲಿಂ...

ಮಾರ್ಚ್ ತಿಂಗಳಾದ್ಯಂತ ಕರ್ನಾಟಕ ಮುಸ್ಲಿಂ ಜಮಾಅತ್ ಸದಸ್ಯತನ ಅಭಿಯಾನ: ಎನ್.ಕೆ.ಎಂ ಶಾಫಿ ಸಅದಿ

ಫೆಬ್ರವರಿ 20ರಿಂದ 50 ದಿನಗಳ 'ಪ್ರಜಾ ಭಾರತ' ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ8 Feb 2020 11:13 PM IST
share
ಮಾರ್ಚ್ ತಿಂಗಳಾದ್ಯಂತ ಕರ್ನಾಟಕ ಮುಸ್ಲಿಂ ಜಮಾಅತ್ ಸದಸ್ಯತನ ಅಭಿಯಾನ: ಎನ್.ಕೆ.ಎಂ ಶಾಫಿ ಸಅದಿ

ಬೆಂಗಳೂರು: ರಾಜ್ಯದ ಮುಸ್ಲಿಂ ಸಮುದಾಯದಲ್ಲಿ ಐಕ್ಯತೆ ಮೂಡಿಸಿ ಸಮಾಜದ ಸಬಲೀಕರಣ ಮತ್ತು ರಾಷ್ಟ್ರಹಿತದ ಸಂರಕ್ಷಣೆಗಾಗಿ ರೂಪುಗೊಂಡಿರುವ ಕರ್ನಾಟಕ ಮುಸ್ಲಿಂ ಜಮಾತ್ ಇದರ ಸದಸ್ಯತನ ಅಭಿಯಾನವು ಮಾರ್ಚ್1 ರಿಂದ 31ರ ತನಕ ನಡೆಯಲಿದೆ ಎಂದು ಪ್ರಧಾನ ಕಾರ್ಯದರ್ಶಿ ಎನ್.ಕೆ.ಎಂ ಶಾಫಿ ಸಅದಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಕರ್ನಾಟಕ ಮುಸ್ಲಿಂ ಜಮಾತ್ ರಾಜ್ಯ ಪ್ರತಿನಿಧಿ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು. ಸಿಎಎ, ಎನ್‌ಆರ್‌ಸಿ ಯಂತಹ ವಿವಾದಾತ್ಮಕ ಕಾಯ್ದೆಗಳಿಂದ ಬಹುಜನ ಭಾರತೀಯರು ಆತಂಕಕ್ಕೀಡಾಗಿದ್ದು, ಸಂವಿಧಾನವೇ ಪ್ರಶ್ನಿಸಲ್ಪಡುತ್ತಿದೆ. ಈ ಹಿನ್ನೆಲೆಯಲ್ಲಿ ಬಹು ಜನರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ವಿಶ್ವ ಸಾಮಾಜಿಕ ನ್ಯಾಯ ದಿನವಾದ ಫೆಬ್ರವರಿ 20ರಿಂದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿ ದಿನವಾದ ಎಪ್ರಿಲ್ 14ರ ತನಕ 50 ದಿನಗಳ 'ಪ್ರಜಾ ಭಾರತ' ಅಭಿಯಾನವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಇದೇ ಸಂದರ್ಭ "ದ್ವೇಷ ಬಿಟ್ಟು ದೇಶ ಕಟ್ಟು" ಎಂಬ ಘೋಷಣೆಯೊಂದಿಗೆ ರಾಜ್ಯಾದ್ಯಂತ ವಿವಿಧ ಬಗೆಯ ಕಾರ್ಯಕ್ರಮಗಳು ನಡೆಯಲಿವೆ ಎಂದು ಅವರು ತಿಳಿಸಿದರು.

ಉಪಾಧ್ಯಕ್ಷ ಮೌಲಾನಾ ಅಬೂ ಸುಫ್ಯಾನ್ ಮದನಿ ಅಧ್ಯಕ್ಷತೆಯಲ್ಲಿ ನಡೆದ ಪ್ರತಿನಿಧಿ ಸಮಾವೇಶವನ್ನು ಉಪಾಧ್ಯಕ್ಷ ಮೌಲಾನಾ ಮುಫ್ತಿ ಶಬ್ಬೀರ್ ಅಲಿ ನೂರಿ ಬೆಂಗಳೂರು ಉದ್ಘಾಟಿಸಿದರು. 'ಭಾರತದ ಪ್ರಚಲಿತ ವಿದ್ಯಮಾನಗಳು' ಎಂಬ ವಿಷಯದ ಬಗ್ಗೆ ನಿವೃತ್ತ ಕೆಎಎಸ್ ಅಧಿಕಾರಿ ಈಜಾಝ್ ಅಹ್ಮದ್,  'ಮುಸ್ಲಿಮರ ರಾಜಕೀಯ ಸಬಲೀಕರಣ'ದ ಬಗ್ಗೆ ಹಿರಿಯ ಪತ್ರಕರ್ತ ಬಿಎಂ ಹನೀಫ್, ಕರ್ನಾಟಕ ಮುಸ್ಲಿಂ ಜಮಾತ್ ಕಾರ್ಯ ಯೋಜನೆಗಳು ಎಂಬ ಬಗ್ಗೆ ಪತ್ರಕರ್ತ ಅಬ್ದುಲ್ ಹಮೀದ್ ಬಜ್ಪೆ ವಿಷಯ ಮಂಡಿಸಿದರು.

ಸಯ್ಯದ್ ಸೈಫುಲ್ಲಾ ದಾವಣಗೆರೆ, ಹಾಜಿ ಮುಹಮ್ಮದ್ ಸಾಗರ, ಅಬ್ದುರ್ರಹ್ಮಾನ್ ನ್ಯಾಷನಲ್ ತಿರ್ಥಹಳ್ಳಿ, ಹಾಜಿ ಅಬೂಬಕರ್ ನೇಜಾರು, ಮೌಲಾನಾ ತಖಿಯುದ್ದೀನ್ ಹಾಸನ, ಅಬ್ದುಲ್ ಅಝೀಝ್ ರಝ್ವಿ ಬಿಜಾಪುರ, ಅಹ್ಮದ್ ಪಾಷಾ ಬೀದರ್, ನ್ಯಾಯವಾದಿ ಝುಲ್ಫಿಕರ್ ಅಲಿ ಚಿತ್ರದುರ್ಗ, ಅಸ್ಮತ್ ಪಾಷಾ ರಾಮನಗರ, ಜಾಕಿರ್ ಹುಸೇನ್ ಮೂಡಿಗೆರೆ, ಝಬೀಉಲ್ಲಾ ರಝ್ವಿ ತುಮಕೂರು, ಗೌಸ್ ಮುರಾದಾನ್ ಬಳ್ಳಾರಿ, ಮಂಝರ್ ಹುಸೈನ್ ಅಂಕೋಲಾ ಮೊದಲಾದವರು ಉಪಸ್ಥಿತರಿದ್ದರು.

ಕಾರ್ಯದರ್ಶಿ ಯಾಕೂಬ್ ಯೂಸುಫ್ ಶಿವಮೊಗ್ಗ ಸ್ವಾಗತಿಸಿ, ಮೀರಾನ್ ಸಾಬ್ ಕಡಬ ಧನ್ಯವಾದ ಅರ್ಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X