Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಾಹೀನ್ ಶಾಲೆಯ ವಿದ್ಯಾರ್ಥಿಗಳಿಗೆ...

ಶಾಹೀನ್ ಶಾಲೆಯ ವಿದ್ಯಾರ್ಥಿಗಳಿಗೆ ಪೊಲೀಸರಿಂದ ಮಾನಸಿಕ ಕಿರುಕುಳ: ಪೀಪಲ್ಸ್ ಫೋರಂ ಆರೋಪ

ವಾರ್ತಾಭಾರತಿವಾರ್ತಾಭಾರತಿ9 Feb 2020 12:05 AM IST
share
ಶಾಹೀನ್ ಶಾಲೆಯ ವಿದ್ಯಾರ್ಥಿಗಳಿಗೆ ಪೊಲೀಸರಿಂದ ಮಾನಸಿಕ ಕಿರುಕುಳ: ಪೀಪಲ್ಸ್ ಫೋರಂ ಆರೋಪ

ಬೀದರ್, ಫೆ.8: ಇಲ್ಲಿನ ಪ್ರತಿಷ್ಟಿತ ಶಾಹೀನ್ ಸಂಸ್ಥೆಯ ಪ್ರಾಥಮಿಕ ಶಾಲೆಯಲ್ಲಿ ಸಿಎಎ, ಎನ್‌ಆರ್‌ಸಿ ವಿರುದ್ಧ ನಡೆದ ಕಾರ್ಯಕ್ರಮದ ವಿಷಯದಲ್ಲಿ ಪೋಲೀಸರು ಶಾಲಾ ಮಕ್ಕಳೊಡನೆ ನಡೆದುಕೊಳ್ಳುತ್ತಿರುವ ರೀತಿಯ ಬಗ್ಗೆ ಮಕ್ಕಳ ಹಕ್ಕು ಕಲ್ಯಾಣ ಸಮಿತಿಯವರೂ ಕಣ್ಮುಚ್ಚಿ ಕುಳಿತಿದ್ದಾರೆಂದು ಕರ್ನಾಟಕ ಪೀಲ್ಸ್ ಫೋರಂ ಸಂಸ್ಥಾಪಕ, ಕಲಬುರಗಿ ನಗರಾಭಿವೃದ್ಧಿ ಮಾಜಿ ಅಧ್ಯಕ್ಷ ಡಾ. ಅಜಗರ್ ಚುಲಬುಲ್ ಆರೋಪಿಸಿದ್ದಾರೆ.

ಇಂದು ಬೀದರ್ ನಲ್ಲಿ ವಾರ್ತಾಭಾರತಿ ಜೊತೆ ಮಾತನಾಡಿದ ಅವರು, ಬಾಲಾಪರಾಧಿ ಕಾಯ್ದೆಯ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಪೋಲೀಸರು ಐದು ಬಾರಿ ಎಂಬತ್ತಕ್ಕೂ ಹೆಚ್ಚಿನ ಮಕ್ಕಳನ್ನು ವಿಚಾರಣೆ ನಡೆಸಿದ್ದಾರೆ. ಪೊಲೀಸರು ತಮ್ಮ ಯೂನಿಫಾರಂನಲ್ಲಿಯೇ ಮಕ್ಕಳನ್ನು ವಿಚಾರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾಟಕದಲ್ಲಿ ಪಾತ್ರ ನಿರ್ವಹಿಸಿದ ವಿದ್ಯಾರ್ಥಿಗಳ ಕುರಿತು ಮಕ್ಕಳ ಕಲ್ಯಾಣ ಸಮಿತಿಗೆ ಮಾಹಿತಿ ಕೊಡದೆ ಮತ್ತು ಪೋಷಕರು ಇಲ್ಲದೇ, ತನಿಖಾ ತಂಡ ಯೂನಿಫಾರಂನಲ್ಲಿ ಹೇಗೆ ವಿಚಾರಣೆ ಮಾಡುತ್ತಿದ್ದಾರೆ ? ಒಂಬತ್ತು ವರುಷದ ಮಗುವಿನ ವಿಧವೆ ತಾಯಿಯನ್ನು ಜೈಲಿಗಟ್ಟಿದ್ದಾರೆ. ಆಕೆಯ ಒಂಬತ್ತು ವರುಷದ ಮಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ, ಆ ಮಗು ತಾಯಿಯಿಲ್ಲದೆ, ಶಾಲೆಯ ಶಿಕ್ಷಕರ ಜೊತೆಯಿದ್ದಾಳೆ. ಕಳೆದ ಒಂದು ವಾರದಿಂದ ಪೊಲೀಸರು ಮಕ್ಕಳಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ನಂತರ ಪೀಪಲ್ಸ್ ಫೋರಂ ಸಂಚಾಲಕ ಮಾರುತಿ ಮಾನ್ಪಡೆ ಮಾತನಾಡಿ, ಅಭಿನಯ ಪಾತ್ರ ಮಾಡಿ ಪ್ರಧಾನಿ ಅವರನ್ನು ಟೀಕಿಸುವುದು ದೇಶದ್ರೋಹ ಹೇಗಾಗುತ್ತದೆ ? ಸರಕಾರದ ಜನವಿರೋಧಿ ನೀತಿಗಳನ್ನು ವಿರೋಧಿಸಿದಕ್ಕೆ ಇಡೀ ಶಾಲೆಯನ್ನೇ ದೇಶದ್ರೋಹಿ ಎಂದು ಬಿಂಬಿಸಲಾಗುತ್ತಿದ್ದು, ಈ ಮೂಲಕವೇ ಒಂದು ಅಲ್ಪಸಂಖ್ಯಾತರ ಸಮುದಾಯದ ಪ್ರತಿಷ್ಟಿತ ಶಾಲೆ ಹಾಗೂ ಕಲ್ಯಾಣ ಕರ್ನಾಟಕ ಭಾಗಕ್ಕೆ ಮಸಿ ಬಳಿಯುವ ಹುನ್ನಾರ ನಡೆಯುತ್ತಿದೆ. ಇಂತಹ ನೀಚ ಮನಸ್ಥಿತಿ ಹೊಂದಿದ ಕೆಲವು ವ್ಯಕ್ತಿಗಳು ಇದರ ಹಿಂದೆ ಸಂಚು ರೂಪಿಸಿ ವಿದ್ಯಾರ್ಥಿ ಸಮುದಾಯದ ದನಿಯನ್ನ ಹತ್ತಿಕ್ಕುವ ಷಡ್ಯಂತ್ರ ಹೆಣೆಯುತ್ತಿದ್ದಾರೆ ಎಂದು ಹೇಳಿದರು.

ದೇಶದಲ್ಲಿ ಸಿಎಎ, ಎನ್.ಪಿ.ಆರ್ ಮತ್ತು ಎನ್.ಆರ್.ಸಿ ಕಾಯ್ದೆಗಳು ಜನರ ಆಕ್ರೋಶಕ್ಕೆ ಗುರಿಯಾಗಿದ್ದು, ನಮ್ಮ ದೇಶದ ಆರ್ಥಿಕ ಮತ್ತು ಶೈಕ್ಷಣಿಕ ಪರಿಸ್ಥಿತಿಯ ಬಗ್ಗೆ ಚಿಂತಿಸದ ಪ್ರಧಾನಿಯ ವಿರುದ್ಧ ದೇಶದೆಲ್ಲೆಡೆ ಆಕ್ರೋಶ ಕೂಗು ಕೇಳಿಬರುತ್ತಿದೆ. ಆದರೆ ಬಿಜೆಪಿ ನಾಯಕರು ಮತ್ತು ಅವರ ಐಟಿ ಸೆಲ್ ಮುಖಂಡರು ಇಂತಹ ಹೋರಾಟಗಳನ್ನು ಎದುರಿಸಲಾಗದೆ, ತಿರುಚಿ ಪ್ರಜೆಗಳನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸುತ್ತಿದ್ದಾರೆ. ವಾಸ್ತವದಲ್ಲಿ ವಿದ್ಯಾರ್ಥಿಗಳು ನಾಟಕ ಮಾಡಿ ಸರ್ಕಾರವನ್ನು ಅಥವಾ ಆಡಳಿತಗಾರರನ್ನು ನಿಂದಿಸಿದರೆ ಅದು ಕೇವಲ ನಿಂದನೆಯಾಗುತ್ತದೆಯೇ ಹೊರತು ದೇಶದ್ರೋಹವಾಗುವುದಿಲ್ಲ. ಆದರೆ ಈ ಪ್ರಕರಣದಲ್ಲಿ ಪೊಲೀಸರು ಪೂರ್ವಾಗ್ರಹ ಪೀಡಿತರಾಗಿ ಮಕ್ಕಳ ಮೇಲೆ ಹಾಗೂ ಶಿಕ್ಷಣ ಸಂಸ್ಥೆಯ ಮೇಲೆ ದೇಶದ್ರೋಹ ಪ್ರಕರಣ ದಾಖಲು ಮಾಡಿರುವುದು ಖಂಡನೀಯ. ಈ ಮೂಲಕ ದೇಶದ ಪ್ರಜಾ ಸ್ವಾತಂತ್ರ್ಯಕ್ಕೆ ಅವಮಾನ ಮಾಡುತ್ತಿದ್ದು, ಪ್ರಜೆಗಳನ್ನು ಹತ್ತಿಕ್ಕುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ತಿಳಿಸಿದರು. 

ಈ ಕೂಡಲೇ ಸರಕಾರ ಎಚ್ಚೆತ್ತುಕೊಂಡು ಶಾಹೀನ್ ಸಂಸ್ಥೆಯ ಮೇಲೆ ನಡೆಯುತ್ತಿರುವ ಆಧಾರ ರಹಿತ ಆರೋಪ ರದ್ದು ಪಡಿಸಿ, ಬಂಧಿತ ಪೋಷಕರು ಮತ್ತು ಮಕ್ಕಳನ್ನು ಬಿಡುಗಡೆ ಮಾಡಬೇಕು. ಸರಕಾರ, ಪೊಲೀಸರು ವಿದ್ಯಾರ್ಥಿ ಮತ್ತು ಪೋಷಕರೊಂದಿಗೆ ನಡೆದುಕೊಳುತ್ತಿರುವ ರೀತಿ ಸರಿಯಲ್ಲ. ಸರಕಾರ ಪ್ರಕರಣ ರದ್ದು ಪಡಿಸದಿದ್ದರೆ, ಕಲ್ಯಾಣ ಕರ್ನಾಟಕ ಬಂದ್ ಗೆ ಕರೆ ನೀಡುವುದು ಹಾಗೂ ಉಗ್ರ ಹೋರಾಟಕ್ಕೆ ಕರೆ ನೀಡುವ ಬಗ್ಗೆ ಚಿಂತಸಬೇಕಾಗುತ್ತಿದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X