Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆ.5ರಿಂದೀಚಿಗೆ ಕಾಶ್ಮೀರದಲ್ಲಿ...

ಆ.5ರಿಂದೀಚಿಗೆ ಕಾಶ್ಮೀರದಲ್ಲಿ ಉಗ್ರವಾದವನ್ನು ಅಪ್ಪುವ ಯುವಕರ ಸಂಖ್ಯೆಯಲ್ಲಿ ಇಳಿಕೆ: ವರದಿ

ವಾರ್ತಾಭಾರತಿವಾರ್ತಾಭಾರತಿ9 Feb 2020 10:17 PM IST
share
ಆ.5ರಿಂದೀಚಿಗೆ ಕಾಶ್ಮೀರದಲ್ಲಿ ಉಗ್ರವಾದವನ್ನು ಅಪ್ಪುವ ಯುವಕರ ಸಂಖ್ಯೆಯಲ್ಲಿ ಇಳಿಕೆ: ವರದಿ

ಶ್ರೀನಗರ,ಫೆ.9: ಕಳೆದ ವರ್ಷದ ಆ.5ರಂದು 370ನೇ ವಿಧಿಯನ್ನು ರದ್ದುಗೊಳಿಸಿದ ಬಳಿಕ ಕಾಶ್ಮೀರದಲ್ಲಿ ಉಗ್ರವಾದವನ್ನು ಸೇರುವ ಯುವಕರ ಸಂಖ್ಯೆಯಲ್ಲಿ ಗಮನಾರ್ಹ ಇಳಿಕೆಯಾಗಿದೆ ಎಂದು ಭದ್ರತಾ ಏಜೆನ್ಸಿಗಳು ಸಿದ್ಧಪಡಿಸಿರುವ ವರದಿಯೊಂದು ತಿಳಿಸಿದೆ.

ಆ.5ರಿಂದೀಚಿಗೆ ಪ್ರತಿ ತಿಂಗಳು ಸರಾಸರಿ ಐವರು ಕಾಶ್ಮೀರಿ ಯುವಕರು ಉಗ್ರರನ್ನು ಸೇರಿಕೊಂಡಿದ್ದಾರೆ. ಇದಕ್ಕೂ ಮೊದಲು ಇಂತಹವರ ಸಂಖ್ಯೆ ಪ್ರತಿ ತಿಂಗಳಿಗೆ 14ರಷ್ಟಿತ್ತು ಎಂದು ಅದು ಹೇಳಿದೆ.

ಆ.5ರ ಮೊದಲು ಮತ್ತು ನಂತರದ ಉಗ್ರವಾದ ಸಂಬಂಧಿತ ಬೆಳವಣಿಗೆಗಳನ್ನು ಹೋಲಿಸಿರುವ ವರದಿಯು,ಮೊದಲು ಉಗ್ರರ ಅಂತ್ಯಸಂಸ್ಕಾರದಲ್ಲಿ 10,000ಕ್ಕೂ ಅಧಿಕ ಸಂಖ್ಯೆಯಲ್ಲಿ ಜನರು ಸೇರುತ್ತಿದ್ದರು. ಅಂತಹ ಸಮಾವೇಶ ಈಗ ಗತವಿಷಯವಾಗಿದೆ. ಇವು ಉಗ್ರವಾದಕ್ಕೆ ಯುವಕರನ್ನು ಭರ್ತಿ ಮಾಡಿಕೊಳ್ಳಲು ಪ್ರಶಸ್ತ ಸಂದರ್ಭಗಳಾಗಿರುತ್ತಿದ್ದವು. ಈಗ ಅಂತ್ಯಸಂಸ್ಕಾರ ಸ್ಥಳಗಳಲ್ಲಿ ಮೃತ ಉಗ್ರರ ಬಂಧುಗಳು ಮಾತ್ರ ಬೆರಳೆಣಿಕೆಯ ಸಂಖ್ಯೆಯಲ್ಲಿ ಹಾಜರಿರುವುದನ್ನು ಕಾಣಬಹುದು ಎಂದಿದೆ.

ಭದ್ರತಾ ಪಡೆಗಳ ಮುತ್ತಿಗೆಯಲ್ಲಿ ಸಿಕ್ಕಿ ಹಾಕಿಕೊಂಡ ಭಯೊತ್ಪಾದಕರು ತಮ್ಮ ಕುಟುಂಬ ಸದಸ್ಯರಿಗೆ ಮಾಡುತ್ತಿದ್ದ ಕೊನೆಯ ದೂರವಾಣಿ ಕರೆ ಯುವಜನರು ಉಗ್ರವಾದವನ್ನು ಸೇರುವಂತೆ ಪ್ರಚೋದಿಸುತ್ತಿದ್ದ ಇನ್ನೊಂದು ಕಾರಣವಾಗಿತ್ತು. ಇಂತಹ ಕರೆಗಳ ಧ್ವನಿಮುದ್ರಣಗಳು ಜನರ ನಡುವೆ ಹರಿದಾಡುತ್ತಿದ್ದವು ಮತ್ತು ಬಂದೂಕನ್ನು ಕೈಗೆತ್ತಿಕೊಳ್ಳಲು ಕೆಲವು ಯುವಕರನನ್ನು ಪ್ರಚೋದಿಸುತ್ತಿದ್ದವು. ಆದರೆ ಆ.5ರಬಳಿಕ ಇಂತಹ ಕರೆಗಳು ವರದಿಯಾಗಿಲ್ಲ. ಸಂವಹನಗಳ ಮೇಲಿನ ನಿರ್ಬಂಧ ಮತ್ತು ಪರಿಸ್ಥಿತಿಯಲ್ಲಿ ಬದಲಾವಣೆ ಇದಕ್ಕೆ ಕಾರಣವಾಗಿವೆ ಎಂದು ವರದಿಯು ತಿಳಿಸಿದೆ.

ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಕಾಳಗದ ವೇಳೆ ಮತ್ತು ಇತರ ಸಂದರ್ಭಗಳಲ್ಲಿಕಲ್ಲು ತೂರಾಟದ ಘಟನೆಗಳಲ್ಲಿಯೂ ಗಮನಾರ್ಹ ಇಳಿಕೆಯಾಗಿದೆ ಎಂದಿರುವ ವರದಿಯು,ಇದರಿಂದಾಗಿ ಸಹಜವಾಗಿಯೇ ಅಶ್ರುವಾಯು ಮತ್ತು ಪೆಲೆಟ್ ಗುಂಡುಗಳ ಬಳಕೆಯು ಕಡಿಮೆಯಾಗಿದೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ರಕ್ಷಣೆ ಸಂದರ್ಭಗಳಲ್ಲಿ ಸಾವುಗಳ ಸಂಖ್ಯೆ ನಗಣ್ಯವಾಗಿದೆ ಎಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X