Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹಣಕಾಸು ಬಿಕ್ಕಟ್ಟನ್ನು ನಿಭಾಯಿಸಲು...

ಹಣಕಾಸು ಬಿಕ್ಕಟ್ಟನ್ನು ನಿಭಾಯಿಸಲು ಕಂತುಗಳಲ್ಲಿ ಶಸ್ತ್ರಾಸ್ತ್ರ ಖರೀದಿ,ರಕ್ಷಣಾ ಭೂಮಿ ಮಾರಾಟ: ಸಿಡಿಎಸ್ ಜ.ಬಿಪಿನ್ ರಾವತ

ವಾರ್ತಾಭಾರತಿವಾರ್ತಾಭಾರತಿ9 Feb 2020 10:28 PM IST
share
ಹಣಕಾಸು ಬಿಕ್ಕಟ್ಟನ್ನು ನಿಭಾಯಿಸಲು ಕಂತುಗಳಲ್ಲಿ ಶಸ್ತ್ರಾಸ್ತ್ರ ಖರೀದಿ,ರಕ್ಷಣಾ ಭೂಮಿ ಮಾರಾಟ: ಸಿಡಿಎಸ್ ಜ.ಬಿಪಿನ್ ರಾವತ

ಹೊಸದಿಲ್ಲಿ,ಫೆ.9: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆ.1ರಂದು ಸಂಸತ್ತಿನಲ್ಲಿ ಮಂಡಿಸಿದ ಬಜೆಟ್ 1.34 ಲ.ಕೋ.ರೂ.ಗಳ ಪಿಂಚಣಿಗಳನ್ನು ವಿತರಿಸಲು ಪರದಾಡುತ್ತಿರುವ ಮತ್ತು ಈಗಾಗಲೇ ಮಾಡಿರುವ ಶಸ್ತ್ರಾಸ್ತ್ರ ಖರೀದಿಗಳ ಇಎಂಐಗಳನ್ನು ಪಾವತಿಸಲೂ ಕೈಯಲ್ಲಿ ಹಣವಿಲ್ಲದ ಸಶಸ್ತ್ರ ಪಡೆಗಳ ಪಾಲಿಗೆ ಇನ್ನೊಂದು ನಿರಾಶಾದಾಯಕ ಬಜೆಟ್ ಆಗಿದೆ. ಆದರೆ ರಕ್ಷಣಾ ಖರೀದಿಗಳ ಉಸ್ತುವಾರಿಯನ್ನು ಹೊಂದಿರುವ ನೂತನ ರಕ್ಷಣಾ ಪಡೆಗಳ ಮುಖ್ಯಸ್ಥ ಜ.ಬಿಪಿನ್ ರಾವತ್ ಅವರು ಈ ಬಗ್ಗೆ ಆಶಾವಾದಿಯಾಗಿದ್ದಾರೆ.

ಆಂಗ್ಲ ಸುದ್ದಿವಾಹಿನಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ರಾವತ್ ಅವರು,‘ನಾವು ಮುಂಗಡಪತ್ರವನ್ನು ಹಣಕಾಸಿನ ದೃಷ್ಟಿಯಿಂದ ನೋಡಬಾರದು. ಮುಂಗಡಪತ್ರದಲ್ಲಿ ನಮಗೆ ಲಭ್ಯವಾಗಿಸಿರುವ ಹಣಕಾಸಿನ ನಿರ್ವಹಣೆಯತ್ತ ನಾವು ನೋಡಬೇಕು. ಒಂದು ವೇಳೆ ಸರಕಾರವು ನಮಗೆ ಎರಡು ಲ.ಕೋ.ರೂ.ಗಳನ್ನು ನೀಡಿ ಮುಂದಿನೆರಡು ವರ್ಷಗಳಲ್ಲಿ ಸಶಸ್ತ್ರ ಪಡೆಗಳನ್ನು ಆಧುನಿಕರಣಗೊಳಿಸೋಣ ಎಂದು ಹೇಳಿದ್ದರೆ ಹಾಗೆ ಮಾಡಲು ನಮಗೆ ಸಾಧ್ಯವೇ? ಇಲ್ಲ,ಏಕೆಂದರೆ ನಮಗೆ ಅಗತ್ಯವಾಗಿರುವುದು ಮುಕ್ತ ಮಾರುಕಟ್ಟೆಯಲ್ಲಿ ದೊರೆಯುವುದಿಲ್ಲ. ಅದು ಬಾಳೆಹಣ್ಣು ಮತ್ತು ಕಿತ್ತಳೆಗಳನ್ನು ಖರೀದಿಸಿದಂತಲ್ಲ ’ಎಂದು ಹೇಳಿದರು.

ಮುಂಗಡ ಪತ್ರದಲ್ಲಿ ಸಶಸ್ತ್ರ ಪಡೆಗಳಿಗೆ ಕೇವಲ 1.13 ಲ.ಕೋ.ರೂ.ಗಳನ್ನು ಹಂಚಿಕೆ ಮಾಡಲಾಗಿದೆ. ಈಗ ಬಾಕಿಯಿರುವ ಇಎಂಐಗಳನ್ನು ಪಾವತಿಸಿದ ಬಳಿಕ ಹೊಸ ಖರೀದಿಗೆ ಏನಾದರೂ ಹಣ ಉಳಿಯುವುದೇ ಎನ್ನುವುದು ಸಶಸ್ತ್ರ ಪಡೆಗಳನ್ನು ಕಾಡುತ್ತಿರುವ ಪ್ರಶ್ನೆಯಾಗಿದೆ.

ನಮ್ಮ ಆದ್ಯತೆಗಳು ಏನು ಎನ್ನುವುದನ್ನು ನಾವು ನೋಡಬೇಕು. ಮೂರೂ ಪಡೆಗಳ ಆಧುನೀಕರಣದಲ್ಲಿ ನಾವು ಸಮತೋಲನವನ್ನು ಕಾಯ್ದುಕೊಳ್ಳಬೇಕು. ಆದರೆ ಏನೇ ಖರೀದಿ ಮಾಡಲಿ,ಅದು ಹಂತ ಹಂತವಾಗಿ ನಡೆಯಬೇಕು ಎನ್ನುವುದನ್ನು ಪ್ರಮುಖವಾಗಿ ಬಿಂಬಿಸಲು ನಾನು ಬಯಸಿದ್ದೇನೆ. ಉದಾಹರಣೆಗೆ ನಾವು ಎಲ್ಲ ಟ್ಯಾಂಕ್‌ಗಳನ್ನು ಮೂರು ವರ್ಷಗಳಲ್ಲಿ ಖರೀದಿಸಿದರೆ 20-30 ವರ್ಷಗಳ ಬಳಿಕ ಎಲ್ಲವೂ ಹಳೆಯದಾಗಿ ಬಳಕೆಗೆ ಅನರ್ಹವಾಗುತ್ತವೆ. ಅದಕ್ಕೆ ಅವಕಾಶವಾಗದಂತೆ ಹಂತ ಹಂತವಾಗಿ ಖರೀದಿ ಪ್ರಕ್ರಿಯೆ ನಡೆಸಬೇಕು ’ ಎಂದರು.

‘ಮೂಲಸೌಕರ್ಯ ಅಭಿವೃದ್ಧಿ ಇತ್ಯಾದಿಗಳಿಗಾಗಿ ಮುಂದಿನ 10 ವರ್ಷಗಳಲ್ಲಿ 35,000 ಕೋ.ರೂ.ಗಳನ್ನು ಕ್ರೋಢೀಕರಿಸುವುದು ನನ್ನ ಉದ್ದೇಶವಾಗಿದೆ. ಇದಕ್ಕೆ ರಕ್ಷಣಾ ಹಣವನ್ನು ಬಳಸಲಾಗುವುದಿಲ್ಲ. ರಕ್ಷಣಾ ಭೂಮಿಯ ಕೆಲವು ಭಾಗವನ್ನು ನಾವು ಭಾರತಮಾಲಾ ರಸ್ತೆಗಳಂತಹ ರಾಷ್ಟ್ರೀಯ ಯೋಜನೆಗಳಿಗಾಗಿ ಕೇಂದ್ರ ಅಥವಾ ರಾಜ್ಯ ಸರಕಾರಗಳಿಗೆ ಹಸ್ತಾಂತರಿಸಿ ಅದಕ್ಕೆ ಪ್ರತಿಫಲವಾಗಿ ಅಲ್ಲಿ ನಮಗೆ ಅಗತ್ಯವಾದ ಮೂಲಸೌಕರ್ಯ ನಿರ್ಮಾಣಕ್ಕೆ ಕೇಳಿಕೊಳ್ಳಬಹುದಾಗಿದೆ ’ ಎಂದು ರಾವತ್ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X