Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಐಸ್ ಸ್ಕೇಟಿಂಗ್ ನಲ್ಲಿ‌ ಅಂತರಾಷ್ಟ್ರೀಯ...

ಐಸ್ ಸ್ಕೇಟಿಂಗ್ ನಲ್ಲಿ‌ ಅಂತರಾಷ್ಟ್ರೀಯ ಚಿನ್ನದ ಪದಕ ಪಡೆದ ಅನಘಾಗೆ ಸಿಎಂ ಅಭಿನಂದನೆ

ವಾರ್ತಾಭಾರತಿವಾರ್ತಾಭಾರತಿ9 Feb 2020 10:47 PM IST
share
ಐಸ್ ಸ್ಕೇಟಿಂಗ್ ನಲ್ಲಿ‌ ಅಂತರಾಷ್ಟ್ರೀಯ ಚಿನ್ನದ ಪದಕ ಪಡೆದ ಅನಘಾಗೆ ಸಿಎಂ ಅಭಿನಂದನೆ

ಮಂಗಳೂರು: ದ.ಕ. ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ, ಅಂತರಾಷ್ಟ್ರೀಯ ಐಸ್ ಸ್ಕೇಟಿಂಗ್ ನಲ್ಲಿ ಎರಡು ಚಿನ್ನದ ಪದಕ ಪಡೆದ ಮಂಗಳೂರಿನ  ಅನಘಾ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಳೂರಿನ ಅವರ ಸ್ವಗೃಹ ಧವಳಗಿರಿಯಲ್ಲಿ ಅಭಿನಂದಿಸಿದರು.

ಕಿರಿಯ ಪ್ರಾಯದಲ್ಲೇ ಐಸ್ ಸ್ಕೇಟಿಂಗ್ ಅನ್ನುವ ಕಷ್ಟಕರ ಕ್ರೀಡೆಯಲ್ಲಿ ಸಾಧನೆ ಮಾಡಿ ಅಂತರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ ಪಡೆದಿರೋದು ಈ ರಾಜ್ಯಕ್ಕೆ ಹೆಮ್ಮೆಯ ವಿಚಾರ, ಮುಂದಿನ ದಿನದಲ್ಲೂ ಈ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿ ರಾಜ್ಯ ಹಾಗೂ ದೇಶಕ್ಕೆ ಹೆಸರು ತರುವಂತೆ ಅವರು ಆಶಿಸಿದರು.

ಅನಘಾ  ಜ. 4 ಹಾಗೂ 5 ರಂದು ಸಿಂಗಾಪುರದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಐಸ್ ಸ್ಕೇಟಿಂಗ್ ನಲ್ಲಿ ಎರಡು ಚಿನ್ನದ ಪದಕ ಪಡೆದು ಅತೀ ಕಿರಿಯ ವಯಸ್ಸಿನಲ್ಲಿ ಅಂತರರಾಷ್ಟ್ರೀಯ ಮಟ್ಟದ ಚಿನ್ನದ ಪದಕ ಪಡೆದ ದೇಶದ ಮೊದಲ ಸ್ಕೇಟರ್ ಅನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅನಘಾ ಈವರೆಗೆ ಜಿಲ್ಲಾ, ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಒಟ್ಟು 22 ಚಿನ್ನದ ಪದಕ,9 ಬೆಳ್ಳಿ ಹಾಗೂ 6 ಕಂಚಿನ‌ ಪದಕ ಪಡೆದಿದ್ದಾರೆ.

ಮಂಗಳೂರಿನ‌ ಕದ್ರಿ ಹಿಲ್ಸ್ ನಿವಾಸಿ, ಅನಘಾ ಡೆಂಟಲ್ ಸ್ಪೆಷಾಲಿಟಿ ಕ್ಲಿನಿಕ್ ನ ವೈದ್ಯರಾದ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ದಂಪತಿಯ ಪುತ್ರಿ. ಬಿಜೈ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ ನ ನಾಲ್ಕನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಅನಘಾ ಅವರ ಕ್ರೀಡಾ ಸಾಧನೆಯನ್ನು ಪರಿಗಣಿಸಿ ಜ. 26 ರಂದು ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ದೆಹಲಿಯಲ್ಲಿ ಐಸ್ ಸ್ಕೇಟಿಂಗ್ ನ ಭಾರತ ತಂಡದ ಕೋಚ್ ಅವಧೂತ್ ಥಾವಡೇ ಅವರಿಂದ ಐಸ್ ಸ್ಕೇಟಿಂಗ್ ತರಬೇತಿ ಪಡೆಯುತ್ತಿರುವ ಅನಘಾ, ಮಂಗಳೂರಿನಲ್ಲಿ ತರಬೇತುದಾರರಾದ ಮೋಹನ್ ದಾಸ್.ಕೆ ಹಾಗೂ ಜಯರಾಜ್ ಕುಕ್ಯಾನ್ ಅವರಿಂದ ರೋಲರ್ ಸ್ಕೇಟಿಂಗ್ ತರಬೇತಿ ಪಡೆಯುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X