Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶ ಕಟ್ಟುವ ಜವಾಬ್ದಾರಿ ಯುವ ಜನರ ಮೇಲಿದೆ...

ದೇಶ ಕಟ್ಟುವ ಜವಾಬ್ದಾರಿ ಯುವ ಜನರ ಮೇಲಿದೆ : ಕೆ.ಜಿ.ಬೋಪಯ್ಯ

​ಕೌಶಲ್ಯ ತರಬೇತಿ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ10 Feb 2020 12:06 AM IST
share
ದೇಶ ಕಟ್ಟುವ ಜವಾಬ್ದಾರಿ ಯುವ ಜನರ ಮೇಲಿದೆ : ಕೆ.ಜಿ.ಬೋಪಯ್ಯ

ಮಡಿಕೇರಿ ಫೆ.9 : ಯುವ ಜನರಿಗಾಗಿ ಸರ್ಕಾರ ಯುವ ಕೌಶಲ್ಯ ಕಾರ್ಯಕ್ರಮ ಜಾರಿಗೊಳಿಸಿದ್ದು, ಇದರ ಪ್ರಯೋಜನ ಪಡೆಯುವಂತಾಗಬೇಕು ಎಂದು ಶಾಸಕ ಕೆ.ಜಿ.ಬೋಪಯ್ಯ ಅವರು ಹೇಳಿದರು.  

ಆಂತರಿಕ ಗುಣಮಟ್ಟ ಭರವಸಾ ಕೋಶ, ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಉದ್ಯೋಗ ಮಾಹಿತಿ ಹಾಗೂ ಯುವ ಸಬಲೀಕರಣ ಕೇಂದ್ರ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಇವರ ಸಹಯೋಗದೊಂದಿಗೆ ‘ಯುವಕೌಶಲ್ಯ-ಮೃದು ಕೌಶಲ್ಯ ತರಬೇತಿ ಮತ್ತು ಮೌಲ್ಯಮಾಪನ ಕುರಿತು ವಿರಾಜಪೇಟೆ ಸ.ಪ್ರ.ದ ಕಾಲೇಜಿನ ವಾಣಿಜ್ಯ ವಿಭಾಗದ ಧ್ವನಿ-ದೃಶ್ಯ ಕೊಠಡಿಯಲ್ಲಿ ನಡೆದ ವಿಶೇಷ ಕಾರ್ಯಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.    

ದೇಶ ಕಟ್ಟುವ ದೊಡ್ಡ ಜವಾಬ್ದಾರಿ ಯುವ ಜನರಲ್ಲಿದೆ. ಆ ನಿಟ್ಟಿನಲ್ಲಿ ಮುನ್ನಡೆಯಬೇಕು. ವಿದ್ಯಾರ್ಥಿಗಳು ಮುಂದೆ ಬರುವ ಎಲ್ಲಾ ಸವಾಲುಗಳನ್ನು ಎದುರಿಸಲು ಶಕ್ತರಾಗಬೇಕು. ವಿದ್ಯಾರ್ಥಿಗಳಲ್ಲಿ ವಿಭಿನ್ನ ಪ್ರತಿಭೆ ಇರುತ್ತದೆ. ಆ ಪ್ರತಿಭೆಗೆ ಪೂರಕವಾಗಿ ವ್ಯವಸ್ಥೆಗಳನ್ನು ಮಾಡಬೇಕು ಎಂದರು.  

ಯುವ ಶಕ್ತಿಯ ಸದ್ಭಳಕೆಯಾಗಬೇಕು. ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಪ್ರತಿಭೆಯನ್ನು ಸದುಪಯೋಗ ಮಾಡಿಕೊಂಡು ದೇಶವನ್ನು ಅಭಿವೃದ್ಧಿಪಡಿಸಬೇಕು. ಎಲ್ಲಾ ದೇಶಗಳಿಗೆ ಭಾರತವನ್ನು ಮಾದರಿಯಾನ್ನಾಗಿಸಬೇಕು ಎಂದು ಅವರು ಹೇಳಿದರು.

ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಸಿ.ಜಗನ್ನಾಥ ಅವರು ಮಾತನಾಡಿ ವಿದ್ಯಾರ್ಥಿಗಳು ಕೇವಲ ವಿದ್ಯೆ ಪಡೆಯುವುದರ ಜೊತೆಗೆ ಮೃದು ಕೌಶಲ್ಯ ಪಡೆಯಬೇಕು. ಶೈಕ್ಷಣಿಕ ವಿದ್ಯಾರ್ಹತೆಗೆ ಅನುಗುಣವಾಗಿ ಮೃದು ಕೌಶಲ್ಯ ಅಳವಡಿಸಿಕೊಳ್ಳುಬೇಕು. ಎಲ್ಲರೂ ಸ್ವಯಂ ಉದ್ಯೋಗ ಪಡೆಯುವ ನಿಟ್ಟಿನಲ್ಲಿ ಯುವಕೌಶಲ್ಯ ತರಬೇತಿ ನೀಡಲಾಗುತ್ತದೆ ಎಂದರು. 

ಭಾರತ ಸರ್ಕಾರದ ಸ್ಕಿಲ್ ಇಂಡಿಯಾ ದಂತೆ ರಾಜ್ಯ ಸರ್ಕಾರವು ಕೌಶಲ್ಯ ಕರ್ನಾಟಕ ಎಂಬ ಯೋಜನೆ ಮುಖಾಂತರ ರಾಜ್ಯದಲ್ಲಿರುವ ಎಲ್ಲಾ ಉದ್ಯೋಗಾಕಾಂಕ್ಷಿಗಳಲ್ಲಿ ಕೌಶಲ್ಯ ತುಂಬುವ ಕೆಲಸವನ್ನು ಮಾಡುತ್ತಿದೆ ಎಂದು ಅವರು ಹೇಳಿದರು.

ಪೊನ್ನಂಪೇಟೆ ಐ.ಟಿ.ಐ ಕಾಲೇಜಿನ ಪ್ರಾಂಶುಪಾಲರಾದ ಚೆರಿಯನ್ ಅವರು ಮಾತನಾಡಿ ಪ್ರತಿಯೋಬ್ಬ ಮನುಷ್ಯನಲ್ಲಿ ಒಂದಲ್ಲ ಒಂದು ರೀತಿಯ ಕೌಶಲ್ಯ ಇರುತ್ತದೆ. ವಿದ್ಯಾಭ್ಯಾಸ, ಸಂವಹನ ಕೌಶಲ್ಯ, ಗಣಕಯಂತ್ರ ಜ್ಞಾನವಿರಬಹುದು. ಸಂದರ್ಶನ ಎದುರಿಸುವ ಅಂಜಿಕೆ, ಸಂವಹನದ ತೊಂದರೆ ಇರಬಹುದು ಇದನ್ನು ಕೌಶಲ್ಯ ಪಡೆಯುವುದರ ಮೂಲಕ ಬಲಹೀನತೆಯನ್ನು ದೂರ ಮಾಡಬಹುದು ಎಂದರು. 

ಸಂದರ್ಶನಕ್ಕೆ ಹೋದಾಗ ಮೃದು ಕೌಶಲ್ಯವನ್ನು ಕೇಳುತ್ತಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಯಲ್ಲಿ ನೋಂದಾಯಿಸಿ ಮೃದು ಕೌಶಲ್ಯ ಅಥವಾ ಅಲ್ಪಾವಧಿ ಕೋರ್ಸ್‍ಗಳಲ್ಲಿ ಕೌಶಲ್ಯವನ್ನು ಪಡೆಯಬಹುದು. ನಿಮ್ಮ ವಿದ್ಯಾಭ್ಯಾಸಕ್ಕೆ ಪೂರಕವಾದ ಕೌಶಲ್ಯವನ್ನು ಪಡೆಯಿರಿ ಎಂದು ಅವರು ಹೇಳಿದರು.

ವಿರಾಜಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎ.ಎಂ.ಶ್ರೀಧರ್, ವಿರಾಜಪೇಟೆ ಸ.ಪ್ರ.ದ ಕಾಲೇಜಿನ ಪ್ರಾಂಶುಪಾಲರಾದ ಟಿ.ಕೆ.ಬೋಪಯ್ಯ, ನಿರ್ವಹಣಾ ಶಾಸ್ತ್ರದ ಮುಖ್ಯಸ್ಥರಾದ ಮಂಜುನಾಥ್, ಆಡಳಿತ ವರ್ಗ, ಬೋಧಕರು ಮತ್ತು ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಸಿ.ಜಗನ್ನಾಥ ಅವರು ಸ್ವಾಗತಿಸಿದರು. ವಾಣಿಜ್ಯ ಶಾಸ್ತ್ರದ ಉಪನ್ಯಾಸಕರಾದ ಗೀತಾ ನಾಯ್ಡು ಅವರು ನಿರೂಪಿಸಿದರು. ಆಂಗ್ಲ ಉಪನ್ಯಾಸಕರಾದ ನಾಗರಾಜ್ ಮೂರ್ತಿ ಅವರು ವಂದಿಸಿದರು.  ಕನ್ನಡ ಉಪನ್ಯಾಸಕರಾದ ಧರ್ಮಶೀಲ ಅವರು ಪ್ರಾರ್ಥಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X