Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಲ್ಲರಕೋಡಿಯಲ್ಲಿ ಕಲ್ಲು ಕೋರೆಗೆ ಸ್ಥಳೀಯರ...

ಕಲ್ಲರಕೋಡಿಯಲ್ಲಿ ಕಲ್ಲು ಕೋರೆಗೆ ಸ್ಥಳೀಯರ ವಿರೋಧ: ಕಾಮಗಾರಿ ಸ್ಥಗಿತಕ್ಕೆ ಒತ್ತಾಯಿಸಿ ಪಂಚಾಯಿತಿಗೆ ಮುತ್ತಿಗೆ

ವಾರ್ತಾಭಾರತಿವಾರ್ತಾಭಾರತಿ10 Feb 2020 11:56 PM IST
share
ಕಲ್ಲರಕೋಡಿಯಲ್ಲಿ ಕಲ್ಲು ಕೋರೆಗೆ ಸ್ಥಳೀಯರ ವಿರೋಧ: ಕಾಮಗಾರಿ ಸ್ಥಗಿತಕ್ಕೆ ಒತ್ತಾಯಿಸಿ ಪಂಚಾಯಿತಿಗೆ ಮುತ್ತಿಗೆ

ಕೊಣಾಜೆ:  ನರಿಂಗಾನ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲರಕೋಡಿ ಬಳಿ ಸರಕಾರಿ ಜಮೀನಿನಲ್ಲಿ ಅಕ್ರಮವಾಗಿ ಕಲ್ಲು ಕೋರೆ ಕಾಮಗಾರಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ನರಿಂಗಾನ ಗ್ರಾ.ಪಂ.ಗೆ  ಸೋಮವಾರ ಮುತ್ತಿಗೆ ಹಾಕಿ ಕೂಡಲೇ ಕಾಮಗಾರಿಗೆ ತಡೆಯುವಂತೆ ಮನವಿ ಮಾಡಿದರು.

ನರಿಂಗಾನ ಗ್ರಾಮದ ಕಲ್ಲರಕೋಡಿಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಒಂದು ಎಕರೆ ಜಾಗವನ್ನು ಕೋರೆಗೆ ಲೀಸ್‍ಗೆ  ನೀಡಿತ್ತು. ಇದರ ಲೀಸ್‍ನ ಅವಧಿ ಮುಗಿದಿದ್ದರೂ ಇಲ್ಲಿ ಕೋರೆ ಕಾಮಗಾರಿ ನಿರಂತರ ನಡೆಯುತ್ತಿತ್ತು ಎನ್ನಲಾಗಿದೆ.  ಈ ವಿಷಯ ಸ್ಥಳೀಯರ ಗಮನಕ್ಕೆ ಬಂದಿದ್ದು, ಬಳಿಕ ಅವರು ಸೋಮವಾರ ಪಂಚಾಯಿತಿಗೆ ಮುತ್ತಿಗೆ ಹಾಕಿ ತೀವ್ರ ಆಕ್ರೋಶ ವ್ಯಕ್ತಪಡಿಸಿ ಕೋರೆಗೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದರು.

ಆರಂಭದಲ್ಲಿ ಗ್ರಾಮಸ್ಥರು ಪಂಚಾಯಿತಿಗೆ ಮುತ್ತಿಗೆ ಹಾಕಿದ ಸಂದರ್ಭ ನರಿಂಗಾನ ಪಂಚಾಯಿತಿಯಲ್ಲಿ ಗ್ರಾಮಕರಣಿಕರು ಇರಲಿಲ್ಲ. ಅವರನ್ನು ಕರೆಸಿ ಸರ್ವೆ ಮಾಡಬೇಕು ಎಂದು ನಾಗರಿಕರ ಒತ್ತಾಯ ತೀವ್ರಗೊಂಡ ಹಿನ್ನೆಲೆಯಲ್ಲಿ  ಪಂಚಾಯಿತಿ ಅಧ್ಯಕ್ಷ  ಇಸ್ಮಾಯಿಲ್ ಅವರು ಗ್ರಾಮಕರಣಿಕರಿಗೆ ಮಾಹಿತಿ ನೀಡಿ ಅವರನ್ನು ಕರೆಸಿದರು. ಬಳಿಕ ಘಟನೆ ನಡೆದ ಸ್ಥಳಕ್ಕೆ ಅಧ್ಯಕ್ಷ ಇಸ್ಮಾಯಿಲ್, ಗ್ರಾಮಕರಣಿಕ ಧರ್ಮರಾಜ್, ಪಿಡಿಒ ರಜನಿ  ಭೇಟಿ ನೀಡಿ ಪರಿಶೀಲನೆ  ನಡೆಸಿದರು. ಬಳಿಕ ಕೋರೆಯ ಮಾಲಕ ವಿಶ್ವ ಕಟೀಲ್ ರಿಗೆ ಗ್ರಾಮಕರಣಿಕ ಧರ್ಮರಾಜ್  ಕರೆ ಮಾಡಿ ದಾಖಲೆ ಒದಗಿಸುವಂತೆ ಸೂಚಿಸಿದ್ದಾರೆ. ಅಲ್ಲದೇ ಈ ಕೋರೆಯಿಂದ ಜನರಿಗೆ ಆಗುವ ತೊಂದರೆಯ ಬಗ್ಗೆ ಆರ್ ಎನ್ ಐ ಮತ್ತು ತಹಶೀಲ್ದಾರ್ ಅವರಿಗೂ ಮಾಹಿತಿ ನೀಡಿದರು. ಈ ಬಗ್ಗೆ ತನಿಖೆ ನಡೆಸಿ ಎರಡು ದಿನಗಳೊಳಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ.

ಮೈದಾನದ ಸ್ಥಳ ?
ಕಲ್ಲರಕೋಡಿಯಲ್ಲಿರುವ ಶಾಲೆಯ ಬಳಿ ಸರಕಾರಿ ಮೈದಾನ ಇಲ್ಲ. ಇಲ್ಲಿಗೆ ಸೂಕ್ತ ಮೈದಾನ ವ್ಯವಸ್ಥೆ ಮಾಡಿ ಕೊಡಬೇಕೆಂದು ಪಂಚಾಯಿತಿಗೆ ಸ್ಥಳೀಯರು ಮನವಿ ಅರ್ಪಿಸಿದ್ದರು.ಅವರ ಮನವಿ ಮೇರೆಗೆ 2014ರಲ್ಲಿ ಐದು ಎಕರೆ ಸ್ಥಳ  ಮಂಜೂರು ಮಾಡಲಾಗಿತ್ತು. ಈ ಕಾರಣದಿಂದ ಸರ್ವೇ ಕೂಡಾ ಮಾಡಲಾಗಿತ್ತು. ಗಡಿ ಗುರುತು ಸಿಗದ ಕಾರಣ ಪೂರ್ಣವಾಗಿರಲಿಲ್ಲ.  ಇದೀಗ ಕಲ್ಲಿನ ಕೋರೆ ನಡೆಸಿದ ಜಾಗ ಮೈದಾನಕ್ಕೆ ಸೇರುವ ಸ್ಥಳ ಎನ್ನುವುದು ಸ್ಥಳೀಯರ ಆರೋಪ. ಈ ಕಾರಣದಿಂದ ಕೋರೆಯ ವಿರುದ್ಧ ಧ್ವನಿ ಎತ್ತಲಾಗಿದೆ ಎಂದು ತಿಳಿದುಬಂದಿದೆ.

ಸದ್ಯಕ್ಕೆ ಕಲ್ಲಿನ ಕೋರೆ ಸ್ಥಗಿತಗೊಳಿಸಲಾಗುವುದು. ಲೀಸ್‍ಗೆ ನೀಡಿದ ಜಾಗ ಯಾವುದು ಎಂದು ಪರಿಶೀಲನೆ ಮಾಡಿ ನೋಡುತ್ತೇವೆ. ಇದಕ್ಕಾಗಿ ಸರ್ವೇ ಕೂಡಾ ಮಾಡಿಸಲಾಗುವುದು. ಅವರನ್ನು ದಾಖಲೆ ಸಹಿತ ಕಚೇರಿಗೆ ಬರಲು ಸೂಚಿಸಿದ್ದೇನೆ. ಅಕ್ರಮ ಗಣಿಗಾರಿಕೆ ಆಗಿದ್ದಲ್ಲಿ ಅದಕ್ಕೆ ಸೂಕ್ತವಾದ ಕ್ರಮ ಕೈಗೊಳ್ಳಲಾಗುವುದು.

- ಧರ್ಮರಾಜ್, ಗ್ರಾಮಕರಣಿಕ, ನರಿಂಗಾನ ಗ್ರಾ.ಪಂ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X