ಫೆ.15ರಂದು ಸಾರ್ವಜನಿಕ ಜನಸಂಪರ್ಕ ಸಭೆ
ಉಡುಪಿ, ಫೆ.11: ಕಾಪು ವಿಧಾನಸಭಾ ಕ್ಷೇತ್ರದ ಉಡುಪಿ ತಾಲೂಕಿನ ಪೆರ್ಡೂರು, ಕುಕ್ಕೇಹಳ್ಳಿ, ಬೈರಂಪಳ್ಳಿ, ಬೊಮ್ಮರಬೆಟ್ಟು, ಆತ್ರಾಡಿ, ಅಂಜಾರು, 82 ಕುದಿ ಗ್ರಾಮಗಳಿಗೆ ಸಂಬಂಧಪಟ್ಟಂತೆ ಕಂದಾಯ ಅದಾಲತ್ ಹಾಗೂ ಸಾರ್ವಜನಿಕ ಜನಸಂಪರ್ಕ ಸಭೆಯು ಫೆ.15ರಂದು ಬೆಳಗ್ಗೆ 11 ಗಂಟೆಗೆ ಪೆರ್ಡೂರು ಸುಬ್ರಾಯ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ.
ಈ ಸಭೆಯಲ್ಲಿ ಎಲ್ಲಾ ಇಲಾಖಾ ಮುಖ್ಯಸ್ಥರು, ಜಿಲ್ಲಾಧಿಕಾರಿಗಳು, ಕುಂದಾಪುರ ಸಹಾಯಕ ಕಮೀಷನರ್, ಕಾಪು ಶಾಸಕರು, ಎಲ್ಲಾ ಜನಪ್ರತಿ ನಿಧಿಗಳು ಮತ್ತು ಅಧಿಕಾರಿ ವರ್ಗದವರು ಉಪಸ್ಥಿತರಿದ್ದು, ಸಾರ್ವಜನಿಕರು ತಮ್ಮ ಅಹವಾಲುಗಳೊಂದಿಗೆ ಸಭೆಗೆ ಹಾಜರಾಗಬೇಕು ಎಂದು ಉಡುಪಿ ತಹಶೀಲ್ದಾರ್ ಪ್ರದೀಪ್ ಕುರುಡೇಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





