Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬರೋಡ ವಿರುದ್ಧ ಕರ್ನಾಟಕ ಆರಂಭಿಕ ಮೇಲುಗೈ

ಬರೋಡ ವಿರುದ್ಧ ಕರ್ನಾಟಕ ಆರಂಭಿಕ ಮೇಲುಗೈ

ಮಿಥುನ್,ಗೌತಮ್, ಕೃಷ್ಣ ಶಿಸ್ತುಬದ್ಧ ಬೌಲಿಂಗ್

ವಾರ್ತಾಭಾರತಿವಾರ್ತಾಭಾರತಿ12 Feb 2020 10:18 PM IST
share
ಬರೋಡ ವಿರುದ್ಧ ಕರ್ನಾಟಕ ಆರಂಭಿಕ ಮೇಲುಗೈ

ಬೆಂಗಳೂರು, ಫೆ.12: ಬೌಲರ್‌ಗಳ ಮೆರೆದಾಟಕ್ಕೆ ಸಾಕ್ಷಿಯಾದ ಬರೋಡ ವಿರುದ್ಧ ಬುಧವಾರ ಇಲ್ಲಿ ಆರಂಭವಾದ ರಣಜಿ ಟ್ರೋಫಿಯ 9ನೇ ಸುತ್ತಿನ ಪಂದ್ಯದಲ್ಲಿ ಆತಿಥೇಯ ಕರ್ನಾಟಕ 80 ರನ್ ಮುನ್ನಡೆ ಪಡೆಯಲು ಯಶಸ್ವಿಯಾಗಿದೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬುಧವಾರ ಒಂದೇ ದಿನದಲ್ಲಿ 17 ವಿಕೆಟ್‌ಗಳು ಪತನಗೊಂಡವು. ಪಿಚ್ ಬ್ಯಾಟಿಂಗ್‌ಗೆ ಪೂರಕವಾಗಿ ವರ್ತಿಸುತ್ತಿಲ್ಲ. ಮೊದಲು ಬ್ಯಾಟಿಂಗ್ ಮಾಡಿದ ಬರೋಡ ಮೊದಲ ಇನಿಂಗ್ಸ್‌ನಲ್ಲಿ 33.5 ಓವರ್‌ಗಳಲ್ಲಿ ಕೇವಲ 85 ರನ್‌ಗೆ ಆಲೌಟಾಯಿತು. ಇದಕ್ಕೆ ಉತ್ತರವಾಗಿ ಕರ್ನಾಟಕ ಕೂಡ ಬ್ಯಾಟಿಂಗ್ ವೈಫಲ್ಯಕ್ಕೆ ಒಳಗಾಗಿದ್ದು 52 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿದೆ. ವಿಕೆಟ್‌ಕೀಪರ್ ಶರತ್(ಔಟಾಗದೆ 19)ಬಾಲಂಗೋಚಿ ಮಿಥುನ್(9)ಅವರೊಂದಿಗೆ ಕ್ರೀಸ್ ಕಾಯ್ದುಕೊಂಡಿದ್ದಾರೆ. ಇನಿಂಗ್ಸ್ ಆರಂಭಿಸಿದ ಆರ್.ಸಮರ್ಥ್(11)ಹಾಗೂ ದೇವದತ್ತ ಪಡಿಕ್ಕಲ್(6)ತವರು ಮೈದಾನದಲ್ಲಿ ತಂಡಕ್ಕೆ ಉತ್ತಮ ಆರಂಭ ಒದಗಿಸಲು ವಿಫಲರಾದರು. ಕೃಷ್ಣಮೂರ್ತಿ ಸಿದ್ದಾರ್ಥ್(29,72 ಎಸೆತ)ಹಾಗೂ ನಾಯಕ ಕರುಣ್ ನಾಯರ್(47, 75 ಎಸೆತ, 5 ಬೌಂಡರಿ)3ನೇ ವಿಕೆಟ್ ಜೊತೆಯಾಟದಲ್ಲಿ 61 ರನ್ ಸೇರಿಸಿ ತಂಡವನ್ನು ಆಧರಿಸಿದರು.

ಈ ಜೋಡಿಯನ್ನು ಬರೋಡದ ಭಾರ್ಗವ ಭಟ್(2-67)ಬೇರ್ಪಡಿಸಿದರು. ಸಿದ್ದಾರ್ಥ್ 29 ರನ್ ಗಳಿಸಿ ಭಟ್‌ಗೆ ವಿಕೆಟ್ ಒಪ್ಪಿಸಿದರು. ಸಿದ್ದಾರ್ಥ್ ಔಟಾದ ಬೆನ್ನಿಗೆ ನಾಯಕ ಕರುಣ್ ಕೂಡ ವಿಕೆಟ್ ಒಪ್ಪಿಸಿದರು. ನಾಯಕನ ನಿರ್ಗಮನದ ಬಳಿಕ ಬಂದ ಪವನ್ ದೇಶಪಾಂಡೆ 15 ರನ್ ಗಳಿಸಲಷ್ಟೇ ಶಕ್ತರಾದರು. ಶ್ರೇಯಸ್ ಗೋಪಾಲ್ ಸೊನ್ನೆ ಸುತ್ತಿದರು. ಆಗ ಕರ್ನಾಟಕದ ಸ್ಕೋರ್ 110ಕ್ಕೆ6.

 ಕೃಷ್ಣಪ್ಪ ಗೌತಮ್(27) ಹಾಗೂ ಶರತ್ 7ನೇ ವಿಕೆಟ್‌ಗೆ 32 ರನ್ ಸೇರಿಸಿ ಇನಿಂಗ್ಸ್ ರಿಪೇರಿಗೆ ಯತ್ನಿಸಿದರು. ಸೋಪರಿಯಾ(3-40)ಗೌತಮ್‌ಗೆ ಪೆವಿಲಿಯನ್ ಹಾದಿ ತೋರಿಸಿದರು. ಸೋಪರಿಯಾಗೆ ಸಾಥ್ ನೀಡಿದ ಭಟ್ ಹಾಗೂ ಅಭಿಮನ್ಯು ರಾಜ್‌ಪೂತ್(2-17)ತಲಾ ಎರಡು ವಿಕೆಟ್ ಪಡೆದರು. ಇದಕ್ಕೂ ಮೊದಲು ಟಾಸ್ ಜಯಿಸಿದ ಕರ್ನಾಟಕದ ನಾಯಕ ನಾಯರ್ ಬರೋಡವನ್ನು ಬ್ಯಾಟಿಂಗ್‌ಗೆ ಇಳಿಸಿದರು. ಕರ್ನಾಟಕದ ಶಿಸ್ತುಬದ್ದ ಬೌಲಿಂಗ್‌ಗೆ ತತ್ತರಿಸಿದ ಬರೋಡ ಕೇವಲ 85 ರನ್‌ಗೆ ಮೊದಲ ಇನಿಂಗ್ಸ್ ಮುಗಿಸಿತು. ಬರೋಡದ ಪರ ಆರಂಭಿಕ ಆಟಗಾರ ಅಹ್ಮದ್‌ನೂರ್ ಪಠಾಣ್ (45, 83 ಎಸೆತ, 8 ಬೌಂಡರಿ)ಏಕಾಂಗಿ ಹೋರಾಟ ನೀಡಿದರು. ದೀಪಕ್ ಹೂಡ(20) ಎರಡಂಕೆಯ ಸ್ಕೋರ್ ಗಳಿಸಿದರು. ನಾಯಕ ಕೃನಾಲ್ ಪಾಂಡ್ಯ ಸಹಿತ ಐವರು ಬ್ಯಾಟ್ಸ್ ಮನ್‌ಗಳು ರನ್ ಖಾತೆ ತೆರೆಯಲು ವಿಫಲರಾದರು.

ಕರ್ನಾಟಕದ ಬೌಲಿಂಗ್ ವಿಭಾಗದಲ್ಲಿ ಅಭಿಮನ್ಯು ಮಿಥುನ್(3-26, ಕೆ.ಗೌತಮ್(3-25)ತಲಾ ಮೂರು ವಿಕೆಟ್ ಪಡೆದರು. ದೀರ್ಘ ಸಮಯದ ಬಳಿಕ ತಂಡಕ್ಕೆ ವಾಪಸಾಗಿರುವ ಪ್ರಸಿದ್ಧ ಕೃಷ್ಣ ಕೇವಲ 7 ರನ್ ನೀಡಿ 2 ವಿಕೆಟ್ ಪಡೆದು ಗಮನ ಸೆಳೆದರು. ಗೋಪಾಲ್ 5 ಎಸೆತಗಳಲ್ಲಿ 4 ರನ್ ನೀಡಿ 1 ವಿಕೆಟ್ ಪಡೆದಿದ್ದಾರೆ. ‘‘ನಾವು ಇನ್ನೂ 30-40 ರನ್ ಸೇರಿಸಿದರೆ, ನಮ್ಮ ಮುನ್ನಡೆ 100ರಿಂದ 120ಕ್ಕೆ ಏರಲಿದೆ. ಹೊಸ ಚೆಂಡಿನಲ್ಲಿ ಆರಂಭದಲ್ಲೇ ವಿಕೆಟ್ ಪಡೆದರೆ ಬರೋಡ ಒತ್ತಡಕ್ಕೆ ಸಿಲುಕಲಿದೆ. ಪಂದ್ಯ ನಮ್ಮ ಕೈಯ್ಯಲಿದೆ’’ ಎಂದು ನಾಲ್ಕು ಎಸೆತಗಳಲ್ಲಿ ಮೂರು ವಿಕೆಟ್ ಉರುಳಿಸಿದ ಮಿಥುನ್ ಪ್ರತಿಕ್ರಿಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X