Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಯುಎಇ ಕ್ರಿಕೆಟ್ ನಿರ್ದೇಶಕರಾಗಿ ಭಾರತದ...

ಯುಎಇ ಕ್ರಿಕೆಟ್ ನಿರ್ದೇಶಕರಾಗಿ ಭಾರತದ ಮಾಜಿ ಆಲ್‌ರೌಂಡರ್ ರಾಬಿನ್ ಸಿಂಗ್

ವಾರ್ತಾಭಾರತಿವಾರ್ತಾಭಾರತಿ12 Feb 2020 10:42 PM IST
share
ಯುಎಇ ಕ್ರಿಕೆಟ್ ನಿರ್ದೇಶಕರಾಗಿ ಭಾರತದ ಮಾಜಿ ಆಲ್‌ರೌಂಡರ್ ರಾಬಿನ್ ಸಿಂಗ್

ದುಬೈ, ಫೆ.12: ಭಾರತದ ಮಾಜಿ ಆಲ್‌ರೌಂಡರ್ ರಾಬಿನ್ ಸಿಂಗ್ ಯುನೈಟೆಡ್ ಅರಬ್ ಎಮಿರೇಟ್ಸ್‌ನ(ಯುಎಇ)ಕ್ರಿಕೆಟ್ ನಿರ್ದೇಶಕರಾಗಿ ಬುಧವಾರ ನೇಮಕಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

ಮುಖ್ಯ ಕೋಚ್ ಡೌಗಿ ಬ್ರೌನ್ ಉಚ್ಚಾಟನೆಯ ಬಳಿಕ 56ರ ಹರೆಯದ ಸಿಂಗ್‌ರನ್ನು ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದೆ.

ಕಳೆದ ವರ್ಷ ಅಪ್ಪಳಿಸಿದ ಫಿಕ್ಸಿಂಗ್ ಹಗರಣದಿಂದ ಯುಎಇ ರಾಷ್ಟ್ರೀಯ ಕ್ರಿಕೆಟ್ ತಂಡ ಚೇತರಿಸಿಕೊಳ್ಳುತ್ತಿರುವ ಸಮಯದಲ್ಲಿ ರಾಬಿನ್ ಸಿಂಗ್ ಅಧಿಕಾರವಹಿಸಿಕೊಳ್ಳುತ್ತಿದ್ದಾರೆ. ಫಿಕ್ಸಿಂಗ್ ಹಗರಣದಲ್ಲಿ ನಾಯಕ ಮುಹಮ್ಮದ್ ನವೀದ್ ಸಹಿತ ಕೆಲವು ಸೀನಿಯರ್ ಆಟಗಾರರನ್ನು ಅಮಾನತುಗೊಳಿಸಲಾಗಿತ್ತು. ಆಯ್ಕೆ ಸಮಿತಿಯನ್ನು ವಿಸರ್ಜಿಸಲಾಗಿತ್ತು.

ಆಯ್ಕೆ ಸಮಿತಿ ಇಲ್ಲದೆ ಕಳೆದ ವರ್ಷದ ಡಿಸೆಂಬರ್‌ನಲ್ಲಿ ಬ್ರೌನ್ ಅವರು ಸ್ಕಾಟ್ಲೆಂಡ್ ಹಾಗೂ ಅಮೆರಿಕ ವಿರುದ್ಧ ಸ್ವದೇಶದಲ್ಲಿ ನಡೆದಿದ್ದ ಸರಣಿ, ಒಮಾನ್ ಹಾಗೂ ನಮೀಬಿಯಾ ವಿರುದ್ಧ ಮಸ್ಕತ್‌ನಲ್ಲಿ ಜನವರಿಯಲ್ಲಿ ನಡೆದ ಎರಡು ವಿಶ್ವಕಪ್ ಲೀಗ್ ಪಂದ್ಯಗಳಿಗೆ ತಂಡವನ್ನು ಆಯ್ಕೆ ಮಾಡಿದ್ದರು. ಸಿಂಗ್ 1989 ಹಾಗೂ 2001ರ ನಡುವೆ ಒಂದು ಟೆಸ್ಟ್ ಹಾಗೂ 136 ಏಕದಿನ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ಕಳೆದ ಕೆಲವು ವರ್ಷಗಳಿಂದ ಕೋಚಿಂಗ್‌ನಲ್ಲಿ ಖ್ಯಾತಿ ಪಡೆದಿದ್ದರು.

ಐಪಿಎಲ್‌ನ ಅತ್ಯಂತ ಯಶಸ್ವಿ ಫ್ರಾಂಚೈಸಿ ಮುಂಬೈ ಇಂಡಿಯನ್ಸ್‌ನೊಂದಿಗೆ ಕಾರ್ಯನಿರ್ವಹಿಸಿದ್ದರು. 2013ರಿಂದ ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಬಾರ್ಬಡೊಸ್, ಟಿ-10 ಲೀಗ್‌ನಲ್ಲಿ ಟಿ-10 ಫ್ರಾಂಚೈಸಿಗಳಲ್ಲಿ ಕೆಲಸ ಮಾಡಿದ್ದರು.

ಟ್ರಿನಿಡಾಡ್‌ನ ಪ್ರಿನ್ಸ್ ಟೌನ್‌ನಲ್ಲಿ ಜನಿಸಿರುವ ರಾಬಿನ್ ಸಿಂಗ್ ಯುಎಇನಲ್ಲಿ ಕೋಚಿಂಗ್ ಕ್ಲಿನಿಕ್‌ವೊಂದನ್ನು ನಡೆಸುತ್ತಿದ್ದಾರೆ. ಉತ್ತಮ ಫೀಲ್ಡರ್ ಹಾಗೂ ಉಪಯುಕ್ತ ಬ್ಯಾಟಿಂಗ್ ಆಲ್‌ರೌಂಡರ್ ಆಗಿದ್ದ ಸಿಂಗ್ ಏಕದಿನ ಅಂತರ್‌ರಾಷ್ಟ್ರೀಯ ಕ್ರಿಕೆಟ್‌ನಲ್ಲಿ 25.95ರ ಸರಾಸರಿಯಲ್ಲಿ 2,236 ರನ್ ಗಳಿಸಿದ್ದು, 100 ಗರಿಷ್ಠ ವೈಯಕ್ತಿಕ ಸ್ಕೋರಾಗಿದೆ. ಸಿಂಗ್ 50 ಓವರ್‌ಗಳ ಪಂದ್ಯದಲ್ಲಿ 69 ವಿಕೆಟ್‌ಗಳನ್ನು ಪಡೆದಿದ್ದು, 22ಕ್ಕೆ 5 ವಿಕೆಟ್ ಶ್ರೇಷ್ಠ ನಿರ್ವಹಣೆಯಾಗಿದೆ. ಸಿಂಗ್ ಅವರ ಪೂರ್ವಾಧಿಕಾರಿ ಬ್ರೌನ್ ಮೂರು ವರ್ಷಗಳ ಕಾಲ ಯುಎಇ ಕ್ರಿಕೆಟ್ ತಂಡದ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X