Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹಣ ದುರುಪಯೋಗ ಆರೋಪ: ಬಿಬಿಎಂಪಿಯ ಮೂವರು...

ಹಣ ದುರುಪಯೋಗ ಆರೋಪ: ಬಿಬಿಎಂಪಿಯ ಮೂವರು ಅಧಿಕಾರಿಗಳು ಅಮಾನತು

ವಾರ್ತಾಭಾರತಿವಾರ್ತಾಭಾರತಿ13 Feb 2020 6:59 PM IST
share
ಹಣ ದುರುಪಯೋಗ ಆರೋಪ: ಬಿಬಿಎಂಪಿಯ ಮೂವರು ಅಧಿಕಾರಿಗಳು ಅಮಾನತು

ಬೆಂಗಳೂರು, ಫೆ.13: ಬಿಬಿಎಂಪಿಯ ಕಾಮಗಾರಿ ಬಿಲ್‌ಗಳ ಪಾವತಿ ಸಂಬಂಧಿಸಿದಂತೆ ಬಿಬಿಎಂಪಿ ಆಯುಕ್ತರನ್ನೇ ದಿಕ್ಕು ತಪ್ಪಿಸಿ ಯೋಜಿತವಾಗಿ ಹಣವನ್ನು ನಕಲಿ ಖಾತೆಗೆ ವರ್ಗಾವಣೆ ಮಾಡಿಕೊಟ್ಟ ಆರೋಪದ ಮೇಲೆ ಬಿಬಿಎಂಪಿಯ ಮೂವರು ಅಧಿಕಾರಿಗಳನ್ನು ಅಮಾನತು ಮಾಡಿ, ಅವರ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ.

ಬಿಬಿಎಂಪಿಯ ಮುಖ್ಯ ಲೆಕ್ಕಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಲೆಕ್ಕ ಅಧಿಕಾರಿ ಅನಿತಾ, ಲೆಕ್ಕ ಅಧೀಕ್ಷಕ ರಾಮಮೂರ್ತಿ ಹಾಗೂ ದ್ವಿತೀಯ ದರ್ಜೆ ಸಹಾಯಕ ರಾಘವೇಂದ್ರ ಅವರನ್ನು ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್ ಅವರು ಅಮಾನತು ಮಾಡಿದ್ದಾರೆ. ಜೊತೆಗೆ, ಈ ಮೂವರ ಮೇಲೆ ಎಫ್‌ಐಆರ್ ದಾಖಲಿಸಿಕೊಂಡಿರುವ ಹಲಸೂರು ಗೇಟ್ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಪ್ರಕರಣದ ಹಿನ್ನೆಲೆ: ಬಿಬಿಎಂಪಿಯಲ್ಲಿ 4 ಕೋಟಿ ರೂ. ಕಾಮಗಾರಿಯ ಟೆಂಡರ್ ಪಡೆದಿದ್ದ ಚಂದ್ರಪ್ಪ ಎಂಬ ಗುತ್ತಿಗೆದಾರ ಅವಧಿಯೊಳಗೆ ಕೆಲಸ ಪೂರ್ಣಗೊಳಿಸಿದ್ದಾರೆ. ಪಾಲಿಕೆಯಲ್ಲಿ ಕಾಮಗಾರಿ ಪೂರ್ಣಗೊಂಡ ನಂತರ ಸೀನಿಯಾರಿಟಿ ಆಧಾರದ ಮೇಲೆ 6 ತಿಂಗಳು ಅಥವಾ 1 ವರ್ಷಕ್ಕೆ ಬಿಲ್ ಬಿಡುಗಡೆ ಮಾಡುವ ಪದ್ಧತಿ ಇದೆ. ಹೀಗಾಗಿ ಗುತ್ತಿಗೆದಾರ ಚಂದ್ರಪ್ಪ ತನ್ನ ಸೀನಿಯಾರಿಟಿ ಬರುವವರೆಗೆ ಕಾಯುತ್ತಾ ಸುಮ್ಮನಾಗಿದ್ದರು. ನಂತರ ತನ್ನ ಸೀನಿಯಾರಿಟಿ ಹತ್ತಿರ ಬಂದಾಗ ಬಿಬಿಎಂಪಿಗೆ ಬಂದು ಬಿಲ್ ಮಾಡುವಂತೆ ಕೇಳಿಕೊಂಡಿದ್ದಾರೆ. ಆಗ ಬಿಬಿಎಂಪಿ ಮುಖ್ಯ ಲೆಕ್ಕಾಧಿಕಾರಿಗಳ ಕಚೇರಿಯ ಅಧಿಕಾರಿಗಳು ಈಗಾಗಲೇ 4 ತಿಂಗಳ ಹಿಂದಿಯೇ 4 ಕೋಟಿ ರೂ. ಹಣ ಬಿಡುಗಡೆ ಆಗಿರುವುದಾಗಿ ತಿಳಿಸಿದ್ದಾರೆ.

ನಂತರ ಗುತ್ತಿಗೆದಾರ ಚಂದ್ರಪ್ಪ ಅಧಿಕಾರಿಗಳ ಬಳಿ ಗಲಾಟೆ ಮಾಡಿ, ಪರಿಶೀಲನೆ ನಡೆಸಿದಾಗ ನಕಲಿಗಳ ಕರಾಮತ್ತು ಬೆಳಕಿಗೆ ಬಂದಿದೆ. ಚಂದ್ರಪ್ಪ ಅವರ ಹೆಸರಿನಲ್ಲಿ ನಕಲಿ ಬ್ಯಾಂಕ್ ಅಕೌಂಟ್ ತೆರೆದು, ಚಂದ್ರಪ್ಪರಂತೆಯೇ ಸಹಿ ಮಾಡಲಾಗಿದೆ. ಬಳಿಕ ಬಿಬಿಎಂಪಿ ಆಯುಕ್ತರಿಂದ ಸಹಿ ಮಾಡಿಸಿ 4 ಕೋಟಿ ರೂ. ಹಣವನ್ನು ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಖಾತೆಗೆ ಹಣ ವರ್ಗಾವಣೆಯಾದ ಕೆಲವೇ ನಿಮಿಷಗಳಲ್ಲಿ ಅಷ್ಟೂ ಹಣವನ್ನು ಡ್ರಾ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X