Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ವಶ ಪಡಿಸಿಕೊಂಡ ಮಲ್ಪೆ ಬೋಟು ದೇವಗಢ...

​ವಶ ಪಡಿಸಿಕೊಂಡ ಮಲ್ಪೆ ಬೋಟು ದೇವಗಢ ಬಂದರಿನಲ್ಲಿ

ವಾರ್ತಾಭಾರತಿವಾರ್ತಾಭಾರತಿ13 Feb 2020 8:13 PM IST
share

ಉಡುಪಿ, ಫೆ.13: ಮಲ್ಪೆಯಿಂದ ಫೆ.3ರಂದು ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ವೇಳೆ ಫೆ.11ರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಮಹಾರಾಷ್ಟ್ರ ಕೋಸ್ಟ್‌ಗಾರ್ಡ್‌ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದ ಕುಂದಾಪುರದ ಅಂಕಿತ್ ಶೆಟ್ಟಿ ಎಂಬವರಿಗೆ ಸೇರಿದ ‘ಶ್ರೀಲಕ್ಷ್ಮಿ’ (ನೊಂದಣಿ ಸಂಖ್ಯೆ ಕೆಎ03 ಎಂಎಂ3886) ಹೆಸರಿನ ಮೀನುಗಾರಿಕಾ ಬೋಟಿನಲ್ಲಿದ್ದ ಎಲ್ಲಾ ಏಳು ಮಂದಿ ಮೀನುಗಾರರು ಇದೀಗ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ದೇವಗಢ ಬಂದರಿನಲ್ಲಿ ಲಂಗರು ಹಾಕಿರುವ ಬೋಟಿನಲ್ಲಿ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.

ಶ್ರೀಲಕ್ಷ್ಮಿ ಬೋಟು ರಾಮ ಭಟ್ಕಳ ಎಂಬವರ ನೇತೃತ್ವದಲ್ಲಿ ಫೆ.3ರ ಸೋಮವಾರ ಸಂಜೆ ಆಳ ಸಮುದ್ರ ಮೀನುಗಾರಿಕೆಗೆಂದು ಮಲ್ಪೆ ಬಂದರಿ ನಿಂದ ತೆರಳಿತ್ತು. ಈ ಬೋಟಿನಲ್ಲಿ ರಾಮ ಭಟ್ಕಳ ಅಲ್ಲದೇ ಇನ್ನೂ ಆರು ಮಂದಿ ಮೀನುಗಾರರಿದ್ದರು. ಇವರೆಲ್ಲರೂ ಉತ್ತರ ಕನ್ನಡ ಜಿಲ್ಲೆಗೆ ಸೇರಿದ ಮೀನುಗಾರರಾಗಿದ್ದಾರೆ.

ಈ ಬೋಟು ಫೆ.11ರ ಮಧ್ಯರಾತ್ರಿ ಮಹಾರಾಷ್ಟ್ರದ ಮಲ್ವಾನ ಪ್ರದೇಶದಲ್ಲಿ ಮೀನುಗಾರಿಕೆ ನಡೆಸುತಿದ್ದಾಗ, ಮಹಾರಾಷ್ಟ್ರ ಕೋಸ್ಟ್‌ಗಾರ್ಡ್‌ನವರು ಶ್ರೀಲಕ್ಷ್ಮಿ ಬೋಟು ಹಾಗೂ ಅದರಲ್ಲಿದ್ದ ಏಳು ಮಂದಿಯನ್ನು ವಶಕ್ಕೆ ಪಡೆದು ದೇವಢ ಬಂದರಿಗೆ ಕರೆತಂದಿದ್ದರು. ರಾಮ ಭಟ್ಕಳ ಅಲ್ಲದೇ ಕುಮಟಾದ ಗಣಪತಿ, ಭಟ್ಕಳದ ವೆಂಕಟೇಶ, ಹೊನ್ನಾವರದ ಮಂಜು ಮಂಕಿ, ಗೋವಿಂದ ಮಂಕಿ, ಕುಮಟಾದ ವಿನಾಯಕ ಹಾಗೂ ಅಂಕೋಲಾದ ರಾಜು ಅಂಕೋಲಾ ಇದೀಗ ಕೋಸ್ಟ್‌ಗಾರ್ಡ್‌ನ ವಶದಲ್ಲಿದ್ದಾರೆ.

ರಾಜ್ಯ ಬಿಟ್ಟು ಉಳಿದ ದೋಣಿಗಳು 12 ನಾಟಿಕಲ್ ಮೈಲ್ ದೂರದಲ್ಲಿ ಮಾತ್ರ ಮೀನುಗಾರಿಕೆ ನಡೆಸಬೇಕೆಂಬ ಕಾನೂನು ಗೋವಾ ಮತ್ತು ಮಹಾರಾಷ್ಟ್ರಗಳಲ್ಲಿ ಜಾರಿಯಲ್ಲಿವೆ. ಅದರಂತೆ ಹೊರರಾಜ್ಯಗಳ ಬೋಟುಗಳು ಮೀನುಗಾರಿಕೆ ಸಂದರ್ಭದಲ್ಲಿ ಈ ಪ್ರದೇಶ ವ್ಯಾಪ್ತಿಯೊಳಗೆ ಪ್ರವೇಶಿಸಿದರೆ, ಸ್ಥಳೀಯ ಮೀನುಗಾರರು ಹಾಗೂ ಅಲ್ಲಿನ ಕೋಸ್ಟ್‌ಗಾರ್ಡ್ ಸಿಬ್ಬಂದಿಗಳು ಇಂಥ ಬೋಟುಗಳನ್ನು ವಶಕ್ಕೆ ಪಡೆದು ಮೀನುಗಾರರನ್ನು ಬಂಧಿಸುತ್ತಾರೆ.

ಇದೀಗ ಸುದ್ದಿ ತಿಳಿದ ಶ್ರೀಲಕ್ಷ್ಮಿ ಬೋಟಿನ ಮಾಲಕರಾದ ಕುಂದಾಪುರದ ಅಂಕಿತ್ ಶೆಟ್ಟಿ ಅವರು ದೇವಗಢ ತಲುಪಿದ್ದಾರೆ. ಬೋಟಿನಲ್ಲಿ ನಮ್ಮವರು ಹಿಡಿದ ಅಪಾರ ಪ್ರಮಾಣದ ಮೀನನ್ನು ಅವರು ವಶಕ್ಕೆ ತೆಗೆದುಕೊಂಡಿದ್ದಾರೆ. ತಾವು 12 ನಾಟಿಕಲ್ ಮೈಲು ಆಚೆಗೆ ಮೀನುಗಾರಿಕೆ ನಡೆಸುತಿದ್ದುದಾಗಿ ನಮ್ಮವರು ತಿಳಿಸಿದ್ದಾರೆ ಎಂದು ಅಂಕಿತ್ ನುಡಿದರು.

ತಮ್ಮ ಪ್ರದೇಶದೊಳಗೆ ಅಕ್ರಮವಾಗಿ ಪ್ರವೇಶಿಸಿ ಮೀನುಗಾರಿಕೆ ನಡೆಸಿರುವುದಕ್ಕೆ ದಂಡ ಕಟ್ಟಬೇಕೆಂದು ಅವರೀಗ ಬೇಡಿಕೆ ಇಟ್ಟಿದ್ದಾರೆ ಎಂದು ಅಂಕಿತ್ ಶೆಟ್ಟಿ ‘ವಾರ್ತಾಭಾರತಿ’ಗೆ ತಿಳಿಸಿದ್ದಾರೆ. ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು, ಮಹಾರಾಷ್ಟ್ರದ ಸಂಬಂಧಿತ ಅಧಿಕಾರಿ ಗಳೊಂದಿಗೆ ಸಂಧಾನ ನಡೆಸಿದ್ದು, ನಿರ್ಧಾರವನ್ನು ಎದುರು ನೋಡುತ್ತಿರುವುದಾಗಿ ನುಡಿದ ಅಂಕಿತ್ ಶೆಟ್ಟಿ, ನಮ್ಮೆಲ್ಲಾ ಸಿಬ್ಬಂದಿಗಳು ಬಂದರಿನಲ್ಲಿ ಲಂಗರು ಹಾಕಿರುವ ಬೋಟಿನಲ್ಲಿದ್ದಾರೆ. ಅವರಿಗೆ ಯಾವುದೇ ಸಮಸ್ಯೆಯಾಗಿಲ್ಲ ಎಂದರು.

ಮಹಾರಾಷ್ಟ್ರ ಕರಾವಳಿಯತ್ತ ಮೀನುಗಾರಿಕೆಗೆ ತೆರಳಿದ ರಾಜ್ಯದ ಮೀನುಗಾರಿಕಾ ಬೋಟುಗಳು ಈ ಹಿಂದೆ ಹಲವು ಬಾರಿ ಮಹಾರಾಷ್ಟ್ರದಲ್ಲಿ ಇದೇ ರೀತಿಯ ತೊಂದರೆಗಳಿಗೆ ಸಿಲುಕಿದ್ದವು. ಹಲವು ಸಂದರ್ಭದಲ್ಲಿ ಬೋಟಿನಲ್ಲಿದ್ದ ಹಿಡಿದ ಮೀನುಗಳು ಹಾಗೂ ಸೊತ್ತುಗಳನ್ನು ಅಲ್ಲಿನ ಮೀನುಗಾರರು ದೋಚಿ, ಹಲ್ಲೆ ನಡೆಸಿದ ಘಟನೆಗಳೂ ನಡೆದಿದ್ದವು. ಕೊನೆಗೆ ಸರಕಾರದ ಮಟ್ಟದಲ್ಲಿ ಮಾತುಕತೆಯ ಬಳಿಕ ಕೆಲವೊಮ್ಮೆ ದಂಡಕಟ್ಟಿ ಬೋಟಿನೊಂದಿಗೆ ಮರಳುತಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X