Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎನ್‌ಪಿಆರ್ ಭೀತಿಯಲ್ಲಿ ಸಮೀಕ್ಷಕರ ಮೇಲೆ...

ಎನ್‌ಪಿಆರ್ ಭೀತಿಯಲ್ಲಿ ಸಮೀಕ್ಷಕರ ಮೇಲೆ ಹಲ್ಲೆಗಳಿಂದ ಜನಗಣತಿಗೆ ತೊಂದರೆ: ಅಂಕಿಅಂಶಗಳ ಸಮಿತಿಯ ಮುಖ್ಯಸ್ಥರ ಕಳವಳ

ವಾರ್ತಾಭಾರತಿವಾರ್ತಾಭಾರತಿ13 Feb 2020 9:01 PM IST
share
ಎನ್‌ಪಿಆರ್ ಭೀತಿಯಲ್ಲಿ ಸಮೀಕ್ಷಕರ ಮೇಲೆ ಹಲ್ಲೆಗಳಿಂದ ಜನಗಣತಿಗೆ ತೊಂದರೆ: ಅಂಕಿಅಂಶಗಳ ಸಮಿತಿಯ ಮುಖ್ಯಸ್ಥರ ಕಳವಳ

ಹೊಸದಿಲ್ಲಿ,ಫೆ.13: ದೇಶದ ಕೆಲವೆಡೆಗಳಲ್ಲಿ ಕ್ಷೇತ್ರ ಸಮೀಕ್ಷಕರ ಮೇಲಿನ ಇತ್ತೀಚಿನ ಹಲ್ಲೆಗಳು ಮುಂಬರುವ ಜನಗಣತಿ ಪ್ರಕ್ರಿಯೆಯನ್ನು ತೀವ್ರ ಸಂಕಷ್ಟಕ್ಕೆ ತಳ್ಳಿವೆ ಮತ್ತು ಮನೆಗಳ ಸಮೀಕ್ಷೆ ಸಂದರ್ಭ ಸಂಗ್ರಹಿಸಲಾಗುವ ದತ್ತಾಂಶಗಳನ್ನು ದೋಷಪೂರ್ಣಗೊಳಿಸುವ ಅಪಾಯವಿದೆ ಎಂದು ಆರ್ಥಿಕ ಅಂಕಿಅಂಶಗಳ ಕುರಿತು ಸ್ಥಾಯಿ ಸಮಿತಿಯ ಅಧ್ಯಕ್ಷ ಹಾಗೂ ಭಾರತದ ಮಾಜಿ ಮುಖ್ಯ ಸಂಖ್ಯಾಶಾಸ್ತ್ರಜ್ಞ ಪ್ರಣವ್ ಸೇನ್ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ವಿವಾದಾತ್ಮಕ ಎನ್‌ಪಿಆರ್‌ಗಾಗಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂಬ ತಪ್ಪುಗ್ರಹಿಕೆಯಿಂದ ಕೆಲವು ಆರೋಗ್ಯ ಸಂಶೋಧಕರು ಮತ್ತು ಸರಕಾರಿ ಸರ್ವೆ ಅಧಿಕಾರಿಗಳ ಮೇಲೆ ಹಲ್ಲೆಗಳು ನಡೆದಿವೆ. ಎನ್‌ಪಿಆರ್ ಅಕ್ರಮ ವಲಸಿಗರನ್ನು ಗುರುತಿಸಲು ನಡೆಸಲಾಗುವ ಅಖಿಲ ಭಾರತ ಎನ್‌ಆರ್‌ಸಿಯನ್ನು ಸೃಷ್ಟಿಸಲು ಮೊದಲ ಹೆಜ್ಜೆಯಾಗಿದೆ ಎನ್ನಲಾಗಿದೆಯಾದರೂ ಸರಕಾರವು ಎನ್‌ಪಿಆರ್ ಮತ್ತು ಎನ್‌ಆರ್‌ಸಿ ನಡುವಣ ನಂಟನ್ನು ನಿರಾಕರಿಸಿದೆ. ಆದರೆ ಜನಗಣತಿ ವೆಬ್‌ಸೈಟ್‌ನಲ್ಲಿಯೇ ನಂಟೊಂದನ್ನು ಕಲ್ಪಿಸಲಾಗಿರುವುದರಿಂದ ಎನ್‌ಪಿಆರ್ ಪ್ರಕ್ರಿಯೆಯೂ ಎನ್‌ಆರ್‌ಸಿ ವಿರೋಧಿ ಪ್ರತಿಭಟನಾಕಾರರ ಗುರಿಯಾಗಿದೆ.

ಹಿಂದೆ ನ್ಯಾಷನಲ್ ಸ್ಯಾಂಪಲ್ ಸರ್ವೆಯ ಕ್ಷೇತ್ರ ಸಮೀಕ್ಷಕರ ಮೇಲೂ ಹಲ್ಲೆಗಳು ನಡೆದಿದ್ದವು. ಆದರೆ ಜನರಿಗೆ ಆ ಬಗ್ಗೆ ನಿಜ ಗೊತ್ತಾದ ಬಳಿಕ ಸಮಸ್ಯೆಯಾಗಿಲ್ಲ ಎಂದು ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿರುವ ಸೇನ್,ಎ.1ರಿಂದ ಸೆ.30ರವರೆಗೆ ನಡೆಯಲಿರುವ ಜನಗಣತಿಗೆ ಪೂರ್ವಭಾವಿಯಾಗಿ ಎನ್‌ಪಿಆರ್‌ನೊಂದಿಗೆ ಮನೆಗಳ ಪಟ್ಟಿಗಳನ್ನು ತಯಾರಿಸುವ ಪ್ರಕ್ರಿಯೆ ನಡೆಯಲಿದೆ. ಇದು ಜನಗಣತಿಯಲ್ಲಿ ಮಹತ್ವದ ಪ್ರಕ್ರಿಯೆಯಾಗಿದೆ. ಈ ಪಟ್ಟಿಗಳನ್ನು ಆಧರಿಸಿ ಜನಗಣತಿಗಾಗಿ ವಿಭಾಗಗಳನ್ನು ರೂಪಿಸಲಾಗುತ್ತದೆ. ಆದರೆ ಈ ಕಾರ್ಯ ಕೈಗೊಳ್ಳಲು ಸಮಸ್ಯೆಗಳು ಎದುರಾದರೆ ಜನಗಣತಿಯೂ ಸಂಕಷ್ಟಕ್ಕೆ ಸಿಕ್ಕಿಹಾಕಿಕೊಳ್ಳುತ್ತದೆ. ಭವಿಷ್ಯದಲ್ಲಿ ಸರಕಾರಗಳ ವಿವಿಧ ಯೋಜನೆಗಳನ್ನು ರೂಪಿಸಲು ಎಲ್ಲ ಮನೆಮನೆ ಸಮೀಕ್ಷೆಗಳು ಜನಗಣತಿ ವರದಿಯನ್ನೇ ಅವಲಂಬಿಸಿರುವುದರಿಂದ ಈ ವರದಿಯೇ ದೋಷಪೂರ್ಣವಾಗಿದ್ದರೆ ಯಾವುದೇ ಸಮೀಕ್ಷೆಯು ವಿಶ್ವಾಸಾರ್ಹವಾಗುವುದಿಲ್ಲ ಎಂದಿದ್ದಾರೆ.

ನೀವು ಏನೇ ಮಾಡಿದರೂ ಶಂಕಿಸುವವರು ಇದ್ದೇ ಇರುತ್ತಾರೆ. ಜನರು ಗಣತಿಯ ಆರ್ಥಿಕ ವಿಷಯಗಳಿಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಸರಿಯಾದ ಉತ್ತರಗಳನ್ನು ನೀಡಬಹುದು,ಆದರೆ ಕುಟುಂಬ ಸದಸ್ಯರ ವಿಷಯದಲ್ಲಿ ಸರಿಯಾದ ಮಾಹಿತಿಗಳನ್ನು ಒದಗಿಸಲು ಹಿಂದೇಟು ಹಾಕಬಹುದು. ಹೀಗಾಗಿ ಪ್ರಶ್ನೆಗಳ ಸಂಖ್ಯೆಗಳನ್ನು ಕಡಿತಗೊಳಿಸಿ ಕನಿಷ್ಠ ಮಾಹಿತಿಗಳನ್ನು ಸಂಗ್ರಹಿಸುವುದೊಂದೇ ಈ ಸಮಸ್ಯೆಗೆ ಪರಿಹಾರ ನೀಡಬಲ್ಲದು. ಜನಗಣತಿಗೆ ಪ್ರತಿಮನೆಯಲ್ಲಿ ಎಷ್ಟು ಜನರಿದ್ದಾರೆ ಎಂಬ ಮಾಹಿತಿ ಲಭಿಸಿದರೆ ಸಾಕು ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X