Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫೆ.14: ಕೆಎಂಸಿಯಲ್ಲಿ ಅಂತಾರಾಷ್ಟ್ರೀಯ...

ಫೆ.14: ಕೆಎಂಸಿಯಲ್ಲಿ ಅಂತಾರಾಷ್ಟ್ರೀಯ ಮಕ್ಕಳ ಕ್ಯಾನ್ಸರ್ ಅರಿವು ದಿನ

ವಾರ್ತಾಭಾರತಿವಾರ್ತಾಭಾರತಿ13 Feb 2020 9:02 PM IST
share

ಮಂಗಳೂರು, ಫೆ.13: ನಗರದ ಅತ್ತಾವರ ಕೆಎಂಸಿ ಆಸ್ಪತ್ರೆಯ ಸಂಜೀವಿನಿ ಸಭಾಂಗಣದಲ್ಲಿ ಫೆ.14ರಂದು ಬೆಳಗ್ಗೆ 10:15ಕ್ಕೆ ಅಂತಾರಾಷ್ಟ್ರೀಯ ಮಕ್ಕಳ ಕ್ಯಾನ್ಸರ್ ಅರಿವು ದಿನಾಚರಣೆ ನಡೆಯಲಿದೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಗಳೂರು ಕೆಎಂಸಿ ಆಸ್ಪತ್ರೆಯ ಮಕ್ಕಳ ಕ್ಯಾನ್ಸರ್ ವಿಭಾಗದ ಮುಖ್ಯಸ್ಥ ಡಾ.ಹರ್ಷಪ್ರಸಾದ್, ಚಲನಚಿತ್ರ ಸಂಗೀತ ನಿರ್ದೇಶಕ ಗುರುಕಿರಣ್, ಉದ್ಯಮಿ ಡಾ.ಜಿ.ಶಂಕರ್ ಮುಖ್ಯಅತಿಥಿಗಳಾಗಿ ಭಾಗವಹಿಸು ವರು. ಕ್ಯಾನ್ಸರ್ ರೋಗದಿಂದ ಗುಣಮುಖರಾದ ಮಕ್ಕಳು ಹಾಗೂ ಅವರ ಪೋಷಕರು ಕಾರ್ಯಕ್ರಮದಲ್ಲಿ ಭಾವಹಿಸುವರು ಎಂದು ತಿಳಿಸಿದರು.

ಇಂಡಿಯನ್ ಕೌನ್ಸಿಲ್ ಫಾರ್ ಮೆಡಿಕಲ್ ರಿಸರ್ಚ್ ಪ್ರಕಾರ ಭಾರತದಲ್ಲಿ 10 ವರ್ಷಗಳ ಹಿಂದೆ ಮಕ್ಕಳಲ್ಲಿ ಪತ್ತೆಯಾಗುತ್ತಿದ್ದ ಶೇ.2.5 ಕ್ಯಾನ್ಸರ್ ಪ್ರಮಾಣ ಈಗ ಶೇ.5.5ಕ್ಕೆ ಏರಿಕೆಯಾಗಿದೆ. ಅಂದರೆ ಈ ಅವಧಿಯಲ್ಲಿ ದ್ವಿಗುಣಗೊಂಡಿದೆ. ಅಂದರೆ ಭಾರತದಲ್ಲಿ ವರ್ಷಕ್ಕೆ ಒಟ್ಟು ಸುಮಾರು 50 ಸಾವಿರ ಮಕ್ಕಳಲ್ಲಿ ಕ್ಯಾನ್ಸರ್ ಪ್ರಕರಣಗಳು ಪತ್ತೆಯಾಗುತ್ತಿವೆ ಎಂದು ವಿವರಿಸಿದರು.

ದುಃಖದ ಸಂಗತಿಯೆಂದರೆ ಮಕ್ಕಳ ಕ್ಯಾನ್ಸರ್ ಪ್ರಕರಣಗಳಲ್ಲಿ 10 ಮಕ್ಕಳಲ್ಲಿ ಒಂದು ಮಗು ಮಾತ್ರ ಸಂಪೂರ್ಣ ಚಿಕಿತ್ಸೆ ಪಡೆಯುತ್ತಿದೆ. ಪರಿಣಾಮ ಸಾಮಾನ್ಯ ಮಕ್ಕಳ ಕ್ಯಾನ್ಸರ್‌ಗಳಾದ ಲಿಮ್‌ಫೋಮ ಮತ್ತು ಲ್ಯುಕೇಮಿಯಾವನ್ನು ಗುಣಪಡಿಸುವ ಪ್ರಮಾಣವು ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಶೇ.80 ಇದ್ದರೆ, ಭಾರತದಲ್ಲಿ ಶೇ.30ಕ್ಕಿಂತ ಕಡಿಮೆ ಇದೆ ಎಂದರು.

ಕೆಎಂಸಿ ಮಕ್ಕಳ ಚಿಕಿತ್ಸಾ ವಿಭಾಗದ ಮುಖ್ಯಸ್ಥೆ ಡಾ.ಕಮಲಾಕ್ಷಿ ಭಟ್ ಮಾತನಾಡಿ, ಅಂತಾರಾಷ್ಟ್ರೀಯ ಮಕ್ಕಳ ಕ್ಯಾನ್ಸರ್ ದಿನಾಚರಣೆಯನ್ನು 2002ರಲ್ಲಿ ‘ಚೈಲ್ಡ್ ಹುಡ್ ಕ್ಯಾನ್ಸರ್ ಇಂಟರ್‌ನ್ಯಾಶನಲ್’ ಆರಂಭಿಸಿದ್ದು, ಜಗತ್ತಿನಾದ್ಯಂತ ಫೆ.15 ರಂದು ಈ ದಿನಾಚರಣೆ ನಡೆಯುತ್ತಿದೆ.ಚೈಲ್ಡ್ ಹುಡ್‌ಕ್ಯಾನ್ಸರ್ ಇಂಟರ್‌ನ್ಯಾಷನಲ್ 88 ದೇಶಗಳಲ್ಲಿ 171 ಸದಸ್ಯ ಸಂಸ್ಥೆಗಳ ಜಾಗತಿಕ ಜಾಲ ಹೊಂದಿದೆ. ಕ್ಯಾನ್ಸರ್‌ನಿಂದ ಸಂಭವಿಸುವ ಮರಣ ಪ್ರಮಾಣ ಕಡಿಮೆ ಮಾಡುವುದು ಮತ್ತು ಕ್ಯಾನ್ಸರ್‌ಸಂಬಂಧಿತ ನೋವು ಮತ್ತು ಸಂಕಟಗಳನ್ನು ಹೋಗಲಾಡಿಸುವ ಜಾಗತಿಕ ಗುರಿಯನ್ನು ಇದು ಹೊಂದಿದೆ ಎಂದು ಮಾಹಿತಿ ನೀಡಿದರು.

ಆಸ್ಪತ್ರೆಯಲ್ಲಿ ಪ್ರಸ್ತುತ ಪ್ರತೀ ತಿಂಗಳು ಸುಮಾರು 80 ಹೊಸ ಮಕ್ಕಳ ಕ್ಯಾನ್ಸರ್ ಪ್ರಕರಣಗಳನ್ನು ಪರೀಕ್ಷಿಸಲಾಗುತ್ತಿದೆ. ಮಕ್ಕಳ ದೇಹವು ಚಿಕಿತ್ಸೆಗೆ ಬೇಗನೇ ಸ್ಪಂದಿಸುವ ಗುಣ ಹೊಂದಿದ್ದು, ತೀವ್ರವಾದ ಲಿಂಫೋಬ್ಲಾಸ್ಟಿಕ್ ಲ್ಯುಕೇಮಿಯಾ ಪ್ರಕರಣದಲ್ಲಿ ಗುಣಹೊಂದುವ ಪ್ರಮಾಣವು ಶೇ.65-70 ರಷ್ಟಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಇನ್ಫಿನಿಟಿ ಎಂಟರ್ಟೈನ್‌ಮೆಂಟ್‌ನ ಮಾಲಕ ಧರ್ಮಿತ್ ರೈ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X