ಪಿಸಿಸಿಯಲ್ಲಿ ಫೆ.15ರಂದು ಕೇಂದ್ರ ಬಜೆಟ್ ವಿಶ್ಲೇಷಣೆ
ಉಡುಪಿ, ಫೆ.13: ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ ಉಡುಪಿ ಶಾಖೆಯು, ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನ ಸಹಯೋಗದಲ್ಲಿ ಕೇಂದ್ರ ಸರಕಾರದ ಬಜೆಟ್ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವ ಸಲುವಾಗಿ ವಿಶೇಷ ಉಪನ್ಯಾಸವನ್ನು ಫೆ.15ರ ಶನಿವಾರ ಅಪರಾಹ್ನ 2:30ಕ್ಕೆ ಕಾಲೇಜಿನ ಪ್ರಜ್ಞ ಹಾಲ್ನಲ್ಲಿ ಆಯೋಜಿಸಿದೆ.
ಅದಮಾರು ಮಠದ ಶ್ರೀವಿಶ್ವಪ್ರಿಯ ತೀರ್ಥ ಸ್ವಾಮೀಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ಬೆಂಗಳೂರಿನ ಸಿಎ ವಿಷ್ಣುಮೂರ್ತಿ ಹೆಚ್ ಅವರು ಉಪನ್ಯಾಸ ನೀಡಲಿದ್ದಾರೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story