Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಪಾಕಿಸ್ತಾನ ಪರ ಘೋಷಣೆ’ ಆರೋಪ: ಕಾಶ್ಮೀರ...

‘ಪಾಕಿಸ್ತಾನ ಪರ ಘೋಷಣೆ’ ಆರೋಪ: ಕಾಶ್ಮೀರ ಮೂಲದ ಹುಬ್ಬಳ್ಳಿಯ ಮೂವರು ಕಾಲೇಜು ವಿದ್ಯಾರ್ಥಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ15 Feb 2020 7:09 PM IST
share
‘ಪಾಕಿಸ್ತಾನ ಪರ ಘೋಷಣೆ’ ಆರೋಪ: ಕಾಶ್ಮೀರ ಮೂಲದ ಹುಬ್ಬಳ್ಳಿಯ ಮೂವರು ಕಾಲೇಜು ವಿದ್ಯಾರ್ಥಿಗಳ ಬಂಧನ

ಹುಬ್ಬಳ್ಳಿ, ಫೆ. 15: ಇಲ್ಲಿನ ಗೋಕುಲ ರಸ್ತೆಯಲ್ಲಿನ ಕೆಎಲ್‌ಇ ಇಂಜಿನಿಯರಿಂಗ್ ಕಾಲೇಜಿನ ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆಂಬ ಆರೋಪ ಕೇಳಿಬಂದಿದ್ದು, ಆ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಮೂವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ವಿದ್ಯಾರ್ಥಿಗಳನ್ನು ಅಮೀರ್, ಬಾಸಿತ್ ಹಾಗೂ ತಾಲೀಬ್ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಓದುತ್ತಿರುವ ಮೂವರು ವಿದ್ಯಾರ್ಥಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಲಾಗಿದೆ. ಪುಲ್ವಾಮಾ ದಾಳಿ ಸಂಭವಿಸಿ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಶುಕ್ರವಾರ (ಫೆ.4) ವಿದ್ಯಾರ್ಥಿಗಳು ತಮ್ಮ ಕೊಠಡಿಯಲ್ಲಿ ವಿಡಿಯೋವೊಂದನ್ನು ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ಅದು ವೈರಲ್ ಆದ ಹಿನ್ನೆಲೆಯಲ್ಲಿ ಬಜರಂಗದಳದ ಕಾರ್ಯಕರ್ತರು ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಾಲೇಜು ಆಡಳಿತ ಮಂಡಳಿಗೆ ಒತ್ತಾಯಿಸಿದ್ದರು.

ಆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಗೋಕುಲ ರಸ್ತೆ ಠಾಣಾ ಪೊಲೀಸರಿಗೆ ಕೆಎಲ್‌ಇ ಕಾಲೇಜಿನ ಆಡಳಿತ ಮಂಡಳಿ ದೂರು ನೀಡಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಇನ್ಸ್‌ಪೆಕ್ಟರ್ ನಾಗರಾಜ್ ಕಂಬಾರ, ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಕಾಶ್ಮೀರದ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿ, ಕರೆದೊಯ್ಯುತ್ತಿದ್ದ ವೇಳೆ ಭಜರಂಗ ದಳ ಕಾರ್ಯಕರ್ತರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಅಮಾನತು

ಸರಕಾರಿ ಕೋಟಾದಡಿ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ಕೆಎಲ್‌ಇ ಕಾಲೇಜಿನಲ್ಲಿ ಸೀಟು ಪಡೆದಿದ್ದರು. ವಿದ್ಯಾರ್ಥಿಗಳ ವಿಡಿಯೊ ಗಮನಿಸಿ ಪೊಲೀಸರಿಗೆ ನಾವೇ ಮಾಹಿತಿ ನೀಡಿದ್ದೇವೆ. ಅವರ ಮೇಲೆ ಕಾನೂನು ಕ್ರಮ ಕೈಗೊಂಡು ಅಮಾನತು ಮಾಡಲಾಗಿದೆ.

-ಡಾ.ಬಸವರಾಜ ಆನಾಮಿ, ಕೆಎಲ್‌ಇ ಕಾಲೇಜ್ ಪ್ರಾಂಶುಪಾಲ

ಬಿಜೆಪಿ ಸಹಿಸುವುದಿಲ್ಲ

ಪಾಕಿಸ್ತಾನ ಪರ ಘೋಷಣೆ ಕೂಗಿದ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ದೇಶದ್ರೋಹದ ಚಟುವಟಿಕೆಗಳನ್ನು ಬಿಜೆಪಿ ಸಹಿಸುವುದಿಲ್ಲ.

-ಪ್ರಹ್ಲಾದ್ ಜೋಶಿ, ಕೇಂದ್ರ ಸಚಿವ

ದೇಶದ್ರೋಹ ಪ್ರಕರಣ

ಕೆಎಲ್‌ಇ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಓದುತ್ತಿದ್ದ ಮೂವರು ಕಾಶ್ಮೀರದ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಕಾಲೇಜು ಆಡಳಿತ ಮಂಡಳಿ ನೀಡಿದ ದೂರನ್ನು ಆಧರಿಸಿ, ಮೂವರ ವಿರುದ್ಧವೂ ದೇಶದ್ರೋಹ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.

-ದಿಲೀಪ್, ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X