Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇನ್ನು ಮತದಾನದಲ್ಲಿ ನೂತನ ತಂತ್ರಜ್ಞಾನ:...

ಇನ್ನು ಮತದಾನದಲ್ಲಿ ನೂತನ ತಂತ್ರಜ್ಞಾನ: ಇದರ ವಿಶೇಷತೆಯೇನು ಗೊತ್ತಾ?

ಯಾವ ಊರಲ್ಲಿದ್ದರೂ ಮತ ಚಲಾಯಿಸಿ!

ವಾರ್ತಾಭಾರತಿವಾರ್ತಾಭಾರತಿ16 Feb 2020 8:05 PM IST
share
ಇನ್ನು ಮತದಾನದಲ್ಲಿ ನೂತನ ತಂತ್ರಜ್ಞಾನ: ಇದರ ವಿಶೇಷತೆಯೇನು ಗೊತ್ತಾ?

ಹೊಸದಿಲ್ಲಿ,ಫೆ.16: ಮತದಾನಕ್ಕಾಗಿ ನೂತನ ತಂತ್ರಜ್ಞಾನವನ್ನು ಅಭಿವೃದ್ಧಿಗೊಳಿಸಲು ಚುನಾವಣಾ ಆಯೋಗವು ಐಐಟಿ-ಮದ್ರಾಸ್ ಜೊತೆಗೆ ಸಹಭಾಗಿತ್ವವನ್ನು ಮಾಡಿಕೊಂಡಿದೆ. ದೂರದ ಊರುಗಳಲ್ಲಿರುವ ಮತದಾರರು ತಮ್ಮ ಕ್ಷೇತ್ರಗಳ ನಿಗದಿತ ಮತಗಟ್ಟೆಗಳಿಗೆ ತೆರಳದೆ ಮತಗಳನ್ನು ಚಲಾಯಿಸಲು ಈ ತಂತ್ರಜ್ಞಾನವು ಅವಕಾಶ ಕಲ್ಪಿಸಲಿದೆ. ಯೋಜನೆಯು ಹಾಲಿ ಸಂಶೋಧನೆ ಮತ್ತು ಅಭಿವೃದ್ಧಿ ಹಂತದಲ್ಲಿದೆ ಎಂದು ಆಯೋಗದ ಹಿರಿಯ ಅಧಿಕಾರಿಗಳು ತಿಳಿಸಿದರು.

ಯೋಜನೆಯಲ್ಲಿ ಬಳಸಲಾಗುವ ‘ಬ್ಲಾಕ್ ಚೈನ್’ ತಂತ್ರಜ್ಞಾನದ ಕುರಿತು ವಿವರಿಸಿದ ಹಿರಿಯ ಉಪ ಚುನಾವಣಾ ಆಯುಕ್ತ ಸಂದೀಪ ಸಕ್ಸೇನಾ ಅವರು,ಇದು ಬಯೊಮೆಟ್ರಿಕ್ ಸಾಧನಗಳು ಮತ್ತು ವೆಬ್ ಕ್ಯಾಮರಾ ಸಜ್ಜಿತ ವೈಟ್ ಲಿಸ್ಟೆಡ್ ಐಪಿ ಸಾಧನಗಳ ಮೇಲೆ ನಿಯಂತ್ರಿತ ವಾತಾವರಣದಲ್ಲಿ ದ್ವಿಮಾರ್ಗ ವಿದ್ಯುನ್ಮಾನ ಮತದಾನ ವ್ಯವಸ್ಥೆಯ ಪರಿಕಲ್ಪನೆಯಾಗಿದೆ ಮತ್ತು ಇದಕ್ಕಾಗಿ ಪ್ರತ್ಯೇಕ ಇಂಟರ್ನೆಟ್ ಲೈನ್‌ಗಳನ್ನು ಬಳಸಲಾಗುವುದು ಎಂದರು. ಆದರೆ ಈ ಸೌಲಭ್ಯವನ್ನು ಪಡೆದುಕೊಳ್ಳಲು ಮತದಾರರು ಪೂರ್ವ ನಿರ್ಧರಿತ ಅವಧಿಯಲ್ಲಿ ನಿಯೋಜಿತ ತಾಣಕ್ಕೆ ಭೇಟಿ ನೀಡಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದ ಅವರು,‘ಯಾವುದೇ ಸಮಯ-ಎಲ್ಲಿಂದಲೂ-ಯಾವುದೇ ಸಾಧನದಲ್ಲಿ’ ಮತ ಚಲಾಯಿಸಬಹುದಾದ ವ್ಯವಸ್ಥೆಯನ್ನು ಅಭಿವೃದ್ಧಿಗೊಳಿಸಲು ಹೆಚ್ಚಿನ ಕಾಲಾವಕಾಶ ಮತ್ತು ಇನ್ನಷ್ಟು ಸುಧಾರಿತ ತಂತ್ರಜ್ಞಾನದ ಅಗತ್ಯವಿದೆ ಎಂದರು.

ಉದಾಹರಣೆಗೆ ಲೋಕಸಭಾ ಚುನಾವಣೆಯಿದೆ ಮತ್ತು ಚೆನ್ನೈನ ಮತದಾರನೋರ್ವ ದಿಲ್ಲಿಯಲ್ಲಿದ್ದಾನೆ ಎಂದಿಟ್ಟುಕೊಳ್ಳಿ. ಮತದಾನಕ್ಕಾಗಿ ತನ್ನ ಊರಿಗೆ ಮರಳುವ ಅಥವಾ ಮತದಾನವನ್ನು ತಪ್ಪಿಸಿಕೊಳ್ಳುವ ಬದಲು ಆತ ನಿಗದಿತ ಅವಧಿಯಲ್ಲಿ ಚುನಾವಣಾ ಆಯೋಗವು ಸ್ಥಾಪಿಸಿರುವ,ಉದಾಹರಣೆಗೆ ‘ಕನಾಟ್ ಪ್ಲೇಸ್’ ನಲ್ಲಿರುವ ಕೇಂದ್ರಕ್ಕೆ ತೆರಳಿ ತನ್ನ ಮತವನ್ನು ಚಲಾಯಿಸಬಹುದು. ಇಂತಹ ಮತದಾರರು ಈ ಅವಕಾಶವನ್ನು ಬಳಸಿಕೊಳ್ಳಲು ತಮ್ಮ ಚುನಾವಣಾಧಿಕಾರಿಗಳಿಗೆ ಮೊದಲೇ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X