Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಸೋಲಿಲ್ಲದ ಸರದಾರರು’ ಎಂಬ...

‘ಸೋಲಿಲ್ಲದ ಸರದಾರರು’ ಎಂಬ ಭ್ರಮೆಯಲ್ಲಿದ್ದವರಿಗೆ ಪಾಠ ಕಲಿಸಿದ ದಿಲ್ಲಿ ಚುನಾವಣೆ: ಶಿವಸೇನೆ

ವಾರ್ತಾಭಾರತಿವಾರ್ತಾಭಾರತಿ16 Feb 2020 8:21 PM IST
share
‘ಸೋಲಿಲ್ಲದ ಸರದಾರರು’ ಎಂಬ ಭ್ರಮೆಯಲ್ಲಿದ್ದವರಿಗೆ ಪಾಠ ಕಲಿಸಿದ ದಿಲ್ಲಿ ಚುನಾವಣೆ: ಶಿವಸೇನೆ

ಹೊಸದಿಲ್ಲಿ, ಫೆ.16: ತಾವು ಅಜೇಯರು, ಸೋಲರಿಯದ ಸರದಾರರು ಎಂಬ ಭ್ರಮೆಯಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ದಿಲ್ಲಿಯ ಜನತೆ ಸರಿಯಾದ ಪಾಠ ಕಲಿಸಿದ್ದಾರೆ ಎಂದು ಶಿವಸೇನೆಯ ಮುಖಂಡ ಸಂಜಯ್ ರಾವತ್ ವಾಗ್ದಾಳಿ ನಡೆಸಿದ್ದಾರೆ.

ಪಕ್ಷದ ಮುಖವಾಣಿ ‘ಸಾಮ್ನ’ದ ವಾರದ ಅಂಕಣದಲ್ಲಿ, ಬಿಜೆಪಿಯ ಧರ್ಮ ಕೇಂದ್ರಿತ ಚುನಾವಣಾ ತಂತ್ರಗಾರಿಕೆಯನ್ನು ರಾವತ್ ಟೀಕಿಸಿದ್ದಾರೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅಜೇಯ ಎಂಬ ಭಾವನೆ ಮೂಡಿಸಿದ್ದ ಬಿಜೆಪಿ, ದಿಲ್ಲಿ ಚುನಾವಣೆ ಸಂದರ್ಭ ಇಸ್ಪಿಟ್ ಕಾರ್ಡ್‌ನ ಮನೆಯಂತೆ ಉರುಳಿ ಬಿದ್ದಿದೆ. ಹನುಮಂತನ ಭಕ್ತ ಕೇಜ್ರಿವಾಲ್‌ರನ್ನು ದಿಲ್ಲಿಯ ಜನತೆ ರಾಮನಂತೆ ಆಶೀರ್ವದಿಸಿದ್ದಾರೆ. ಈ ಚುನಾವಣೆಯಿಂದ ಹಲವು ಪಾಠಗಳನ್ನು ಕಲಿಯಬೇಕಿದೆ ಎಂದು ರಾವತ್ ಹೇಳಿದ್ದಾರೆ.

 ಮತದಾರರು ಅಪ್ರಾಮಾಣಿಕರಲ್ಲ. ರಾಜಕೀಯ ಲಾಭಕ್ಕಾಗಿ ಮುನ್ನೆಲೆಗೆ ತಂದ ಧಾರ್ಮಿಕ ಭಾವನೆಯ ಸುಳಿಗಾಳಿಗೆ ಮತದಾರರು ಸಿಲುಕಲಿಲ್ಲ. ಧರ್ಮವಿಲ್ಲದ ಯಾವುದೇ ದೇಶವಿಲ್ಲ. ಆದರೆ ಧರ್ಮ ಎಂದರೆ ದೇಶಭಕ್ತಿಯಲ್ಲ. ಈಗ ಬಿಜೆಪಿಗೆ ಚುನಾವಣೆ ಗೆಲ್ಲಲು ಶ್ರೀರಾಮನೂ ನೆರವಾಗುತ್ತಿಲ್ಲ. ಮೋದಿ ಮತ್ತು ಕೇಜ್ರೀವಾಲರ ಮಧ್ಯೆ ಇರುವ ಸಾಮ್ಯತೆಯೆಂದರೆ ಇಬ್ಬರೂ ಸ್ವಹಿತಾಸಕ್ತರು. ಆದರೆ ಮೋದಿಗೆ ದುರಹಂಕಾರ ಮತ್ತು ಜಂಭ ಹೆಚ್ಚಿದೆ. ಕೇಜ್ರಿವಾಲ್ ಈ ಹಿಂದೊಮ್ಮೆ ಇಡೀ ದೇಶದ ನಾಯಕನಾಗುವ ಆಸೆ ಮೂಡಿತ್ತು. ಆದರೆ ಲೋಕಸಭೆಯಲ್ಲಿ ಎದುರಾದ ಸೋಲಿನಿಂದ ಅವರು ಪಾಠ ಕಲಿತು ತನ್ನ ಮಿತಿಯನ್ನು ಅರಿತುಕೊಂಡಿದ್ದಾರೆ.

 ಕೇಜ್ರೀವಾಲ್ ಜನತೆಗೆ ನೀಡುತ್ತಿರುವ ಉಚಿತ ಸೇವೆಗಳನ್ನು ಟೀಕಿಸುತ್ತಿರುವ ಬಿಜೆಪಿಯೂ ಈ ಹಿಂದಿನ ಚುನಾವಣೆಯಲ್ಲಿ ದೇಶದ ಪ್ರತೀ ಪ್ರಜೆಯ ಖಾತೆಗೂ 15 ಲಕ್ಷ ರೂ. ಜಮೆ ಮಾಡುವ ಭರವಸೆ ನೀಡಿತ್ತು. ಇದು ಭರವಸೆಯಾಗಿಯೇ ಉಳಿದಿದೆ. ಆದರೆ ಉತ್ತಮ ಶಿಕ್ಷಣ ವ್ಯವಸ್ಥೆ, ಆರೋಗ್ಯ ಸೇವೆ, ವಿದ್ಯುತ್, ನೀರು, ಅಗತ್ಯವಿದ್ದವರಿಗೆ ವಸತಿ ಕಟ್ಟಿ ಕೊಡುವ ಭರವಸೆಯನ್ನು ಆಪ್ ಪಕ್ಷ ಈಡೇರಿಸಿದೆ. ಕಳೆದ 2 ವರ್ಷದಲ್ಲಿ 2 ಕೋಟಿ ಜನ ಉದ್ಯೋಗ ಕಳೆದುಕೊಂಡಿರುವುದನ್ನು ನೀವು(ಬಿಜೆಪಿಯವರು) ದೇಶಭಕ್ತಿ ಎನ್ನುತ್ತೀರಾ ಎಂದು ರಾವತ್ ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X