Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಭ್ರಷ್ಟರ ವಿರುದ್ಧ ಧ್ವನಿ ಎತ್ತದಿದ್ದರೆ...

ಭ್ರಷ್ಟರ ವಿರುದ್ಧ ಧ್ವನಿ ಎತ್ತದಿದ್ದರೆ ದೇಶಕ್ಕೆ ಅಪಾಯ: ರವಿಕೃಷ್ಣಾರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ16 Feb 2020 10:27 PM IST
share
ಭ್ರಷ್ಟರ ವಿರುದ್ಧ ಧ್ವನಿ ಎತ್ತದಿದ್ದರೆ ದೇಶಕ್ಕೆ ಅಪಾಯ: ರವಿಕೃಷ್ಣಾರೆಡ್ಡಿ

ಬೆಂಗಳೂರು, ಫೆ.16: ಭ್ರಷ್ಟಚಾರದಲ್ಲಿ ಮುಳುಗಿರುವ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ಧ್ವನಿ ಎತ್ತದಿದ್ದರೆ ದೇಶಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಕಿಡಿಕಾರಿದ್ದಾರೆ. 

ರವಿವಾರ ಮೈಸೂರು ಬ್ಯಾಂಕ್ ವೃತ್ತದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಆಯೋಜಿಸಿದ್ದ ‘ಗೂಂಡಾಗಳೇ ಪೊಲೀಸ್ ಇಲಾಖೆ ಬಿಟ್ಟು ತೊಲಗಿ’ ಎಂಬ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. 

ಐಪಿಎಸ್ ಅಧಿಕಾರಿ ಡಾ.ಭೀಮಾಶಂಕರ್ ಗುಳೇದ್ ಮೇಲೆ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅವರನ್ನು ಬೇರೆ ಕಡೆಗೆ ವರ್ಗಾಯಿಸಿ ಎಂದು ಆಗ್ರಹಿಸಲಾಗಿತ್ತು. ಆದರೆ, ಪೊಲೀಸರು ಯಾವುದೇ ಮಾಹಿತಿಯನ್ನು ನೀಡದೇ ನನ್ನ ಮತ್ತು ಜಂಟಿ ಕಾರ್ಯದರ್ಶಿ ರಘು ಜಾಣಗೆರೆಯನ್ನು ಏಕಾಏಕಿ ವಶಕ್ಕೆ ಪಡೆದಿರುವುದು ಖಂಡನೀಯ. ಅಲ್ಲದೆ, ಭ್ರಷ್ಟರ ವಿರುದ್ಧ ಧ್ವನಿ ಎತ್ತುವುದು ಅವಶ್ಯಕತೆ ಇದೆ ಎಂದು ಎಂದು ಹೇಳಿದರು.

ಡಾ.ಬಿ.ಆರ್.ಅಂಬೇಡ್ಕರ್, ಮಹಾತ್ಮ ಗಾಂಧಿ, ಭಗತ್‌ಸಿಂಗ್ ಅಂಥವರ ಆದರ್ಶಗಳ ಮೇಲೆ ನಾನು ನಂಬಿಕೆ ಇಟ್ಟವನು. ಅವರಿಗೂ ಈ ಸಮಾಜ ಅಪಮಾನವನ್ನು ಮಾಡಿದೆ. ನನಗೂ ಅಪಮಾನ ಮಾಡಿದೆ. ಆದರೆ, ಸತ್ಯ, ನ್ಯಾಯ, ಶಾಂತಿಗಾಗಿ ನಿರಂತರ ಹೋರಾಟ ನಡೆಸುತ್ತೇವೆ. ಐಪಿಎಸ್ ಅಧಿಕಾರಿ ಡಾ.ಭೀಮಾಶಂಕರ್, ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಭ್ರಷ್ಟಾಚಾರಿಗಳಾಗಿದ್ದು, ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

ಐಎಂಎ ಹಗರಣದಲ್ಲಿ ಲಂಚ ಪಡೆದ ಅಧಿಕಾರಿ ಅಜಯ್ ಹಿಲೋರಿ, ಹೇಮಂತ್ ನಿಂಬಾಳ್ಕರ್ ವಿರುದ್ಧ ಸಿಬಿಐ ತನಿಖೆ ನಡೆಯುತ್ತಿದ್ದು, ಅವರನ್ನು ತನಿಖೆ ಮುಗಿಯುವವರೆಗೆ ಅಮಾನತ್ತಿನಲ್ಲಿ ಇರಿಸಬೇಕು. ಭ್ರಷ್ಟರನ್ನು ಜೈಲಿಗೆ ಕಳುಹಿಸುವ ಮೂಲಕ ಈ ಸಮಾಜವನ್ನು ಭ್ರಷ್ಟಾಚಾರ ಮುಕ್ತ ದೇಶವನ್ನಾಗಿ ಮಾಡಬೇಕೆಂದು ತಿಳಿಸಿದರು. ಕಾನೂನು ತಿಳಿಯದ ಪೊಲೀಸರು ನಮ್ಮನ್ನು ಬಂಧಿಸಿ ಕರೆದೊಯ್ಯುದಿದ್ದಕ್ಕೆ ನಮಗೆ ಯಾವುದೆ ಅಪಮಾನ ಎಂದುಕೊಂಡಿಲ್ಲ. ಆದರೆ, ಒಂದು ಬಾರಿ ನನ್ನನ್ನು ಬಂಧಿಸಿ ಭ್ರಷ್ಟಾಚಾರ ಮಾಡಿ ಜೈಲಿಗೆ ಹೋಗಿದ್ದ ಯಡಿಯೂರಪ್ಪ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಹಾಲಪ್ಪ, ಸಂಪಂಗಿ ಅವರು ಇದ್ದ ಜೈಲಿನಲ್ಲಿ ಇರಿಸಿದ್ದರು. ಆದರೆ, ನ್ಯಾಯಕ್ಕಾಗಿ ಹೋರಾಡಿದ ನಮಗೆ ಯಾವುದೆ ಮುಜಗರ ಎನಿಸದೆ ಮತ್ತೆ ಬೀದಿಗಿಳಿದು ಹೋರಾಟವನ್ನು ಪ್ರಾರಂಭಿಸಿದೆವು ಎಂದು ಹೇಳಿದರು. 

‘ನಗರದಲ್ಲಿ ಸಿಎಎ ವಿರುದ್ಧ ಹೋರಾಟ ನಡೆಸುತ್ತಿದ್ದಾಗ ನಗರದಲ್ಲಿ ಸೆಕ್ಷನ್ 144 ಅನ್ನು ಜಾರಿಗೊಳಿಸಲಾಗಿತ್ತು. ಆದರೆ, ಕರ್ನಾಟಕ ಹೈಕೋರ್ಟ್ ನಗರ ಪೊಲೀಸ್ ಆಯುಕ್ತರ ಆದೇಶ ಕಾನೂನು ಬಾಹಿರ ಎಂದು ಹೇಳುವ ಮೂಲಕ ಅಸಮಾಧಾನ ವ್ಯಕ್ತಪಡಿಸಿತ್ತು. ದೇಶ ವಿರೋಧಿ ಕಾನೂನುಗಳು ಬಂಧಾಗ ಪ್ರತಿಭಟನೆ ಮಾಡಬಹುದೆಂದು ಬಾಂಬೆ ಹೈಕೋರ್ಟ್‌ನ ಔರಂಗಾಬಾದ್ ಪೀಠವು ಆದೇಶಿದೆ. ಅಲ್ಲದೆ, ಸಿಎಎ ವಿರೋಧಿ ಪ್ರತಿಭಟನಾಕಾರರು ದೇಶದ್ರೋಹಿಗಳಲ್ಲ ಎಂದು ಹೇಳಿದೆ.’

-ರವಿ ಕೃಷ್ಣಾರೆಡ್ಡಿ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X