Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನನ್ನ ಪರಿಸ್ಥಿತಿ ಯಾವೊಬ್ಬ ಯೋಧನ ಪತ್ನಿಗೂ...

ನನ್ನ ಪರಿಸ್ಥಿತಿ ಯಾವೊಬ್ಬ ಯೋಧನ ಪತ್ನಿಗೂ ಬರಬಾರದು: ಮಂಡ್ಯದ ಯೋಧ ಗುರು ಪತ್ನಿ ಕಲಾವತಿ

ವಾರ್ತಾಭಾರತಿವಾರ್ತಾಭಾರತಿ16 Feb 2020 10:36 PM IST
share
ನನ್ನ ಪರಿಸ್ಥಿತಿ ಯಾವೊಬ್ಬ ಯೋಧನ ಪತ್ನಿಗೂ ಬರಬಾರದು: ಮಂಡ್ಯದ ಯೋಧ ಗುರು ಪತ್ನಿ ಕಲಾವತಿ

ಭಾರತೀನಗರ,ಫೆ.16: 'ನನ್ನ ಪರಿಸ್ಥಿತಿ ಯಾವೊಬ್ಬ ಯೋಧನ ಪತ್ನಿಗೂ ಬರಬಾರದು. ಪತಿಯ ಮರ್ಯಾದೆಗೋಸ್ಕರ ಎಲ್ಲಾ ತರಹದ ಕಿರುಕುಳ, ನೋವುಗಳನ್ನು ಸಹಿಸಿಕೊಂಡು ಬಂದಿದ್ದೇನೆ' ಎಂದು ಪುಲ್ವಾಮ ದಾಳಿಯಲ್ಲಿ ಮೃತರಾದ ಗುಡಿಗೆರೆ ಕಾಲೊನಿ ಗ್ರಾಮದ ಯೋಧ ಎಚ್.ಗುರು ಅವರ ಪತ್ನಿ ಕಲಾವತಿ ಅವರು ನೋವು ತೋಡಿಕೊಂಡರು.

ಭಾನುವಾರ ಮದ್ದೂರು- ಮಳವಳ್ಳಿ ಮುಖ್ಯರಸ್ತೆಯ ಮೆಳ್ಳಹಳ್ಳಿ ಬಳಿ ಮೃತ ಯೋಧನ ಪ್ರಥಮ ವರ್ಷದ ಪುಣ್ಯಸ್ಮರಣೆ ನಿಮಿತ್ತ ಆಯೋಜಿಸಿದ ಪೂಜಾ ಕಾರ್ಯಕ್ರಮದ ನಂತರ ಮಾಧ್ಯಮ ಪ್ರತಿನಿಧಿಗಳೆದುರು ಅವರು ಮಾತನಾಡಿದರು. 'ನಾನು ಬದುಕಿನಲ್ಲಿ ತುಂಬಾ ಕನಸುಗಳನ್ನು ಕಟ್ಟಿಕೊಂಡಿದ್ದೆ. ನನಗೆ ಹಣ ಬೇಡ. ನನ್ನ ಯಜಮಾನರು ಬೇಕು. ಅವರಿಲ್ಲದೆ ನನಗೆ ಬದುಕಿನಲ್ಲಿ ನೆಮ್ಮದಿ ಇಲ್ಲದಾಗಿದೆ. ಹಣ ಹೊತ್ತುಕೊಂಡು ಹೋಗಿದ್ದಾರೆಂದು ಇಲ್ಲಸಲ್ಲದ ಅಪಪ್ರಚಾರ ಮಾಡಿದ್ದಾರೆ. ಇದರಿಂದ ನಾನು ನೆಮ್ಮದಿ ಕಳೆದುಕೊಂಡಿದ್ದೇನೆ ಎಂದು ದೂರಿದರು.

ಪತಿ ಮೃತರಾದ ದಿನದಿಂದಲೂ ಒಂದಲ್ಲ ಒಂದು ಕಿರುಕುಳ ಕೊಟ್ಟಿದ್ದಾರೆ. ನನ್ನ ಮಗ ನಿನ್ನಿಂದ ಸತ್ತಿದ್ದಾನೆ. ಮನೆಯಲ್ಲಿದ್ದ ನನ್ನ ದಾಖಲಾತಿಗಳನ್ನು ತೆಗೆದುಕೊಂಡು ಹೋಗಲು ಬಂದಾಗ ಹಣ ಹೊತ್ತುಕೊಂಡು ಹೋಗುತ್ತಿದ್ದಾಳೆಂದು ಗೋಳಾಡಿ ಗ್ರಾಮಸ್ಥರೆದುರು ನನ್ನ ಮರ್ಯಾದೆ ಕಳೆದಿದ್ದಾರೆ ಎಂದು ಅತ್ತೆ ಚಿಕ್ಕೋಳಮ್ಮ ವಿರುದ್ಧ ಕಿಡಿಕಾರಿದರು.

ನನ್ನ ಮೊಬೈಲ್‍ನಲ್ಲಿದ್ದ ಫೋಟೋಗಳನ್ನು ಅಳಿಸಿ ಹಾಕುವುದರ ಜೊತೆಗೆ ಮನೆಯಲ್ಲಿ ಪತಿಯ ಭಾವಚಿತ್ರಕ್ಕೆ ಪೂಜೆ ಮಾಡಲು ಬಿಡಲಲ್ಲ. ಪತಿಯ ತಿಥಿ ಕಾರ್ಯಕ್ಕೂ ಮುನ್ನವೇ ನನಗೆ ಮಾಂಗಲ್ಯ ಸರ ಮಾಡಿಸಿಕೊಟ್ಟಿದ್ದ ಹಣವನ್ನು ಪಡೆದುಕೊಂಡಿದ್ದಾರೆ. ಮೈದುನನನ್ನು ಮದುವೆ ಮಾಡಿಕೊಳ್ಳುವಂತೆ ಬೇರೆಯವರ ಮೂಲಕ ಹೇಳಿಸಿ ನನಗೆ ಮಾನಸಿಕ ಯಾತನೆ ನೀಡಿದ್ದಾರೆ. ವಾರ್ಷಿಕ ಪುಣ್ಯಸ್ಮರಣೆ ವಿಚಾರವಾಗಿ ಮಾತನಾಡಲು ಪತಿಯ ಮನೆಗೆ ಹೋದ ನನ್ನ ತಂದೆಯನ್ನು ಮೈದುನ ಮಧು ಅವಾಚ್ಯ ಪದಗಳಿಂದ ಬೈದು ಕಳುಹಿಸಿದ್ದಾನೆ ಎಂದು ಅಳಲು ತೋಡಿಕೊಂಡರು.

ಹಿಂದೂ ಶಾಸ್ತ್ರದ ಪ್ರಕಾರ ಮಣ್ಣು ಮಾಡಿದ ದಿನದಿಂದ ಲೆಕ್ಕ ತೆಗೆದುಕೊಂಡು ವಾರ್ಷಿಕ ಪುಣ್ಯಸ್ಮರಣೆ ಮಾಡುವಂತೆ ಜ್ಯೋತಿಷಿ ಹೇಳಿದ್ದರು. ಆದ್ದರಿಂದ ನಾನು ಫೆ.16 ರಂದು ಪುಣ್ಯ ಸ್ಮರಣೆ ಆಚರಿಸುತ್ತಿದ್ದೇನೆ. ರಾಜ್ಯಾದ್ಯಂತ ನನ್ನ ಕಷ್ಟಕ್ಕೆ ಜನ ಮರುಗಿ ಸಹಾಯ ಮಾಡಿದ್ದಾರೆ. ಅದಕ್ಕೆ ನಾನು ಋಣಿಯಾಗಿದ್ದೇನೆ. ಶಾಸಕ ಡಿ.ಸಿ. ತಮ್ಮಣ್ಣ ಅವರು ಸ್ಮಾರಕ ಮಾಡಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ. ತಮ್ಮಣ್ಣನವರು ಸಹ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಅವರು ಮಾಡಿಸಿಕೊಡುತ್ತಾರೆ ಎಂಬ ನಂಬಿಕೆ ನನಗೆ ಇದೆ ಎಂದರು.

ಸಮಾಧಿಯ ಬಳಿ ಆಕ್ರಂದನ
ಯೋಧ ಎಚ್.ಗುರು ಅವರ ಸಮಾಧಿಯ ಬಳಿ ಪತ್ನಿ ಕಲಾವತಿ ಅವರು ಪೂಜೆ ಮಾಡುವ ಸಂದರ್ಭ ಬಿಕ್ಕಿಬಿಕ್ಕಿ ಅತ್ತು ಅಸ್ವಸ್ಥಗೊಂಡರು. ಅವರ ಬಂಧುಗಳು ಕುಡಿಯಲು ನೀರು ಕೊಟ್ಟು ಸಂತೈಸಿ, ಧೈರ್ಯ ತುಂಬಿದರು. ತದ ನಂತರ ಸಮಾಧಿಗೆ ಗಂಧದ ಕಡ್ಡಿ ಕರ್ಪೂರ ಹಚ್ಚಿ ಕೈ ಮುಗಿದು ಸಾಷ್ಟಾಂಗ ನಮಸ್ಕಾರ ಮಾಡಿದರು.

ಯೋಧನ ಸಮಾಧಿಯನ್ನು ಬಗೆಬಗೆಯ ಹೂಗಳಿಂದ ಅಲಂಕರಿಸಲಾಗಿತ್ತು. ಸಮಾದೀಯ ಮೇಲೆ ಹೂಗಳಿಂದಲೇ 'ವೀರಯೋಧ ಗುರು ಹೊನ್ನಯ್ಯ' ಎಂದು ಬರೆಯಲಾಗಿತ್ತು. ಕಲಾವತಿ ಅವರ ತಂದೆ ಶಿವಣ್ಣ, ತಾಯಿ ಜಯಮ್ಮ, ಸಹೋದರ ಅರವಿಂದ ಸೇರಿದಂತೆ  ಕುಟುಂಬ ವರ್ಗ, ಸ್ನೇಹಿತರು ಪಾಲ್ಗೊಂಡಿದ್ದರು. ಸಾರ್ವಜನಿಕರಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X