ಕೋಟ: ದೇವಸ್ಥಾನದ ಕೆರೆಯಲ್ಲಿ ಮುಳುಗಿ ಮೃತ್ಯು
ಕೋಟ, ಫೆ.16: ಚಿತ್ರಪಾಡಿ ಗ್ರಾಮದ ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನದ ಕೆರೆಯಲ್ಲಿ ಸ್ನಾನ ಮಾಡುತ್ತಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಫೆ.16ರಂದು ಬೆಳಗಿನ ಜಾವ 5.30ರ ಸುಮಾರಿಗೆ ನಡೆದಿದೆ.
ಮೃತರನ್ನು ಬೆಂಗಳೂರು ಪಿರ್ಲೋನಗರದ ಬಿದರಹಳ್ಳಿಯ ಲಕ್ಷ್ಮೀ ಹಾಗೂ ರಮೇಶ್ ಬಿ.ಎ. ದಂಪತಿಯ ಪುತ್ರ ಬಿ.ಆರ್.ಪವನ್ ಕುಮಾರ್(22) ಎಂದು ಗುರುತಿಸಲಾಗಿದೆ. ಇವರು ಊರಿನ ಸ್ನೇಹಿತರು ಹಾಗೂ ಸಂಬಂಧಿಕರೊಂದಿಗೆ ಮಿನಿ ಬಸ್ನಲ್ಲಿ ಪ್ರವಾಸಕ್ಕೆ ಬಂದಿದ್ದರು. ಸಾಲಿಗ್ರಾಮ ಬಂದ ಇವರು, ದೇವಸ್ಥಾನದ ಕೆರೆಯಲ್ಲಿ ಈಜಾಡುವಾಗ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃಪಟ್ಟಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story